<p><strong>ನಾಗ್ಪುರ:</strong> ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ಸಿಪಿ ನಾಯಕ ಧನಂಜಯ ಮುಂಡೆ ಅವರು ಮೊದಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಗೌರವ ಉಳಿಸಿಕೊಳ್ಳಬೇಕಿತ್ತು ಎಂದು ಸೋದರ ಸಂಬಂಧಿ, ಸಚಿವೆ ಪಂಕಜಾ ಮುಂಡೆ ಹೇಳಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಧನಂಜಯ ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದನ್ನು ನಾನು ಸ್ವಾಗತಿಸುತ್ತೇನೆ. ಅವರು (ಧನಂಜಯ ಮುಂಡೆ) ಈ ಹಿಂದೆಯೇ ರಾಜೀನಾಮೆ ನೀಡಿ ಗೌರವ ಉಳಿಸಿಕೊಳ್ಳಬೇಕಿತ್ತು’ ಎಂದು ಹೇಳಿದ್ದಾರೆ. </p><p>ಧನಂಜಯ ಮುಂಡೆ ನೀಡಿದ ಹೇಳಿಕೆಯ ಬಗ್ಗೆ ನನಗೆ ತಿಳಿದಿಲ್ಲ. ಯಾವುದೇ ವ್ಯಕ್ತಿಯು ತಮ್ಮ ಕುಟುಂಬದ ಸದಸ್ಯರೊಬ್ಬರು ಈ ರೀತಿಯ ದುಃಖವನ್ನು ಅನುಭವಿಸಲು ಬಯಸುವುದಿಲ್ಲ ಎಂದು ಪಂಕಜಾ ತಿಳಿಸಿದ್ದಾರೆ.</p><p>‘ಸಂತೋಷ್ ದೇಶಮುಖ್ ಕುಟುಂಬದ ನೋವಿಗೆ ಹೋಲಿಸಿದರೆ ರಾಜೀನಾಮೆ ನಿರ್ಧಾರ ಏನೂ ಅಲ್ಲ. ತಡವಾದರೂ ಅವರು (ಧನಂಜಯ ಮುಂಡೆ) ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ’ ಎಂದು ಪಂಕಜಾ ಹೇಳಿದ್ದಾರೆ. </p><p>2024ರ ಡಿಸೆಂಬರ್ 9ರಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಂತೋಷ್ ದೇಶಮುಖ್ ಅವರನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು.</p><p>ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತನ ಹೆಸರು ಕೇಳಿ ಬಂದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ಅವರು ಇಂದು (ಮಂಗಳವಾರ) ರಾಜೀನಾಮೆ ಸಲ್ಲಿಸಿದ್ದಾರೆ.</p><p>ದೇಶಮುಖ್ ಕೊಲೆ ಪ್ರಕರಣದಲ್ಲಿ ಧನಂಜಯ ಅವರ ಆಪ್ತ ವಾಲ್ಮಿಕ್ ಕರಾಡ್ ಅವರನ್ನು ಪ್ರಮುಖ ಆರೋಪಿ ಎಂದು ಸಿಐಡಿ ಹೆಸರಿಸಿತ್ತು. ಧನಂಜಯ ಅವರ ರಾಜೀನಾಮೆಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು, ಅದನ್ನು ರಾಜ್ಯಪಾಲರಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ.</p>.ರಾಜೀನಾಮೆ ಕೊಟ್ಟರೆ ಸಾಲದು, ಧನಂಜಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಜಾರಂಗೆ.ಮಹಾರಾಷ್ಟ್ರ | ಸರಪಂಚ್ ಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ.ಮಹಾರಾಷ್ಟ್ರ: ಸಚಿವ ಧನಂಜಯ ಮುಂಡೆ ರಾಜೀನಾಮೆ ಕೇಳಿದ ಸಿಎಂ ಫಡಣವೀಸ್.ಸರಪಂಚ್ ಹತ್ಯೆ: ಧನಂಜಯ ಮುಂಡೆ ಬಂಗಲೆಯಲ್ಲಿ ಸುಲಿಗೆ ಸಭೆ ನಡೆದಿತ್ತು; ಬಿಜೆಪಿ ಶಾಸಕ.ಮಹಾರಾಷ್ಟ್ರ | ರಾಜೀನಾಮೆಗೆ ಕಾರಣ ತಿಳಿಸಿದ ಧನಂಜಯ ಮುಂಡೆ.ಸರಪಂಚ್ ಹತ್ಯೆ ಪ್ರಕರಣ | ಆರೋಪಿ ವಾಲ್ಮೀಕ್ ಕರಾಡ್ ಬೆಂಬಲಿಗರ ವಿರುದ್ಧವೂ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ಸರಪಂಚ್ ಸಂತೋಷ್ ದೇಶಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್ಸಿಪಿ ನಾಯಕ ಧನಂಜಯ ಮುಂಡೆ ಅವರು ಮೊದಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಗೌರವ ಉಳಿಸಿಕೊಳ್ಳಬೇಕಿತ್ತು ಎಂದು ಸೋದರ ಸಂಬಂಧಿ, ಸಚಿವೆ ಪಂಕಜಾ ಮುಂಡೆ ಹೇಳಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಧನಂಜಯ ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದನ್ನು ನಾನು ಸ್ವಾಗತಿಸುತ್ತೇನೆ. ಅವರು (ಧನಂಜಯ ಮುಂಡೆ) ಈ ಹಿಂದೆಯೇ ರಾಜೀನಾಮೆ ನೀಡಿ ಗೌರವ ಉಳಿಸಿಕೊಳ್ಳಬೇಕಿತ್ತು’ ಎಂದು ಹೇಳಿದ್ದಾರೆ. </p><p>ಧನಂಜಯ ಮುಂಡೆ ನೀಡಿದ ಹೇಳಿಕೆಯ ಬಗ್ಗೆ ನನಗೆ ತಿಳಿದಿಲ್ಲ. ಯಾವುದೇ ವ್ಯಕ್ತಿಯು ತಮ್ಮ ಕುಟುಂಬದ ಸದಸ್ಯರೊಬ್ಬರು ಈ ರೀತಿಯ ದುಃಖವನ್ನು ಅನುಭವಿಸಲು ಬಯಸುವುದಿಲ್ಲ ಎಂದು ಪಂಕಜಾ ತಿಳಿಸಿದ್ದಾರೆ.</p><p>‘ಸಂತೋಷ್ ದೇಶಮುಖ್ ಕುಟುಂಬದ ನೋವಿಗೆ ಹೋಲಿಸಿದರೆ ರಾಜೀನಾಮೆ ನಿರ್ಧಾರ ಏನೂ ಅಲ್ಲ. ತಡವಾದರೂ ಅವರು (ಧನಂಜಯ ಮುಂಡೆ) ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ’ ಎಂದು ಪಂಕಜಾ ಹೇಳಿದ್ದಾರೆ. </p><p>2024ರ ಡಿಸೆಂಬರ್ 9ರಂದು ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಂತೋಷ್ ದೇಶಮುಖ್ ಅವರನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು.</p><p>ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತನ ಹೆಸರು ಕೇಳಿ ಬಂದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ಅವರು ಇಂದು (ಮಂಗಳವಾರ) ರಾಜೀನಾಮೆ ಸಲ್ಲಿಸಿದ್ದಾರೆ.</p><p>ದೇಶಮುಖ್ ಕೊಲೆ ಪ್ರಕರಣದಲ್ಲಿ ಧನಂಜಯ ಅವರ ಆಪ್ತ ವಾಲ್ಮಿಕ್ ಕರಾಡ್ ಅವರನ್ನು ಪ್ರಮುಖ ಆರೋಪಿ ಎಂದು ಸಿಐಡಿ ಹೆಸರಿಸಿತ್ತು. ಧನಂಜಯ ಅವರ ರಾಜೀನಾಮೆಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು, ಅದನ್ನು ರಾಜ್ಯಪಾಲರಿಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ.</p>.ರಾಜೀನಾಮೆ ಕೊಟ್ಟರೆ ಸಾಲದು, ಧನಂಜಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಜಾರಂಗೆ.ಮಹಾರಾಷ್ಟ್ರ | ಸರಪಂಚ್ ಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ.ಮಹಾರಾಷ್ಟ್ರ: ಸಚಿವ ಧನಂಜಯ ಮುಂಡೆ ರಾಜೀನಾಮೆ ಕೇಳಿದ ಸಿಎಂ ಫಡಣವೀಸ್.ಸರಪಂಚ್ ಹತ್ಯೆ: ಧನಂಜಯ ಮುಂಡೆ ಬಂಗಲೆಯಲ್ಲಿ ಸುಲಿಗೆ ಸಭೆ ನಡೆದಿತ್ತು; ಬಿಜೆಪಿ ಶಾಸಕ.ಮಹಾರಾಷ್ಟ್ರ | ರಾಜೀನಾಮೆಗೆ ಕಾರಣ ತಿಳಿಸಿದ ಧನಂಜಯ ಮುಂಡೆ.ಸರಪಂಚ್ ಹತ್ಯೆ ಪ್ರಕರಣ | ಆರೋಪಿ ವಾಲ್ಮೀಕ್ ಕರಾಡ್ ಬೆಂಬಲಿಗರ ವಿರುದ್ಧವೂ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>