<p><strong>ನವದೆಹಲಿ:</strong> ನಾವು ಈಗ ಎಲ್ಲರನ್ನೂ ವಾಸ ಮಾಡಲು ಚಂದ್ರನಲ್ಲಿಗೆ ಕಳಿಸಬೇಕಾ ಎಂದು ಶುಕ್ರವಾರ ಅರ್ಜಿಯೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. </p><p>ದೆಹಲಿ ಮಾತ್ರವಲ್ಲದೇ, ದೇಶದ ಶೇ 75ಕ್ಕಿಂತ ಅಧಿಕ ಜನರು ಹೆಚ್ಚಿನ ಭೂಕಂಪನ ವಲಯದಲ್ಲಿದ್ದಾರೆ. ಅವರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.</p><p>ಜಪಾನ್ನಲ್ಲಿ ಇತ್ತೀಚೆಗೆ ಜರುಗಿದ ಭೂಕಂಪದ ಉದಾಹರಣೆ ನೀಡಿ, ಭೂಕಂಪನದ ವೇಳೆಯಲ್ಲಿ ಹಾನಿಯನ್ನು ಕಡಿಮೆಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ ಎಂದು ಅರ್ಜಿದಾರ ಮನವಿ ಮಾಡಿದರು.</p><p>ಅರ್ಜಿ ವಿಚಾರಣೆ ಮಾಡಿದ ನ್ಯಾ. ವಿಕ್ರಮ್ ನಾಥ್ ಹಾಗೂ ನ್ಯಾ. ಸಂದೀಪ್ ಮೇಹ್ತಾ ಅವರ ಪೀಠವು ‘ಇದು ಸರ್ಕಾರದ ಕೆಲಸ, ನ್ಯಾಯಾಲಯದ ವ್ಯಾಪ್ತಿಯಲ್ಲಿ ಇದು ಬರುವುದಿಲ್ಲ’ ಎಂದು ಅರ್ಜಿಯನ್ನು ತಿರಸ್ಕರಿಸಿತು. </p><p>ಅರ್ಜಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಅರ್ಜಿದಾರ ನ್ಯಾಯಾಲಯಕ್ಕೆ ಸಾಬೀತುಪಡಿಸಿದರು.</p><p>ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠವು ಇವು ಮಾಧ್ಯಮಗಳ ವರದಿಯಾಗಿದ್ದು, ಇವುಗಳ ಕುರಿತು ನಾವು ತಲೆ ಕೆಡಿಸಿಕೊಳ್ಳಬೇಕಾಗಿಲ್ಲ ಎಂದು ಉತ್ತರಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಾವು ಈಗ ಎಲ್ಲರನ್ನೂ ವಾಸ ಮಾಡಲು ಚಂದ್ರನಲ್ಲಿಗೆ ಕಳಿಸಬೇಕಾ ಎಂದು ಶುಕ್ರವಾರ ಅರ್ಜಿಯೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. </p><p>ದೆಹಲಿ ಮಾತ್ರವಲ್ಲದೇ, ದೇಶದ ಶೇ 75ಕ್ಕಿಂತ ಅಧಿಕ ಜನರು ಹೆಚ್ಚಿನ ಭೂಕಂಪನ ವಲಯದಲ್ಲಿದ್ದಾರೆ. ಅವರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.</p><p>ಜಪಾನ್ನಲ್ಲಿ ಇತ್ತೀಚೆಗೆ ಜರುಗಿದ ಭೂಕಂಪದ ಉದಾಹರಣೆ ನೀಡಿ, ಭೂಕಂಪನದ ವೇಳೆಯಲ್ಲಿ ಹಾನಿಯನ್ನು ಕಡಿಮೆಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ ಎಂದು ಅರ್ಜಿದಾರ ಮನವಿ ಮಾಡಿದರು.</p><p>ಅರ್ಜಿ ವಿಚಾರಣೆ ಮಾಡಿದ ನ್ಯಾ. ವಿಕ್ರಮ್ ನಾಥ್ ಹಾಗೂ ನ್ಯಾ. ಸಂದೀಪ್ ಮೇಹ್ತಾ ಅವರ ಪೀಠವು ‘ಇದು ಸರ್ಕಾರದ ಕೆಲಸ, ನ್ಯಾಯಾಲಯದ ವ್ಯಾಪ್ತಿಯಲ್ಲಿ ಇದು ಬರುವುದಿಲ್ಲ’ ಎಂದು ಅರ್ಜಿಯನ್ನು ತಿರಸ್ಕರಿಸಿತು. </p><p>ಅರ್ಜಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಅರ್ಜಿದಾರ ನ್ಯಾಯಾಲಯಕ್ಕೆ ಸಾಬೀತುಪಡಿಸಿದರು.</p><p>ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠವು ಇವು ಮಾಧ್ಯಮಗಳ ವರದಿಯಾಗಿದ್ದು, ಇವುಗಳ ಕುರಿತು ನಾವು ತಲೆ ಕೆಡಿಸಿಕೊಳ್ಳಬೇಕಾಗಿಲ್ಲ ಎಂದು ಉತ್ತರಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>