ಬೆಂಗಳೂರು: ಆರ್ಎಸ್ಎಸ್ ಸಂಘಟನೆಯನ್ನು ತಾಲಿಬಾನ್ ಜತೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್ಗೆ ಥಾಣೆ ನ್ಯಾಯಾಲಯ ಶೋಕಾಸ್ ನೋಟಿಸ್ ನೀಡಿದೆ.
ಹೇಳಿಕೆ ಕುರಿತಂತೆ ಜಾವೇದ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದ್ದು, ಸೋಮವಾರ ನೋಟಿಸ್ ಜಾರಿ ಮಾಡಲಾಗಿದೆ.
ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ನ್ಯೂಸ್ ಚಾನಲ್ ಒಂದರ ಸಂದರ್ಶನದಲ್ಲಿ, ಬಲಪಂಥೀಯ ಆರ್ಎಸ್ಎಸ್ ಸಂಘಟನೆಯನ್ನು ತಾಲಿಬಾನ್ಗೆ ಹೋಲಿಸಿದ್ದರು.
ತಾಲಿಬಾನ್ ಇಸ್ಲಾಮಿಕ್ ರಾಷ್ಟ್ರ ಬಯಸಿದರೆ, ಇವರು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದಾರೆ ಎಂದು ಜಾವೇದ್ ಅಖ್ತರ್ ನೇರವಾಗಿ ಹೆಸರು ಹೇಳದೆ, ಪರೋಕ್ಷವಾಗಿ ಆರ್ಎಸ್ಎಸ್ ಸಂಘಟನೆಯನ್ನು ದೂಷಿಸಿದ್ದರು.