<p><strong>ಮುಂಬೈ:</strong> ಮುಂಬೈ ಸಮೀಪದ ವಸೈ ನಿವಾಸಿ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 'ಲವ್ ಜಿಹಾದ್' ಕೋನದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ ದೆಹಲಿ ಪೊಲೀಸರಿಗೆ ಬಿಜೆಪಿ ಶಾಸಕ ರಾಮ್ ಕದಮ್ ಮಂಗಳವಾರ ಪತ್ರ ಬರೆದಿದ್ದಾರೆ.</p>.<p>ಘಾಟ್ಕೋಪರ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ ಮುಂಬೈ ಶಾಸಕ ಕದಮ್ ಮತ್ತು ಅವರ ಬೆಂಬಲಿಗರು ಬಂಧಿತ ಕೊಲೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಶ್ರದ್ಧಾ ಕೊಲೆ ಪ್ರಕರಣವನ್ನು 'ಲವ್ ಜಿಹಾದ್' ಸಾಧ್ಯತೆಗಳು ಇರಬಹುದಾದ ಕೋನದಲ್ಲಿ ತನಿಖೆ ನಡೆಸುವಂತೆ ದೆಹಲಿ ಪೊಲೀಸರಿಗೆ ಪತ್ರ ಬರೆಯುತ್ತೇನೆ. ಈ ಕೃತ್ಯದ ಹಿಂದೆ ಯಾವುದಾದರೂ ಸಂಘಟನೆ ಅಥವಾ ಗುಂಪು ಇದೆಯೇ? ಶತ್ರು ರಾಷ್ಟ್ರದ ಪಾತ್ರವಿದೆಯೇ? ಇದನ್ನೆಲ್ಲ ತನಿಖೆ ನಡೆಸಬೇಕು ಎಂದು ರಾಮ್ ಕದಮ್ ಹೇಳಿದ್ದಾರೆ.</p>.<p>'ಲವ್ ಜಿಹಾದ್' ಎಂಬುದು ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ವಿವಾಹವಾಗುವ ಮೂಲಕ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಲು ಬಲಪಂಥೀಯ ಗುಂಪುಗಳು ಮತ್ತು ಹೋರಾಟಗಾರರು ಬಳಸುವ ಪದವಾಗಿದೆ.</p>.<p><a href="https://www.prajavani.net/india-news/shraddha-murder-case-in-delhi-aftab-installed-a-dating-app-while-shraddhas-body-parts-remained-in-988731.html" itemprop="url">ಪ್ರೇಯಸಿ ದೇಹದ ಭಾಗಗಳನ್ನು ಫ್ರಿಡ್ಜ್ನಲ್ಲಿಟ್ಟು ಮತ್ತೊಬ್ಬಳನ್ನು ಕರೆತಂದಿದ್ದ! </a></p>.<p>ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್ ಪ್ರೇಯಸಿ ಶ್ರದ್ಧಾಳ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್ನಲ್ಲಿಟ್ಟು, ನಗರದಾದ್ಯಂತ ಹಲವು ದಿನಗಳ ಕಾಲ ಎಸೆದಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮುಂಬೈ ಸಮೀಪದ ವಸೈ ನಿವಾಸಿ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 'ಲವ್ ಜಿಹಾದ್' ಕೋನದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ ದೆಹಲಿ ಪೊಲೀಸರಿಗೆ ಬಿಜೆಪಿ ಶಾಸಕ ರಾಮ್ ಕದಮ್ ಮಂಗಳವಾರ ಪತ್ರ ಬರೆದಿದ್ದಾರೆ.</p>.<p>ಘಾಟ್ಕೋಪರ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ ಮುಂಬೈ ಶಾಸಕ ಕದಮ್ ಮತ್ತು ಅವರ ಬೆಂಬಲಿಗರು ಬಂಧಿತ ಕೊಲೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಶ್ರದ್ಧಾ ಕೊಲೆ ಪ್ರಕರಣವನ್ನು 'ಲವ್ ಜಿಹಾದ್' ಸಾಧ್ಯತೆಗಳು ಇರಬಹುದಾದ ಕೋನದಲ್ಲಿ ತನಿಖೆ ನಡೆಸುವಂತೆ ದೆಹಲಿ ಪೊಲೀಸರಿಗೆ ಪತ್ರ ಬರೆಯುತ್ತೇನೆ. ಈ ಕೃತ್ಯದ ಹಿಂದೆ ಯಾವುದಾದರೂ ಸಂಘಟನೆ ಅಥವಾ ಗುಂಪು ಇದೆಯೇ? ಶತ್ರು ರಾಷ್ಟ್ರದ ಪಾತ್ರವಿದೆಯೇ? ಇದನ್ನೆಲ್ಲ ತನಿಖೆ ನಡೆಸಬೇಕು ಎಂದು ರಾಮ್ ಕದಮ್ ಹೇಳಿದ್ದಾರೆ.</p>.<p>'ಲವ್ ಜಿಹಾದ್' ಎಂಬುದು ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ವಿವಾಹವಾಗುವ ಮೂಲಕ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಲು ಬಲಪಂಥೀಯ ಗುಂಪುಗಳು ಮತ್ತು ಹೋರಾಟಗಾರರು ಬಳಸುವ ಪದವಾಗಿದೆ.</p>.<p><a href="https://www.prajavani.net/india-news/shraddha-murder-case-in-delhi-aftab-installed-a-dating-app-while-shraddhas-body-parts-remained-in-988731.html" itemprop="url">ಪ್ರೇಯಸಿ ದೇಹದ ಭಾಗಗಳನ್ನು ಫ್ರಿಡ್ಜ್ನಲ್ಲಿಟ್ಟು ಮತ್ತೊಬ್ಬಳನ್ನು ಕರೆತಂದಿದ್ದ! </a></p>.<p>ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್ ಪ್ರೇಯಸಿ ಶ್ರದ್ಧಾಳ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್ನಲ್ಲಿಟ್ಟು, ನಗರದಾದ್ಯಂತ ಹಲವು ದಿನಗಳ ಕಾಲ ಎಸೆದಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>