ನವದೆಹಲಿ: ‘ಕಳೆದ 29 ವರ್ಷದಿಂದ ಜೈಲಿನಲ್ಲಿಯೇ ಇದ್ದೇನೆ. ಒಂದು ದಿನವೂ ನನಗೆ ಪೆರೋಲ್ ನೀಡಿಲ್ಲ. ಆದರೆ, ರಾಜೀವ್ ಗಾಂಧಿ ಹಂತಕರಿಗೆ ಮಾತ್ರ ಹಲವು ಬಾರಿ ಪೆರೋಲ್ ನೀಡಲಾಗಿತ್ತು. ಈಗ ಅವರನ್ನು ಕಾರಾಗೃಹದಿಂದಲೂ ಬಿಡುಗಡೆ ಮಾಡಲಾಗಿದೆ. ನನ್ನ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ. ಆದ್ದರಿಂದ ಅವರಂತೆ ನನ್ನನ್ನು ಬಿಡುಗಡೆ ಮಾಡಿ’. – ತನ್ನ ಪತ್ನಿಯನ್ನು ಕೊಂದು 1994ರಿಂದ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಶ್ರದ್ಧಾನಂದ, ತನ್ನನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.