<p><strong>ಮಥುರಾ</strong>: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿಯ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು 4 ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶದ ಪ್ರತಿಯನ್ನು ಮಥುರಾ ನ್ಯಾಯಾಲಯಕ್ಕೆ ಮಂಗಳವಾರ ಸಲ್ಲಿಸಲಾಗಿದೆ.</p>.<p>ತಾತ್ಕಾಲಿಕ ತಡೆಯಾಜ್ಞೆ ಅರ್ಜಿಗಳು ಸೇರಿದಂತೆ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಬಾಕಿ ಪ್ರಕರಣಗಳನ್ನು ಒಟ್ಟಿಗೆ ಸೇರಿಸುವ ಮೂಲಕ ನಾಲ್ಕು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಕೆಳ ನ್ಯಾಯಾಲಯಕ್ಕೆ ಮೇ 12 ರಂದು ಅಲಹಾಬಾದ್ ಹೈಕೋರ್ಟ್ ನಿರ್ದೇಶಿಸಿತ್ತು.</p>.<p>ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದ ಪ್ರತಿಯನ್ನು ಮಥುರಾ ನ್ಯಾಯಾಲಯದ ನ್ಯಾಯಾಧೀಶರಿಗೆ ಮಂಗಳವಾರ ಸಲ್ಲಿಸಲಾಯಿತು ಎಂದು ಅರ್ಜಿದಾರರ ಪರ ವಕೀಲರೊಬ್ಬರು ತಿಳಿಸಿದ್ದಾರೆ.</p>.<p>ಬಳಿಕ, ಹೈಕೋರ್ಟ್ ಆದೇಶದ ಪ್ರತಿಯನ್ನು ಜುಲೈ 1ರ ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಸಿವಿಲ್ ನ್ಯಾಯಾಲಯದ ನ್ಯಾಯಾಧೀಸರು ತಿಳಿಸಿರುವುದಾಗಿ ಅರ್ಜಿದಾರ ಮನೀಶ್ ಯಾದವ್ ಪರ ವಕೀಲ ದೀಪಕ್ ಶರ್ಮಾ ಹೇಳಿದ್ದಾರೆ.</p>.<p>ತಾನು ಶ್ರೀಕೃಷ್ಣನ ವಂಶಸ್ಥನೆಂದು ಹೇಳಿಕೊಂಡ ಲಖನೌ ನಿವಾಸಿ ಮನೀಶ್ ಯಾದವ್, ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದೊಳಗಿನ ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಮಸೀದಿಯನ್ನು ಸ್ಥಳಾಂತರಿಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ತಮ್ಮ ಅರ್ಜಿ ಇತ್ಯರ್ಥಪಡಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮನೀಶ್ ಯಾದವ್ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಇದನ್ನೂ ಒದಿ..<a href="https://www.prajavani.net/india-news/lawsuit-seeking-shahi-idgahs-removal-mathura-court-fixes-july-20-as-next-date-of-hearing-938571.html" itemprop="url">ಶ್ರೀಕೃಷ್ಣ ಜನ್ಮಭೂಮಿಯಲ್ಲಿನ ಶಾಹಿ ಈದ್ಗಾ ಸ್ಥಳಾಂತರ ಅರ್ಜಿ ವಿಚಾರಣೆ ಜುಲೈ 20ಕ್ಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಥುರಾ</strong>: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿಯ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು 4 ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶದ ಪ್ರತಿಯನ್ನು ಮಥುರಾ ನ್ಯಾಯಾಲಯಕ್ಕೆ ಮಂಗಳವಾರ ಸಲ್ಲಿಸಲಾಗಿದೆ.</p>.<p>ತಾತ್ಕಾಲಿಕ ತಡೆಯಾಜ್ಞೆ ಅರ್ಜಿಗಳು ಸೇರಿದಂತೆ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಬಾಕಿ ಪ್ರಕರಣಗಳನ್ನು ಒಟ್ಟಿಗೆ ಸೇರಿಸುವ ಮೂಲಕ ನಾಲ್ಕು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಕೆಳ ನ್ಯಾಯಾಲಯಕ್ಕೆ ಮೇ 12 ರಂದು ಅಲಹಾಬಾದ್ ಹೈಕೋರ್ಟ್ ನಿರ್ದೇಶಿಸಿತ್ತು.</p>.<p>ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದ ಪ್ರತಿಯನ್ನು ಮಥುರಾ ನ್ಯಾಯಾಲಯದ ನ್ಯಾಯಾಧೀಶರಿಗೆ ಮಂಗಳವಾರ ಸಲ್ಲಿಸಲಾಯಿತು ಎಂದು ಅರ್ಜಿದಾರರ ಪರ ವಕೀಲರೊಬ್ಬರು ತಿಳಿಸಿದ್ದಾರೆ.</p>.<p>ಬಳಿಕ, ಹೈಕೋರ್ಟ್ ಆದೇಶದ ಪ್ರತಿಯನ್ನು ಜುಲೈ 1ರ ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಸಿವಿಲ್ ನ್ಯಾಯಾಲಯದ ನ್ಯಾಯಾಧೀಸರು ತಿಳಿಸಿರುವುದಾಗಿ ಅರ್ಜಿದಾರ ಮನೀಶ್ ಯಾದವ್ ಪರ ವಕೀಲ ದೀಪಕ್ ಶರ್ಮಾ ಹೇಳಿದ್ದಾರೆ.</p>.<p>ತಾನು ಶ್ರೀಕೃಷ್ಣನ ವಂಶಸ್ಥನೆಂದು ಹೇಳಿಕೊಂಡ ಲಖನೌ ನಿವಾಸಿ ಮನೀಶ್ ಯಾದವ್, ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದೊಳಗಿನ ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಮಸೀದಿಯನ್ನು ಸ್ಥಳಾಂತರಿಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ತಮ್ಮ ಅರ್ಜಿ ಇತ್ಯರ್ಥಪಡಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮನೀಶ್ ಯಾದವ್ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಇದನ್ನೂ ಒದಿ..<a href="https://www.prajavani.net/india-news/lawsuit-seeking-shahi-idgahs-removal-mathura-court-fixes-july-20-as-next-date-of-hearing-938571.html" itemprop="url">ಶ್ರೀಕೃಷ್ಣ ಜನ್ಮಭೂಮಿಯಲ್ಲಿನ ಶಾಹಿ ಈದ್ಗಾ ಸ್ಥಳಾಂತರ ಅರ್ಜಿ ವಿಚಾರಣೆ ಜುಲೈ 20ಕ್ಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>