<p><strong>ನವದೆಹಲಿ</strong>: ಆಕ್ಸಿಯಂ–4 ಮಿಷನ್ ಅಡಿ ವಿವಿಧ ಪ್ರಯೋಗಗಳನ್ನು ನಡೆಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ಐಎಸ್ಎಸ್) ತೆರಳಿರುವ ಭಾರತ ಮೂಲದ ಗಗನಯಾನಿ ಶುಭಾಂಶು ಶುಕ್ಲಾ, ಅಂತರಿಕ್ಷದಲ್ಲಿ ಹೆಸರುಕಾಳು ಮತ್ತು ಮೆಂತ್ಯ ಬೀಜಗಳನ್ನು ನೆಟ್ಟು ಮೊಳಕೆ ಹೊಡೆಸುವ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಈ ಸಂಬಂಧಿತ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.</p><p>ಿದು ಬೀಜಗಳ ಮೊಳಕೆಯೊಡೆಯುವಿಕೆ ಮತ್ತು ಸಸ್ಯ ಬೆಳವಣಿಗೆಗೆ ಸೂಕ್ಷ್ಮ ಗುರುತ್ವಾಕರ್ಷಣೆಯು ಹೇಗೆ ಪ್ರಭಾವ ಬೀರುತ್ತದೆ ಎಂಬುದರ ಕುರಿತಾದ ಅಧ್ಯಯನದ ಭಾಗವಾಗಿದೆ.</p><p>ಶುಕ್ಲಾ ಮತ್ತು ಅವರ ಸಹವರ್ತಿಗಳಾದ ಆಕ್ಸಿಯಂ-4 ಗಗನಯಾನಿಗಳು ಕಕ್ಷೆಯ ಪ್ರಯೋಗಾಲಯದಲ್ಲಿ 12 ದಿನಗಳನ್ನು ಕಳೆದಿದ್ದಾರೆ. ಫ್ಲಾರಿಡಾ ಕರಾವಳಿಯ ಹವಾಮಾನ ಪರಿಸ್ಥಿತಿಗಳ ಆಧಾರದ ಮೇಲೆ ಜುಲೈ 10ರ ನಂತರ ಯಾವುದೇ ದಿನ ಅವರು ಭೂಮಿಗೆ ಮರಳುವ ನಿರೀಕ್ಷೆಯಿದೆ.</p><p>ಬಾಹ್ಯಾಕಾಶ ನಿಲ್ದಾಣದಿಂದ ಆಕ್ಸಿಯಂ-4 ಮಿಷನ್ ನೌಕೆಯನ್ನು ವಾಪಸ್ ಕರೆಸಿಕೊಳ್ಳುವ ದಿನಾಂಕವನ್ನು ನಾಸಾ ಇನ್ನೂ ಘೋಷಿಸಿಲ್ಲ. </p><p>‘ನಾನು ಈಗ ಐಎಸ್ಎಸ್ ಕಕ್ಷೆಯಲ್ಲಿ ನಡೆಸುತ್ತಿರುವ ಅದ್ಭುತ ಸಂಶೋಧನೆಗಳಿಗೆ ಇಸ್ರೊ ದೇಶದಾದ್ಯಂತದ ಇರುವ ರಾಷ್ಟ್ರೀಯ ಸಂಸ್ಥೆಗಳ ಸಹಯೋಗದಲ್ಲಿ ನೆರವು ನೀಡಿದೆ. ಇದೊಂದು ರೋಮಾಂಚಲಕಾರಿ ಮತ್ತು ಸಂತೋಷಕರ ಸಂಗತಿಯಾಗಿದೆ’ಎಂದು ಬುಧವಾರ ಆಕ್ಸಿಯಂನ ವಿಜ್ಞಾನಿ ಲೂಸಿ ಲೋ ಅವರೊಂದಿಗಿನ ಸಂವಾದದಲ್ಲಿ ಶುಕ್ಲಾ ಹೇಳಿದ್ದಾರೆ. </p><p>ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೊಳಕೆ ಪ್ರಯೋಗಕ್ಕೆ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ರವಿಕುಮಾರ್ ಹೊಸಮನಿ ಮತ್ತು ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಸುಧೀರ್ ಸಿದ್ದಾಪುರರೆಡ್ಡಿ ಎಂಬ ಇಬ್ಬರು ವಿಜ್ಞಾನಿಗಳು ನೇತೃತ್ವ ವಹಿಸಿದ್ದಾರೆ.</p><p>ಭೂಮಿಗೆ ಹಿಂದಿರುಗಿದ ನಂತರ, ಬೀಜಗಳನ್ನು ಅವುಗಳ ತಳಿಶಾಸ್ತ್ರ, ಸೂಕ್ಷ್ಮಜೀವಿಯ ಪರಿಸರ ವ್ಯವಸ್ಥೆಗಳು ಮತ್ತು ಪೌಷ್ಟಿಕಾಂಶದ ಅಂಶಗಳಲ್ಲಿನ ಬದಲಾವಣೆಗಳನ್ನು ಪರೀಕ್ಷಿಸಲು ಹಲವಾರು ತಲೆಮಾರುಗಳವರೆಗೆ ಬೆಳೆಸಲಾಗುತ್ತದೆ ಎಂದು ಆಕ್ಸಿಯಂ ಸ್ಪೇಸ್ ಹೇಳಿಕೆ ತಿಳಿಸಿದೆ.</p><p>ಮತ್ತೊಂದು ಪ್ರಯೋಗದಲ್ಲಿ, ಶುಕ್ಲಾ ಸೂಕ್ಷ್ಮ ಪಾಚಿಗಳನ್ನು ಅಲ್ಲಿ ನೆಟ್ಟಿದ್ದು, ಇವುಗಳ ಆಹಾರ, ಆಮ್ಲಜನಕ ಮತ್ತು ಜೈವಿಕ ಇಂಧನಗಳನ್ನು ಉತ್ಪಾದಿಸುವ ಸಾಮರ್ಥ್ಯ ಪರೀಕ್ಷೆಗಾಗಿ ಈ ಪ್ರಯೋಗ ನಡೆಸಲಾಗುತ್ತಿದೆ. ಅವುಗಳ ಸ್ಥಿತಿಸ್ಥಾಪಕತ್ವ ಮತ್ತು ಬಹುಮುಖತೆಯು ದೀರ್ಘಾವಧಿಯ ಕಾರ್ಯಾಚರಣೆಗಳಲ್ಲಿ ನೆರವಾಗಲಿವೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಕ್ಸಿಯಂ–4 ಮಿಷನ್ ಅಡಿ ವಿವಿಧ ಪ್ರಯೋಗಗಳನ್ನು ನಡೆಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ಐಎಸ್ಎಸ್) ತೆರಳಿರುವ ಭಾರತ ಮೂಲದ ಗಗನಯಾನಿ ಶುಭಾಂಶು ಶುಕ್ಲಾ, ಅಂತರಿಕ್ಷದಲ್ಲಿ ಹೆಸರುಕಾಳು ಮತ್ತು ಮೆಂತ್ಯ ಬೀಜಗಳನ್ನು ನೆಟ್ಟು ಮೊಳಕೆ ಹೊಡೆಸುವ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಈ ಸಂಬಂಧಿತ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.</p><p>ಿದು ಬೀಜಗಳ ಮೊಳಕೆಯೊಡೆಯುವಿಕೆ ಮತ್ತು ಸಸ್ಯ ಬೆಳವಣಿಗೆಗೆ ಸೂಕ್ಷ್ಮ ಗುರುತ್ವಾಕರ್ಷಣೆಯು ಹೇಗೆ ಪ್ರಭಾವ ಬೀರುತ್ತದೆ ಎಂಬುದರ ಕುರಿತಾದ ಅಧ್ಯಯನದ ಭಾಗವಾಗಿದೆ.</p><p>ಶುಕ್ಲಾ ಮತ್ತು ಅವರ ಸಹವರ್ತಿಗಳಾದ ಆಕ್ಸಿಯಂ-4 ಗಗನಯಾನಿಗಳು ಕಕ್ಷೆಯ ಪ್ರಯೋಗಾಲಯದಲ್ಲಿ 12 ದಿನಗಳನ್ನು ಕಳೆದಿದ್ದಾರೆ. ಫ್ಲಾರಿಡಾ ಕರಾವಳಿಯ ಹವಾಮಾನ ಪರಿಸ್ಥಿತಿಗಳ ಆಧಾರದ ಮೇಲೆ ಜುಲೈ 10ರ ನಂತರ ಯಾವುದೇ ದಿನ ಅವರು ಭೂಮಿಗೆ ಮರಳುವ ನಿರೀಕ್ಷೆಯಿದೆ.</p><p>ಬಾಹ್ಯಾಕಾಶ ನಿಲ್ದಾಣದಿಂದ ಆಕ್ಸಿಯಂ-4 ಮಿಷನ್ ನೌಕೆಯನ್ನು ವಾಪಸ್ ಕರೆಸಿಕೊಳ್ಳುವ ದಿನಾಂಕವನ್ನು ನಾಸಾ ಇನ್ನೂ ಘೋಷಿಸಿಲ್ಲ. </p><p>‘ನಾನು ಈಗ ಐಎಸ್ಎಸ್ ಕಕ್ಷೆಯಲ್ಲಿ ನಡೆಸುತ್ತಿರುವ ಅದ್ಭುತ ಸಂಶೋಧನೆಗಳಿಗೆ ಇಸ್ರೊ ದೇಶದಾದ್ಯಂತದ ಇರುವ ರಾಷ್ಟ್ರೀಯ ಸಂಸ್ಥೆಗಳ ಸಹಯೋಗದಲ್ಲಿ ನೆರವು ನೀಡಿದೆ. ಇದೊಂದು ರೋಮಾಂಚಲಕಾರಿ ಮತ್ತು ಸಂತೋಷಕರ ಸಂಗತಿಯಾಗಿದೆ’ಎಂದು ಬುಧವಾರ ಆಕ್ಸಿಯಂನ ವಿಜ್ಞಾನಿ ಲೂಸಿ ಲೋ ಅವರೊಂದಿಗಿನ ಸಂವಾದದಲ್ಲಿ ಶುಕ್ಲಾ ಹೇಳಿದ್ದಾರೆ. </p><p>ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೊಳಕೆ ಪ್ರಯೋಗಕ್ಕೆ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ರವಿಕುಮಾರ್ ಹೊಸಮನಿ ಮತ್ತು ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಸುಧೀರ್ ಸಿದ್ದಾಪುರರೆಡ್ಡಿ ಎಂಬ ಇಬ್ಬರು ವಿಜ್ಞಾನಿಗಳು ನೇತೃತ್ವ ವಹಿಸಿದ್ದಾರೆ.</p><p>ಭೂಮಿಗೆ ಹಿಂದಿರುಗಿದ ನಂತರ, ಬೀಜಗಳನ್ನು ಅವುಗಳ ತಳಿಶಾಸ್ತ್ರ, ಸೂಕ್ಷ್ಮಜೀವಿಯ ಪರಿಸರ ವ್ಯವಸ್ಥೆಗಳು ಮತ್ತು ಪೌಷ್ಟಿಕಾಂಶದ ಅಂಶಗಳಲ್ಲಿನ ಬದಲಾವಣೆಗಳನ್ನು ಪರೀಕ್ಷಿಸಲು ಹಲವಾರು ತಲೆಮಾರುಗಳವರೆಗೆ ಬೆಳೆಸಲಾಗುತ್ತದೆ ಎಂದು ಆಕ್ಸಿಯಂ ಸ್ಪೇಸ್ ಹೇಳಿಕೆ ತಿಳಿಸಿದೆ.</p><p>ಮತ್ತೊಂದು ಪ್ರಯೋಗದಲ್ಲಿ, ಶುಕ್ಲಾ ಸೂಕ್ಷ್ಮ ಪಾಚಿಗಳನ್ನು ಅಲ್ಲಿ ನೆಟ್ಟಿದ್ದು, ಇವುಗಳ ಆಹಾರ, ಆಮ್ಲಜನಕ ಮತ್ತು ಜೈವಿಕ ಇಂಧನಗಳನ್ನು ಉತ್ಪಾದಿಸುವ ಸಾಮರ್ಥ್ಯ ಪರೀಕ್ಷೆಗಾಗಿ ಈ ಪ್ರಯೋಗ ನಡೆಸಲಾಗುತ್ತಿದೆ. ಅವುಗಳ ಸ್ಥಿತಿಸ್ಥಾಪಕತ್ವ ಮತ್ತು ಬಹುಮುಖತೆಯು ದೀರ್ಘಾವಧಿಯ ಕಾರ್ಯಾಚರಣೆಗಳಲ್ಲಿ ನೆರವಾಗಲಿವೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>