<p><strong>ಇಂಫಾಲ/ಚುರ್ಚಂದಪುರ:</strong> ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಇಂದಿಗೆ ಎರಡು ವರ್ಷ ತುಂಬಿದೆ. ಸಂಘರ್ಷದಲ್ಲಿ ಮಡಿದವರಿಗೆ ಶೋಕ ವ್ಯಕ್ತಪಡಿಸಿ ವಿವಿಧ ಸಂಘಟನೆಗಳು ಶನಿವಾರ ಮಣಿಪುರ ಬಂದ್ಗೆ ಕರೆ ನೀಡಿವೆ. ಇದರಿಂದ ಮೈತೇಯಿ ನಿಯಂತ್ರಿತ ಇಂಫಾಲ ಕಣಿವೆ ಮತ್ತು ಕುಕಿ ಪ್ರಾಬಲ್ಯದ ಬೆಟ್ಟದ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಮೈತೇಯಿ ಗುಂಪಿನ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (COCOMI) ಕಣಿವೆಯ ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಿದ್ದರೆ, ಜೋಮಿ ವಿದ್ಯಾರ್ಥಿ ಒಕ್ಕೂಟ (ZSF) ಮತ್ತು ಕುಕಿ ವಿದ್ಯಾರ್ಥಿ ಸಂಘಟನೆ (KSO) ಬೆಟ್ಟದ ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಿವೆ.</p>.ಮಣಿಪುರ ಜನಾಂಗೀಯ ಸಂಘರ್ಷ: ಗಸಗಸೆ ನಾಶಕ್ಕಿಳಿದ ಭದ್ರತಾ ಪಡೆ.<p>2023ರಲ್ಲಿ ಈ ದಿನದಂದು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ಭುಗಿಲೆದ್ದಿತ್ತು. ಸಂಘರ್ಷದಲ್ಲಿ 260ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 1,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 70 ಸಾವಿರಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ.</p>.<p>ಬಂದ್ ಹಿನ್ನೆಲೆ ರಾಜ್ಯದಾದ್ಯಂತ ಶಾಲಾ–ಕಾಲೇಜುಗಳು, ಕಚೇರಿಗಳು, ಮಾರುಕಟ್ಟೆಗಳು ಮುಚ್ಚಲ್ಪಟ್ಟಿವೆ. ಸರ್ಕಾರಿ ವಾಹನಗಳು ರಸ್ತೆಗಿಳಿದಿಲ್ಲ. ಕೆಲವು ಖಾಸಗಿ ವಾಹನಗಳು ಮಾತ್ರ ರಸ್ತೆಗಳಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದೆ.</p>.<p>ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪ್ರಮುಖ ಸ್ಥಳಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.Editorial| ಮಣಿಪುರ: ಬಿರೇನ್ ರಾಜೀನಾಮೆ; ಸಂಘರ್ಷ ಶಮನಕ್ಕೆ ಬೇಕಿದೆ ದೃಢ ಹೆಜ್ಜೆ.<p>ಇಂಫಾಲ್ನ ಖುಮಾನ್ ಲ್ಯಾಂಪಕ್ ಕ್ರೀಡಾಂಗಣದಲ್ಲಿ ಸಮಾವೇಶವನ್ನು ಆಯೋಜಿಸಲಿದ್ದು, ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮೈತೇಯಿ ಗುಂಪಿನ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ ಜನರಲ್ಲಿ ಮನವಿ ಮಾಡಿದೆ.</p>.<p>ಹಿಂಸಾಚಾರದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಂಫಾಲ್ನಲ್ಲಿ ಸಂಜೆ ಮೊಂಬತ್ತಿ ಮೆರವಣಿಗೆ ನಡೆಯಲಿದೆ.</p>.ಮಣಿಪುರ: ಸಂಘರ್ಷ ಮರೆತು ಗಾಯಗೊಂಡ ಮೈತೇಯಿ ಚಾಲಕನಿಗೆ ಸಹಾಯ ಮಾಡಿದ ಕುಕಿಗಳು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ/ಚುರ್ಚಂದಪುರ:</strong> ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಇಂದಿಗೆ ಎರಡು ವರ್ಷ ತುಂಬಿದೆ. ಸಂಘರ್ಷದಲ್ಲಿ ಮಡಿದವರಿಗೆ ಶೋಕ ವ್ಯಕ್ತಪಡಿಸಿ ವಿವಿಧ ಸಂಘಟನೆಗಳು ಶನಿವಾರ ಮಣಿಪುರ ಬಂದ್ಗೆ ಕರೆ ನೀಡಿವೆ. ಇದರಿಂದ ಮೈತೇಯಿ ನಿಯಂತ್ರಿತ ಇಂಫಾಲ ಕಣಿವೆ ಮತ್ತು ಕುಕಿ ಪ್ರಾಬಲ್ಯದ ಬೆಟ್ಟದ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಮೈತೇಯಿ ಗುಂಪಿನ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (COCOMI) ಕಣಿವೆಯ ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಿದ್ದರೆ, ಜೋಮಿ ವಿದ್ಯಾರ್ಥಿ ಒಕ್ಕೂಟ (ZSF) ಮತ್ತು ಕುಕಿ ವಿದ್ಯಾರ್ಥಿ ಸಂಘಟನೆ (KSO) ಬೆಟ್ಟದ ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಿವೆ.</p>.ಮಣಿಪುರ ಜನಾಂಗೀಯ ಸಂಘರ್ಷ: ಗಸಗಸೆ ನಾಶಕ್ಕಿಳಿದ ಭದ್ರತಾ ಪಡೆ.<p>2023ರಲ್ಲಿ ಈ ದಿನದಂದು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ಭುಗಿಲೆದ್ದಿತ್ತು. ಸಂಘರ್ಷದಲ್ಲಿ 260ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 1,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 70 ಸಾವಿರಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ.</p>.<p>ಬಂದ್ ಹಿನ್ನೆಲೆ ರಾಜ್ಯದಾದ್ಯಂತ ಶಾಲಾ–ಕಾಲೇಜುಗಳು, ಕಚೇರಿಗಳು, ಮಾರುಕಟ್ಟೆಗಳು ಮುಚ್ಚಲ್ಪಟ್ಟಿವೆ. ಸರ್ಕಾರಿ ವಾಹನಗಳು ರಸ್ತೆಗಿಳಿದಿಲ್ಲ. ಕೆಲವು ಖಾಸಗಿ ವಾಹನಗಳು ಮಾತ್ರ ರಸ್ತೆಗಳಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದೆ.</p>.<p>ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪ್ರಮುಖ ಸ್ಥಳಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.Editorial| ಮಣಿಪುರ: ಬಿರೇನ್ ರಾಜೀನಾಮೆ; ಸಂಘರ್ಷ ಶಮನಕ್ಕೆ ಬೇಕಿದೆ ದೃಢ ಹೆಜ್ಜೆ.<p>ಇಂಫಾಲ್ನ ಖುಮಾನ್ ಲ್ಯಾಂಪಕ್ ಕ್ರೀಡಾಂಗಣದಲ್ಲಿ ಸಮಾವೇಶವನ್ನು ಆಯೋಜಿಸಲಿದ್ದು, ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮೈತೇಯಿ ಗುಂಪಿನ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ ಜನರಲ್ಲಿ ಮನವಿ ಮಾಡಿದೆ.</p>.<p>ಹಿಂಸಾಚಾರದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಂಫಾಲ್ನಲ್ಲಿ ಸಂಜೆ ಮೊಂಬತ್ತಿ ಮೆರವಣಿಗೆ ನಡೆಯಲಿದೆ.</p>.ಮಣಿಪುರ: ಸಂಘರ್ಷ ಮರೆತು ಗಾಯಗೊಂಡ ಮೈತೇಯಿ ಚಾಲಕನಿಗೆ ಸಹಾಯ ಮಾಡಿದ ಕುಕಿಗಳು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>