ಬಂದ್ನಿಂದಾಗಿ ಶ್ರೀನಗರ ಸೇರಿದಂತೆ ಕಣಿವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಅಂಗಡಿಗಳು, ಪೆಟ್ರೋಲ್ ಬಂಕ್ಗಳು ಮತ್ತು ವ್ಯಾಪಾರ ಕೇಂದ್ರಗಳು ಸ್ಥಗಿತಗೊಂಡಿದ್ದವು. ಸಾರ್ವಜನಿಕ ಸಾರಿಗೆ ವಾಹನಗಳು ರಸ್ತೆಗಿಳಿಯಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದ್ ನಡುವೆಯೂ ನಗರದಲ್ಲಿ ಖಾಸಗಿ ಕಾರುಗಳು, ಆಟೋರಿಕ್ಷಾಗಳು ಮತ್ತು ಕ್ಯಾಬ್ಗಳು ಸಂಚರಿಸುತ್ತಿವೆ ಎಂದು ಅವರು ಹೇಳಿದರು.