<p><strong>ಜಮ್ಮು :</strong> ‘ಕಾಶ್ಮೀರ್ ಟೈಮ್ಸ್’ ಪತ್ರಿಕೆಯ ಕಚೇರಿ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ರಾಜ್ಯ ತನಿಖಾ ದಳವು (ಎಸ್ಐಎ) ಗುರುವಾರ ದಾಳಿ ನಡೆಸಿದೆ. </p>.<p>ದಾಳಿ ವೇಳೆ ಎಕೆ ರೈಫಲ್ ಮತ್ತು ಪಿಸ್ತೂಲ್ಗಳಲ್ಲಿ ಬಳಸುವ ಮದ್ದುಗುಂಡುಗಳು, ಗ್ರೆನೇಡ್ನ ಪಿನ್ಗಳು ಹಾಗೂ ಇತರ ವಸ್ತುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಕಚೇರಿ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಕಂಪ್ಯೂಟರ್ಗಳನ್ನು ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. </p>.<p>ದೇಶ ವಿರೋಧಿ ಚಟುವಟಿಕೆಗಳನ್ನು ಉತ್ತೇಜಿಸುತ್ತಿರುವ ಆರೋಪದ ಮೇಲೆ ಪತ್ರಿಕೆ ಹಾಗೂ ಅದರ ಮುಖ್ಯಸ್ಥರ ವಿರುದ್ಧ ಇತ್ತೀಚೆಗೆ ಪ್ರಕರಣ ದಾಖಲಾಗಿದೆ. ಪತ್ರಿಕೆಯ ಮುಖ್ಯಸ್ಥರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. </p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಸುರಿಂದರ್ ಸಿಂಗ್ ಚೌಧರಿ, ‘ತಪ್ಪು ನಡೆದಿರುವುದು ಸಾಬೀತಾದರೆ ಮಾತ್ರ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡದಿಂದ ಕ್ರಮ ತೆಗೆದುಕೊಳ್ಳಬಾರದು. ಪತ್ರಿಕೆಯಿಂದ ತಪ್ಪಾಗಿದ್ದಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು :</strong> ‘ಕಾಶ್ಮೀರ್ ಟೈಮ್ಸ್’ ಪತ್ರಿಕೆಯ ಕಚೇರಿ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ರಾಜ್ಯ ತನಿಖಾ ದಳವು (ಎಸ್ಐಎ) ಗುರುವಾರ ದಾಳಿ ನಡೆಸಿದೆ. </p>.<p>ದಾಳಿ ವೇಳೆ ಎಕೆ ರೈಫಲ್ ಮತ್ತು ಪಿಸ್ತೂಲ್ಗಳಲ್ಲಿ ಬಳಸುವ ಮದ್ದುಗುಂಡುಗಳು, ಗ್ರೆನೇಡ್ನ ಪಿನ್ಗಳು ಹಾಗೂ ಇತರ ವಸ್ತುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಕಚೇರಿ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಕಂಪ್ಯೂಟರ್ಗಳನ್ನು ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. </p>.<p>ದೇಶ ವಿರೋಧಿ ಚಟುವಟಿಕೆಗಳನ್ನು ಉತ್ತೇಜಿಸುತ್ತಿರುವ ಆರೋಪದ ಮೇಲೆ ಪತ್ರಿಕೆ ಹಾಗೂ ಅದರ ಮುಖ್ಯಸ್ಥರ ವಿರುದ್ಧ ಇತ್ತೀಚೆಗೆ ಪ್ರಕರಣ ದಾಖಲಾಗಿದೆ. ಪತ್ರಿಕೆಯ ಮುಖ್ಯಸ್ಥರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. </p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಸುರಿಂದರ್ ಸಿಂಗ್ ಚೌಧರಿ, ‘ತಪ್ಪು ನಡೆದಿರುವುದು ಸಾಬೀತಾದರೆ ಮಾತ್ರ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡದಿಂದ ಕ್ರಮ ತೆಗೆದುಕೊಳ್ಳಬಾರದು. ಪತ್ರಿಕೆಯಿಂದ ತಪ್ಪಾಗಿದ್ದಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>