ತೆಲಂಗಾಣ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಪ್ರಮಾಣವಚನ ಬೋಧಿಸುವ ಕಾರ್ಯಕ್ರಮದೊಂದಿಗೆ ವಿಧಾನಸಭೆಯ ಮೊದಲ ಅಧಿವೇಶನ ಶನಿವಾರ ಆರಂಭವಾಯಿತು. ಆದರೆ, ನಿಯಮಗಳನ್ನು ಉಲ್ಲಂಘಿಸಿ, ಎಐಎಂಐಎಂ ಶಾಸಕ ಒವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಶಾಸಕರು, ಕಲಾಪದಿಂದ ದೂರ ಉಳಿದಿದ್ದರು.