<p><strong>ನವದೆಹಲಿ:</strong> ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಮಂಗಳವಾರ ಭೇಟಿಯಾದರು.</p><p>ರಾಜ್ಯ ರಾಜಕಾರಣವು ಸದ್ಯ ರಾಷ್ಟ್ರ ರಾಜಧಾನಿಗೆ ವರ್ಗಾವಣೆಗೊಂಡಿದ್ದು, ಪ್ರಮುಖ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಸಚಿವ ಸ್ಥಾನಕ್ಕೆ ಲಾಬಿ ಜೋರಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬೆಂಬಲಿಗರು ಹೈಕಮಾಂಡ್ ಅನ್ನು ಭೇಟಿ ಮಾಡಿ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸುತ್ತಿದ್ದಾರೆ.</p><p>ನವದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ಸಿದ್ದರಾಮಯ್ಯ ಹಾಗೂ ಬೆಂಬಲಿಗರು ಬೀಡು ಬಿಟ್ಟಿದ್ದಾರೆ. ಹೋಟೆಲ್ನಿಂದ ಮಂಗಳವಾರ ಹೊರಗೆ ಹೊರಟ ಸಿದ್ದರಾಮಯ್ಯ ಹಾಗೂ ಹೋಟೆಲ್ ಪ್ರವೇಶಿಸುತ್ತಿದ್ದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮುಖಾಮುಖಿಯಾದರು.</p><p>ಉಭಯ ನಾಯಕರು ಪರಸ್ಪರ ಹಸ್ತಲಾಘವ ಮಾಡಿ ಕುಶಲೋಪರಿ ವಿಚಾರಿಸಿಕೊಂಡರು. ಕೆಲ ಕ್ಷಣಗಳ ವಿದ್ಯಮಾನದಲ್ಲಿ ಇಬ್ಬರು ನಾಯಕರು ಭೇಟಿಯಾದ ವಿಡಿಯೊವನ್ನು ಪಿಟಿಐ ಹಂಚಿಕೊಂಡಿದೆ.</p>.ಸಚಿವ ಸಂಪುಟ ರಚನೆ ಕಸರತ್ತು ಸೇರಿ ಈ ದಿನದ ಟಾಪ್ 10 ಸುದ್ದಿಗಳು.ದೇವೇಗೌಡರು ಪ್ರಧಾನಿಯಾಗಿ 30 ವರ್ಷ: ಹೇಗಿತ್ತು ಪ್ರಮಾಣವಚನ ಕಾರ್ಯಕ್ರಮ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಮಂಗಳವಾರ ಭೇಟಿಯಾದರು.</p><p>ರಾಜ್ಯ ರಾಜಕಾರಣವು ಸದ್ಯ ರಾಷ್ಟ್ರ ರಾಜಧಾನಿಗೆ ವರ್ಗಾವಣೆಗೊಂಡಿದ್ದು, ಪ್ರಮುಖ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಸಚಿವ ಸ್ಥಾನಕ್ಕೆ ಲಾಬಿ ಜೋರಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬೆಂಬಲಿಗರು ಹೈಕಮಾಂಡ್ ಅನ್ನು ಭೇಟಿ ಮಾಡಿ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸುತ್ತಿದ್ದಾರೆ.</p><p>ನವದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ಸಿದ್ದರಾಮಯ್ಯ ಹಾಗೂ ಬೆಂಬಲಿಗರು ಬೀಡು ಬಿಟ್ಟಿದ್ದಾರೆ. ಹೋಟೆಲ್ನಿಂದ ಮಂಗಳವಾರ ಹೊರಗೆ ಹೊರಟ ಸಿದ್ದರಾಮಯ್ಯ ಹಾಗೂ ಹೋಟೆಲ್ ಪ್ರವೇಶಿಸುತ್ತಿದ್ದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮುಖಾಮುಖಿಯಾದರು.</p><p>ಉಭಯ ನಾಯಕರು ಪರಸ್ಪರ ಹಸ್ತಲಾಘವ ಮಾಡಿ ಕುಶಲೋಪರಿ ವಿಚಾರಿಸಿಕೊಂಡರು. ಕೆಲ ಕ್ಷಣಗಳ ವಿದ್ಯಮಾನದಲ್ಲಿ ಇಬ್ಬರು ನಾಯಕರು ಭೇಟಿಯಾದ ವಿಡಿಯೊವನ್ನು ಪಿಟಿಐ ಹಂಚಿಕೊಂಡಿದೆ.</p>.ಸಚಿವ ಸಂಪುಟ ರಚನೆ ಕಸರತ್ತು ಸೇರಿ ಈ ದಿನದ ಟಾಪ್ 10 ಸುದ್ದಿಗಳು.ದೇವೇಗೌಡರು ಪ್ರಧಾನಿಯಾಗಿ 30 ವರ್ಷ: ಹೇಗಿತ್ತು ಪ್ರಮಾಣವಚನ ಕಾರ್ಯಕ್ರಮ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>