ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ, ಉತ್ತರ ಪ್ರದೇಶದ ಹಾಥರಸ್ನಲ್ಲಿ 20 ವರ್ಷದ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವರದಿಗೆ ತೆರಳಿದ್ದ ಸಿದ್ದೀಖ್ ಅವರನ್ನು ಪೊಲೀಸರು ಬಂಧಿಸಿದ್ದರು. ಅಶಾಂತಿ ಉಂಟು ಮಾಡಲು ಅವರು ಸ್ಥಳಕ್ಕೆ ತೆರಳುತ್ತಿದ್ದಾರೆ ಎನ್ನುವ ಕಾರಣ ನೀಡಿ ಬಂಧನಕ್ಕೊಳಪಡಿಸಿದ್ದರು. 2020ರ ಅಕ್ಟೋಬರ್ನಲ್ಲಿ ಈ ಘಟನೆ ನಡೆದಿತ್ತು.