<p><strong>ಚಂಡೀಗಢ</strong>: ಪಂಜಾಬ್ ವಿಧಾನಸಭೆಗೆ 2027ರಲ್ಲಿ ನಡೆಯುವ ಚುನಾವಣೆಯಲ್ಲಿ ಮಾನ್ಸಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಯಕೆ ಇದೆ ಎಂದು 2022ರಲ್ಲಿ ಹತ್ಯೆಯಾದ ಗಾಯಕ ಸಿಧು ಮೂಸೆವಾಲಾ ಅವರ ತಂದೆ ಬಲಕೌರ್ ಸಿಂಗ್ ಹೇಳಿಕೊಂಡಿದ್ದಾರೆ.</p><p>ಮೂಸೆವಾಲಾ ಅವರು 2022ರಲ್ಲಿ ಮಾನ್ಸಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎಎಪಿ ಅಭ್ಯರ್ಥಿ ಎದುರು ಸೋಲು ಕಂಡಿದ್ದರು.</p><p>ಮಾನ್ಸಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಸಿಂಗ್, ಮಗನನ್ನು ಕಳೆದುಕೊಂಡ ತಮಗೆ ಮಾನ್ಸಾ ಜನರೇ ಶಕ್ತಿ ತುಂಬಿದರು. ತಮ್ಮ ಕುಟುಂಬದ ಬೆಂಬಲಕ್ಕೆ ನಿಂತರು ಎಂದಿದ್ದಾರೆ.</p><p>'ನಾವು ಚುನಾವಣೆಯಲ್ಲಿ ಹೋರಾಡುತ್ತೇವೆ. ಅದಕ್ಕೆ ನಿಮ್ಮ ಸಹಕಾರ ಬೇಕಿದೆ' ಎಂದು ಕೋರಿರುವ ಅವರು, 'ನೀವೇ ನನ್ನ ಶಕ್ತಿ' ಎಂದು ಹೇಳಿದ್ದಾರೆ.</p><p>'ವಿಧಾನಸಭೆ ಪ್ರವೇಶಿಸಬೇಕು ಎಂಬುದು ನನ್ನ ಮಗನ ಬಯಕೆಯಾಗಿತ್ತು. ಆದರೆ, ಅದು ಈಡೇರಲಿಲ್ಲ. ನಾನು ಚುನಾವಣೆಯಲ್ಲಿ ಗೆದ್ದು, ಮಗನ ಭಾವಚಿತ್ರವನ್ನು ವಿಧಾನಸಭೆಗೆ ತೆಗೆದುಕೊಂಡು ಹೋಗಿ, ಆ ಆಸೆಯನ್ನು ಈಡೇರಿಸುತ್ತೇನೆ' ಎಂದು ಸಿಂಗ್ ತಿಳಿಸಿದ್ದಾರೆ.</p><p>ಸಿಧು ಮೂಸೆವಾಲಾ ಎಂದೇ ಜನಪ್ರಿಯರಾಗಿದ್ದ ಶುಭದೀಪ್ ಸಿಂಗ್ ಸಿಧು ಅವರನ್ನು 2022ರ ಮೇ 29ರಂದು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಪಂಜಾಬ್ ವಿಧಾನಸಭೆಗೆ 2027ರಲ್ಲಿ ನಡೆಯುವ ಚುನಾವಣೆಯಲ್ಲಿ ಮಾನ್ಸಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಯಕೆ ಇದೆ ಎಂದು 2022ರಲ್ಲಿ ಹತ್ಯೆಯಾದ ಗಾಯಕ ಸಿಧು ಮೂಸೆವಾಲಾ ಅವರ ತಂದೆ ಬಲಕೌರ್ ಸಿಂಗ್ ಹೇಳಿಕೊಂಡಿದ್ದಾರೆ.</p><p>ಮೂಸೆವಾಲಾ ಅವರು 2022ರಲ್ಲಿ ಮಾನ್ಸಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎಎಪಿ ಅಭ್ಯರ್ಥಿ ಎದುರು ಸೋಲು ಕಂಡಿದ್ದರು.</p><p>ಮಾನ್ಸಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಸಿಂಗ್, ಮಗನನ್ನು ಕಳೆದುಕೊಂಡ ತಮಗೆ ಮಾನ್ಸಾ ಜನರೇ ಶಕ್ತಿ ತುಂಬಿದರು. ತಮ್ಮ ಕುಟುಂಬದ ಬೆಂಬಲಕ್ಕೆ ನಿಂತರು ಎಂದಿದ್ದಾರೆ.</p><p>'ನಾವು ಚುನಾವಣೆಯಲ್ಲಿ ಹೋರಾಡುತ್ತೇವೆ. ಅದಕ್ಕೆ ನಿಮ್ಮ ಸಹಕಾರ ಬೇಕಿದೆ' ಎಂದು ಕೋರಿರುವ ಅವರು, 'ನೀವೇ ನನ್ನ ಶಕ್ತಿ' ಎಂದು ಹೇಳಿದ್ದಾರೆ.</p><p>'ವಿಧಾನಸಭೆ ಪ್ರವೇಶಿಸಬೇಕು ಎಂಬುದು ನನ್ನ ಮಗನ ಬಯಕೆಯಾಗಿತ್ತು. ಆದರೆ, ಅದು ಈಡೇರಲಿಲ್ಲ. ನಾನು ಚುನಾವಣೆಯಲ್ಲಿ ಗೆದ್ದು, ಮಗನ ಭಾವಚಿತ್ರವನ್ನು ವಿಧಾನಸಭೆಗೆ ತೆಗೆದುಕೊಂಡು ಹೋಗಿ, ಆ ಆಸೆಯನ್ನು ಈಡೇರಿಸುತ್ತೇನೆ' ಎಂದು ಸಿಂಗ್ ತಿಳಿಸಿದ್ದಾರೆ.</p><p>ಸಿಧು ಮೂಸೆವಾಲಾ ಎಂದೇ ಜನಪ್ರಿಯರಾಗಿದ್ದ ಶುಭದೀಪ್ ಸಿಂಗ್ ಸಿಧು ಅವರನ್ನು 2022ರ ಮೇ 29ರಂದು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>