ಗಡಿ ಭದ್ರತಾ ಪಡೆ (ಬಿಎಸ್ಎಫ್) ವ್ಯಾಪ್ತಿಯನ್ನು ವಿಸ್ತರಿಸುವ ಮೂಲಕ ‘ಪಂಜಾಬ್ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಡೆಗಣಿಸಲಾಗಿದೆ’ ಎಂದು ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದರು. ಇದೇವೇಳೆ, ರಾಜ್ಯದಲ್ಲಿ ಚಿತ್ರಹಿಂಸೆ, ಸುಳ್ಳು ಪ್ರಕರಣಗಳು, ಅನಿಯಂತ್ರಿತ ಮತ್ತು ಕಾನೂನುಬಾಹಿರ ಬಂಧನಗಳ ಭಯವನ್ನು ವ್ಯಕ್ತಪಡಿಸಿದರು.