<p><strong>ಫ್ರೀಟೌನ್, ಸಿಯಾರಾ ಲಿಯೊನ್:</strong> ‘ಭಯೋತ್ಪಾದನೆಯನ್ನು ಮಟ್ಟಹಾಕುವ ಭಾರತದ ಹೋರಾಟಕ್ಕೆ ಬಲವಾದ ಬೆಂಬಲ ನೀಡಲಾಗುತ್ತದೆ. ಈ ವಿಚಾರದಲ್ಲಿ ಆಫ್ರಿಕಾ ರಾಷ್ಟ್ರಗಳು ಏಕತೆ ಪ್ರದರ್ಶಿಸಬೇಕಿದ್ದು, ಯಾವುದೇ ಕ್ರಮ ಕೈಗೊಳ್ಳದಿದ್ದರೆ ದೇಶಕ್ಕೆ ಅಪಾಯ ತಂದೊಡ್ಡಬಹುದು’ ಎಂದು ಸಿಯಾರಾ ಲಿಯೋನ್ನ ರಕ್ಷಣಾ ಖಾತೆ ಸಹಾಯಕ ಸಚಿವ ಮುವಾನಾ ಬ್ರಿಮಾ ತಿಳಿಸಿದ್ದಾರೆ.</p>.<p>ಪಹಲ್ಗಾಮ್ ದಾಳಿ ಬಳಿಕ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಬೆಂಬಲ ಪಡೆಯುವ ನಿಟ್ಟಿನಲ್ಲಿ ಮೇ 28ರಿಂದ 30ರವರೆಗೆ ಶಿವಸೇನಾ ಸಂಸದ ಶ್ರೀಕಾಂತ್ ಏಕನಾಥ ಶಿಂದೆ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಲ್ಲಿಗೆ ಭೇಟಿ ನೀಡಿದ ಚರ್ಚಿಸಿದ ವೇಳೆ ಈ ವಿಷಯ ಪ್ರಸ್ತಾಪಿಸಿದ್ದಾರೆ.</p>.<p>ಭಯೋತ್ಪಾದನೆಯಿಂದ ಎದುರಾಗಿರುವ ಅಪಾಯಗಳ ಕುರಿತು ಜಾಗೃತಿ ಹಾಗೂ ಅಂತರರಾಷ್ಟ್ರೀಯ ಬೆಂಬಲ ವ್ಯಕ್ತಪಡಿಸುವ ನಿಟ್ಟಿನಲ್ಲಿ ನಿಯೋಗವು ಭೇಟಿ ನೀಡಿದೆ.</p>.<p>‘ಭಯೋತ್ಪಾದನೆ ವಿಚಾರದಲ್ಲಿ ಭಾರತವು ಶೂನ್ಯ ಸಹಿಷ್ಣುತೆಯನ್ನು ಹೊಂದಿದ್ದು, ಈ ವಿಚಾರದಲ್ಲಿ ಜಾಗತಿಕವಾಗಿ ಏಕತೆ ಪ್ರದರ್ಶಿಬೇಕಾದ ಅಗತ್ಯವಿದೆ ಎಂದು ಸಿಯಾರಾ ಲಿಯೋನ್ತಿಳಿಸಿದೆ’ ಎಂದು ಫ್ರೀಟೌನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಇಲ್ಲಿನ ಸಂಸತ್ನ ಸ್ಪೀಕರ್, ಸಂಸತ್ ಸದಸ್ಯರು, ವಿದೇಶಾಂಗ ಸಚಿವರು, ಭದ್ರತಾ ಸಲಹೆಗಾರರು ಹಾಗೂ ಉಪಾಧ್ಯಕ್ಷರ ಜೊತೆಗೆ ನಿಯೋಗವು ಮಾತುಕತೆ ನಡೆಸಿತು. ಈ ವೇಳೆಮ ಪಹಲ್ಗಾಮ್ ದಾಳಿಯನ್ನು ಬಲವಾಗಿ ಖಂಡಿಸಿದ ಸಿಯಾರಾ ಲಿಯೊನ್, ದಾಳಿಯಲ್ಲಿ ಮಡಿದ ಸಂತ್ರಸ್ತರ ಪರ ಸಂತಾಪ ಸಲ್ಲಿಸಿದೆ ಎಂದು ತಿಳಿಸಿದೆ.</p>.<p><strong>ಲಾಟ್ವಿಯಾ ಬೆಂಬಲ:</strong> ‘ಎಲ್ಲ ಮಾದರಿಯ ಭಯೋತ್ಪಾದನೆಯನ್ನು ನಿಸ್ಸಂದಿಗ್ದವಾಗಿ ದೇಶವು ವಿರೋಧಿಸಲಿದ್ದು, ಹಿಂದೂ ಮಹಾಸಾಗರ– ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಗೆ ಭಾರತವು ಪ್ರಮುಖ ಪಾತ್ರ ವಹಿಸಲಿದೆ’ ಎಂದು ಲಾಟ್ವಿಯಾ ವಿದೇಶಾಂಗ ಕಾರ್ಯದರ್ಶಿ ಎಂದ್ಜೆಸಿಸ್ ವಿಲಮ್ಸನ್ಸ್ ತಿಳಿಸಿದ್ದಾರೆ. </p>.<p>ಡಿಎಂಕೆ ಸಂಸದೆ ಕನಿಮೋಳಿ ಕರುಣಾನಿಧಿ ನೇತೃತ್ವದ ತಂಡವು ಇಲ್ಲಿನ ರಿಗಾ ಪಟ್ಟಣಕ್ಕೆ ಭೇಟಿ ನೀಡಿ, ಚರ್ಚಿಸಿದ ವೇಳೆ ಈ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫ್ರೀಟೌನ್, ಸಿಯಾರಾ ಲಿಯೊನ್:</strong> ‘ಭಯೋತ್ಪಾದನೆಯನ್ನು ಮಟ್ಟಹಾಕುವ ಭಾರತದ ಹೋರಾಟಕ್ಕೆ ಬಲವಾದ ಬೆಂಬಲ ನೀಡಲಾಗುತ್ತದೆ. ಈ ವಿಚಾರದಲ್ಲಿ ಆಫ್ರಿಕಾ ರಾಷ್ಟ್ರಗಳು ಏಕತೆ ಪ್ರದರ್ಶಿಸಬೇಕಿದ್ದು, ಯಾವುದೇ ಕ್ರಮ ಕೈಗೊಳ್ಳದಿದ್ದರೆ ದೇಶಕ್ಕೆ ಅಪಾಯ ತಂದೊಡ್ಡಬಹುದು’ ಎಂದು ಸಿಯಾರಾ ಲಿಯೋನ್ನ ರಕ್ಷಣಾ ಖಾತೆ ಸಹಾಯಕ ಸಚಿವ ಮುವಾನಾ ಬ್ರಿಮಾ ತಿಳಿಸಿದ್ದಾರೆ.</p>.<p>ಪಹಲ್ಗಾಮ್ ದಾಳಿ ಬಳಿಕ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಬೆಂಬಲ ಪಡೆಯುವ ನಿಟ್ಟಿನಲ್ಲಿ ಮೇ 28ರಿಂದ 30ರವರೆಗೆ ಶಿವಸೇನಾ ಸಂಸದ ಶ್ರೀಕಾಂತ್ ಏಕನಾಥ ಶಿಂದೆ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಲ್ಲಿಗೆ ಭೇಟಿ ನೀಡಿದ ಚರ್ಚಿಸಿದ ವೇಳೆ ಈ ವಿಷಯ ಪ್ರಸ್ತಾಪಿಸಿದ್ದಾರೆ.</p>.<p>ಭಯೋತ್ಪಾದನೆಯಿಂದ ಎದುರಾಗಿರುವ ಅಪಾಯಗಳ ಕುರಿತು ಜಾಗೃತಿ ಹಾಗೂ ಅಂತರರಾಷ್ಟ್ರೀಯ ಬೆಂಬಲ ವ್ಯಕ್ತಪಡಿಸುವ ನಿಟ್ಟಿನಲ್ಲಿ ನಿಯೋಗವು ಭೇಟಿ ನೀಡಿದೆ.</p>.<p>‘ಭಯೋತ್ಪಾದನೆ ವಿಚಾರದಲ್ಲಿ ಭಾರತವು ಶೂನ್ಯ ಸಹಿಷ್ಣುತೆಯನ್ನು ಹೊಂದಿದ್ದು, ಈ ವಿಚಾರದಲ್ಲಿ ಜಾಗತಿಕವಾಗಿ ಏಕತೆ ಪ್ರದರ್ಶಿಬೇಕಾದ ಅಗತ್ಯವಿದೆ ಎಂದು ಸಿಯಾರಾ ಲಿಯೋನ್ತಿಳಿಸಿದೆ’ ಎಂದು ಫ್ರೀಟೌನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಇಲ್ಲಿನ ಸಂಸತ್ನ ಸ್ಪೀಕರ್, ಸಂಸತ್ ಸದಸ್ಯರು, ವಿದೇಶಾಂಗ ಸಚಿವರು, ಭದ್ರತಾ ಸಲಹೆಗಾರರು ಹಾಗೂ ಉಪಾಧ್ಯಕ್ಷರ ಜೊತೆಗೆ ನಿಯೋಗವು ಮಾತುಕತೆ ನಡೆಸಿತು. ಈ ವೇಳೆಮ ಪಹಲ್ಗಾಮ್ ದಾಳಿಯನ್ನು ಬಲವಾಗಿ ಖಂಡಿಸಿದ ಸಿಯಾರಾ ಲಿಯೊನ್, ದಾಳಿಯಲ್ಲಿ ಮಡಿದ ಸಂತ್ರಸ್ತರ ಪರ ಸಂತಾಪ ಸಲ್ಲಿಸಿದೆ ಎಂದು ತಿಳಿಸಿದೆ.</p>.<p><strong>ಲಾಟ್ವಿಯಾ ಬೆಂಬಲ:</strong> ‘ಎಲ್ಲ ಮಾದರಿಯ ಭಯೋತ್ಪಾದನೆಯನ್ನು ನಿಸ್ಸಂದಿಗ್ದವಾಗಿ ದೇಶವು ವಿರೋಧಿಸಲಿದ್ದು, ಹಿಂದೂ ಮಹಾಸಾಗರ– ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಗೆ ಭಾರತವು ಪ್ರಮುಖ ಪಾತ್ರ ವಹಿಸಲಿದೆ’ ಎಂದು ಲಾಟ್ವಿಯಾ ವಿದೇಶಾಂಗ ಕಾರ್ಯದರ್ಶಿ ಎಂದ್ಜೆಸಿಸ್ ವಿಲಮ್ಸನ್ಸ್ ತಿಳಿಸಿದ್ದಾರೆ. </p>.<p>ಡಿಎಂಕೆ ಸಂಸದೆ ಕನಿಮೋಳಿ ಕರುಣಾನಿಧಿ ನೇತೃತ್ವದ ತಂಡವು ಇಲ್ಲಿನ ರಿಗಾ ಪಟ್ಟಣಕ್ಕೆ ಭೇಟಿ ನೀಡಿ, ಚರ್ಚಿಸಿದ ವೇಳೆ ಈ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>