<p><strong>ನವದೆಹಲಿ:</strong> ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಡಚ್ ಪ್ರಜೆ, ಬ್ರಿಟನ್ ನಿವಾಸಿಯಾಗಿರುವ 23 ವರ್ಷದ ಸಿಖ್ ಯುವಕ ಮನಿಂದರ್ಜಿತ್ ಸಿಂಗ್ನನ್ನು ಬಂಧಿಸಲಾಗಿದೆ.</p>.<p>ಈತ ಫೋರ್ಜರಿ ಮಾಡಿದ ದಾಖಲೆಗಳೊಂದಿಗೆ ದೇಶದಿಂದ ಪರಾರಿಯಾಗಲು ಯತ್ನಿಸಿದ್ದ. ಆರೋಪಿಗಳ ಸೆರೆಗಾಗಿ ದೆಹಲಿ ಅಪರಾಧ ದಳದ ಪೊಲೀಸರು ಪಂಜಾಬ್ನ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದರು ಎಂದು ಡಿಸಿಪಿ ಮೋನಿಕಾ ಭಾರದ್ವಾಜ್ ಬುಧವಾರ ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/india-summons-uk-envoy-over-unwarranted-discussion-on-farm-laws-812066.html" itemprop="url">ಕೃಷಿ ಕಾಯ್ದೆ ಕುರಿತು ಚರ್ಚೆ: ಬ್ರಿಟನ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ</a></p>.<p>ಗಲಭೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಮತ್ತೊಬ್ಬ ಯುವಕ, ಖೇಮ್ಪ್ರೀತ್ ಸಿಂಗ್ ಎಂಬಾತನನ್ನೂ ಮಂಗಳವಾರ ಬಂಧಿಸಲಾಗಿತ್ತು.</p>.<p>ಜನವರಿ 26ರಂದು ಪ್ರತಿಭಟನಾಕಾರರು ಕೆಂಪುಕೋಟೆ ಬಳಿ ಈಟಿಗಳನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಮನಿಂದರ್ಜಿತ್ ಸಿಂಗ್ ಕೂಡ ಕಾಣಿಸಿಕೊಂಡಿದ್ದಾನೆ. ಎಲೆಕ್ಟ್ರಾನಿಕ್ ಪುರಾವೆಯಿಂದ ಈ ವಿಚಾರ ತಿಳಿದುಬಂದಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.</p>.<p>ಆರೋಪಿಗಳು ಕೆಂಪುಕೋಟೆ ತಲುಪುವ ಮಾರ್ಗವನ್ನು ತಿಳಿಯಲು ಎಲೆಕ್ಟ್ರಾನಿಕ್ ನಕಾಶೆ ತಯಾರಿಸಿದ್ದರು ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಸಿಂಘು ಗಡಿಯಿಂದ ಸಂಜಯ್ ಗಾಂಧಿ ಟ್ರಾನ್ಸ್ಪೋರ್ಟ್ ನಗರ, ಬುರಾರಿ, ಮಂಜು ಕಾ ತಿಲ ಮಾರ್ಗವಾಗಿ ಕೆಂಪುಕೋಟೆ ತಲುಪಿದ್ದರು ಎಂದೂ ಅವರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/rakesh-tikait-to-address-farmers-rally-in-ups-ballia-tomorrow-811932.html" itemprop="url">ಸಿಕಂದರ್ಪುರ: ರೈತರ ರ್ಯಾಲಿ ಉದ್ದೇಶಿಸಿ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಭಾಷಣ</a></p>.<p>ಆರೋಪಿಗಳು ಹಲವು ಬಾರಿ ಪ್ರತಿಭಟನಾ ಸ್ಥಳವಾದ ಸಿಂಘು ಗಡಿಗೆ ಭೇಟಿ ನೀಡಿದ್ದ ವಿಚಾರವೂ ಎಲೆಕ್ಟ್ರಾನಿಕ್ ಪುರಾವೆಗಳಿಂದ ತಿಳಿದುಬಂದಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.</p>.<p>ಆರೋಪಿಯು ತಾನು ಜರ್ಮನ್ಜೀತ್ ಸಿಂಗ್ ಎಂದು ಹೇಳಿಕೊಂಡು ಫೋರ್ಜರಿ ದಾಖಲೆಗಳೊಂದಿಗೆ ದೇಶಬಿಟ್ಟು ಪರಾರಿಯಾಗಲು ಯತ್ನಿಸಿದ್ದ. ಆತನ ವಿರುದ್ಧ ಲುಕ್ಔಟ್ ಕಾರ್ನರ್ ನೋಟಿಸ್ ಸಹ ಹೊರಡಿಸಲಾಗಿದೆ. ಮೊದಲು ನೇಪಾಳಕ್ಕೆ ತೆರಳಿ ಅಲ್ಲಿಂದ ಬ್ರಿಟನ್ಗೆ ಪ್ರಯಾಣಿಸಲು ಆತ ಯೋಜನೆ ರೂಪಿಸಿದ್ದ ಎಂದು ಅವರು ತಿಳಿಸಿದ್ದಾರೆ.</p>.<p>ಮನಿಂದರ್ಜಿತ್ ಭಾರತದಲ್ಲಿ ಜನಿಸಿದ್ದ. ಆದರೆ ಆತನ ತಂದೆ ಡಚ್ ಪ್ರಜೆ. ಹೀಗಾಗಿ ಆತ ಡಚ್ ಪೌರತ್ವ ಹೊಂದಿದ್ದಾನೆ. ಸದ್ಯ ಆತನ ಕುಟುಂಬ ಬ್ರಿಟನ್ನ ಬರ್ಮಿಂಗ್ಹ್ಯಾಂನಲ್ಲಿ ನೆಲೆಸಿದ್ದು, ಈತ ಅಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ.</p>.<p><strong>ಓದಿ:</strong><a href="https://www.prajavani.net/world-news/greta-thunbergs-comments-on-farmers-protests-not-bilateral-issue-between-india-sweden-mea-810951.html" itemprop="url">ಗ್ರೆಟಾ ಹೇಳಿಕೆ | ಭಾರತ-ಸ್ವೀಡನ್ ಬಾಂಧವ್ಯಕ್ಕೆ ಧಕ್ಕೆಯಿಲ್ಲ: ವಿದೇಶಾಂಗ ಸಚಿವಾಲಯ</a></p>.<p>2019ರ ಡಿಸೆಂಬರ್ನಲ್ಲಿ ಭಾರತಕ್ಕೆ ಬಂದಿದ್ದ ಮನಿಂದರ್ಜಿತ್ ಕೋವಿಡ್–19 ಲಾಕ್ಡೌನ್ನಿಂದಾಗಿ ವಾಪಸ್ ತೆರಳಲು ಸಾಧ್ಯವಾಗಿರಲಿಲ್ಲ.</p>.<p>ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಡಚ್ ಪ್ರಜೆ, ಬ್ರಿಟನ್ ನಿವಾಸಿಯಾಗಿರುವ 23 ವರ್ಷದ ಸಿಖ್ ಯುವಕ ಮನಿಂದರ್ಜಿತ್ ಸಿಂಗ್ನನ್ನು ಬಂಧಿಸಲಾಗಿದೆ.</p>.<p>ಈತ ಫೋರ್ಜರಿ ಮಾಡಿದ ದಾಖಲೆಗಳೊಂದಿಗೆ ದೇಶದಿಂದ ಪರಾರಿಯಾಗಲು ಯತ್ನಿಸಿದ್ದ. ಆರೋಪಿಗಳ ಸೆರೆಗಾಗಿ ದೆಹಲಿ ಅಪರಾಧ ದಳದ ಪೊಲೀಸರು ಪಂಜಾಬ್ನ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದರು ಎಂದು ಡಿಸಿಪಿ ಮೋನಿಕಾ ಭಾರದ್ವಾಜ್ ಬುಧವಾರ ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/india-summons-uk-envoy-over-unwarranted-discussion-on-farm-laws-812066.html" itemprop="url">ಕೃಷಿ ಕಾಯ್ದೆ ಕುರಿತು ಚರ್ಚೆ: ಬ್ರಿಟನ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ</a></p>.<p>ಗಲಭೆ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಮತ್ತೊಬ್ಬ ಯುವಕ, ಖೇಮ್ಪ್ರೀತ್ ಸಿಂಗ್ ಎಂಬಾತನನ್ನೂ ಮಂಗಳವಾರ ಬಂಧಿಸಲಾಗಿತ್ತು.</p>.<p>ಜನವರಿ 26ರಂದು ಪ್ರತಿಭಟನಾಕಾರರು ಕೆಂಪುಕೋಟೆ ಬಳಿ ಈಟಿಗಳನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಮನಿಂದರ್ಜಿತ್ ಸಿಂಗ್ ಕೂಡ ಕಾಣಿಸಿಕೊಂಡಿದ್ದಾನೆ. ಎಲೆಕ್ಟ್ರಾನಿಕ್ ಪುರಾವೆಯಿಂದ ಈ ವಿಚಾರ ತಿಳಿದುಬಂದಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.</p>.<p>ಆರೋಪಿಗಳು ಕೆಂಪುಕೋಟೆ ತಲುಪುವ ಮಾರ್ಗವನ್ನು ತಿಳಿಯಲು ಎಲೆಕ್ಟ್ರಾನಿಕ್ ನಕಾಶೆ ತಯಾರಿಸಿದ್ದರು ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಸಿಂಘು ಗಡಿಯಿಂದ ಸಂಜಯ್ ಗಾಂಧಿ ಟ್ರಾನ್ಸ್ಪೋರ್ಟ್ ನಗರ, ಬುರಾರಿ, ಮಂಜು ಕಾ ತಿಲ ಮಾರ್ಗವಾಗಿ ಕೆಂಪುಕೋಟೆ ತಲುಪಿದ್ದರು ಎಂದೂ ಅವರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/rakesh-tikait-to-address-farmers-rally-in-ups-ballia-tomorrow-811932.html" itemprop="url">ಸಿಕಂದರ್ಪುರ: ರೈತರ ರ್ಯಾಲಿ ಉದ್ದೇಶಿಸಿ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಭಾಷಣ</a></p>.<p>ಆರೋಪಿಗಳು ಹಲವು ಬಾರಿ ಪ್ರತಿಭಟನಾ ಸ್ಥಳವಾದ ಸಿಂಘು ಗಡಿಗೆ ಭೇಟಿ ನೀಡಿದ್ದ ವಿಚಾರವೂ ಎಲೆಕ್ಟ್ರಾನಿಕ್ ಪುರಾವೆಗಳಿಂದ ತಿಳಿದುಬಂದಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.</p>.<p>ಆರೋಪಿಯು ತಾನು ಜರ್ಮನ್ಜೀತ್ ಸಿಂಗ್ ಎಂದು ಹೇಳಿಕೊಂಡು ಫೋರ್ಜರಿ ದಾಖಲೆಗಳೊಂದಿಗೆ ದೇಶಬಿಟ್ಟು ಪರಾರಿಯಾಗಲು ಯತ್ನಿಸಿದ್ದ. ಆತನ ವಿರುದ್ಧ ಲುಕ್ಔಟ್ ಕಾರ್ನರ್ ನೋಟಿಸ್ ಸಹ ಹೊರಡಿಸಲಾಗಿದೆ. ಮೊದಲು ನೇಪಾಳಕ್ಕೆ ತೆರಳಿ ಅಲ್ಲಿಂದ ಬ್ರಿಟನ್ಗೆ ಪ್ರಯಾಣಿಸಲು ಆತ ಯೋಜನೆ ರೂಪಿಸಿದ್ದ ಎಂದು ಅವರು ತಿಳಿಸಿದ್ದಾರೆ.</p>.<p>ಮನಿಂದರ್ಜಿತ್ ಭಾರತದಲ್ಲಿ ಜನಿಸಿದ್ದ. ಆದರೆ ಆತನ ತಂದೆ ಡಚ್ ಪ್ರಜೆ. ಹೀಗಾಗಿ ಆತ ಡಚ್ ಪೌರತ್ವ ಹೊಂದಿದ್ದಾನೆ. ಸದ್ಯ ಆತನ ಕುಟುಂಬ ಬ್ರಿಟನ್ನ ಬರ್ಮಿಂಗ್ಹ್ಯಾಂನಲ್ಲಿ ನೆಲೆಸಿದ್ದು, ಈತ ಅಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ.</p>.<p><strong>ಓದಿ:</strong><a href="https://www.prajavani.net/world-news/greta-thunbergs-comments-on-farmers-protests-not-bilateral-issue-between-india-sweden-mea-810951.html" itemprop="url">ಗ್ರೆಟಾ ಹೇಳಿಕೆ | ಭಾರತ-ಸ್ವೀಡನ್ ಬಾಂಧವ್ಯಕ್ಕೆ ಧಕ್ಕೆಯಿಲ್ಲ: ವಿದೇಶಾಂಗ ಸಚಿವಾಲಯ</a></p>.<p>2019ರ ಡಿಸೆಂಬರ್ನಲ್ಲಿ ಭಾರತಕ್ಕೆ ಬಂದಿದ್ದ ಮನಿಂದರ್ಜಿತ್ ಕೋವಿಡ್–19 ಲಾಕ್ಡೌನ್ನಿಂದಾಗಿ ವಾಪಸ್ ತೆರಳಲು ಸಾಧ್ಯವಾಗಿರಲಿಲ್ಲ.</p>.<p>ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>