<p><strong>ಗ್ಯಾಂಗ್ಟಾಕ್</strong>: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಬುಧವಾರ ಸಿಕ್ಕಿಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಲಾಯಿತು. </p><p>ಸಿಕ್ಕಿಂ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ಕೇಂದ್ರ ಸರ್ಕಾರದ ‘ಉಲ್ಲಾಸ್’ ಉಪಕ್ರಮದ ಅಡಿಯಲ್ಲಿ ಈ ಘೋಷಣೆ ಮಾಡಿದರು.</p><p>‘ಉಲ್ಲಾಸ್, ನವ ಭಾರತ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ನಮ್ಮ ರಾಜ್ಯವನ್ನು ಅಧಿಕೃತವಾಗಿ ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿರುವ ಈ ಐತಿಹಾಸಿಕ ಕ್ಷಣದಲ್ಲಿ ಸಿಕ್ಕಿಂ ಜನತೆಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ತಮಾಂಗ್ ತಿಳಿಸಿದ್ದಾರೆ.</p><p>‘ಎಲ್ಲಾ ವಯೋಮಾನದ ಕಲಿಯುವವರ ಉತ್ಸಾಹ ಮತ್ತು ಪರಿಶ್ರಮದಿಂದಾಗಿ ಈ ಸಾಧನೆ ಸಾಧ್ಯವಾಗಿದೆ, ಅವರಲ್ಲಿ ಅನೇಕರು ತಮ್ಮ ಜೀವನದಲ್ಲಿ ಮೊದಲ ಬಾರಿಗೆ ಓದಲು ಮತ್ತು ಬರೆಯಲು ಕಲಿತಿದ್ದಾರೆ’ ಎಂದು ಹೇಳಿದ್ದಾರೆ.</p><p>‘ಅವರ ದೃಢಸಂಕಲ್ಪವು 'ಸಾಕ್ಷರ ಸಿಕ್ಕಿಂ'ನ ನಿಜವಾದ ಮನೋಭಾವವನ್ನು ಒಳಗೊಂಡಿದೆ ಮತ್ತು ಮುಂದಿನ ಪೀಳಿಗೆಗೆ ಭರವಸೆ ಹಾಗೂ ಸ್ಫೂರ್ತಿಯ ದೀಪವಾಗಿ ಕಾರ್ಯನಿರ್ವಹಿಸುತ್ತದೆ’ ಎಂದು ತಿಳಿಸಿದ್ದಾರೆ.</p><p>ಸಾಕ್ಷರತಾ ಅಭಿಯಾನದೊಂದಿಗೆ ಕೈಜೋಡಿಸಿದ ಶಿಕ್ಷಣ ಇಲಾಖೆ, ಸ್ವಯಂಸೇವಕ ಶಿಕ್ಷಕರು, ಶಿಕ್ಷಣ ತಜ್ಞರು, ಸಂಯೋಜಕರು ಮತ್ತು ಅಧಿಕಾರಿಗಳಿಗೆ ಮುಖ್ಯಮಂತ್ರಿ ತಮಾಂಗ್ ಕೃತಜ್ಞತೆ ಸಲ್ಲಿಸಿದ್ದಾರೆ.</p><p>ರಾಜ್ಯ ಸರ್ಕಾರ ಮತ್ತು ಸಿಕ್ಕಿಂ ಜನತೆಯನ್ನು ಅಭಿನಂದಿಸಿದ ಮುರ್ಮು, ಈ ಸಾಧನೆಯು ಶಿಕ್ಷಣದ ಮೂಲಕ ಅಂತರ್ಗತ ಅಭಿವೃದ್ಧಿ ಮತ್ತು ಸಾಮಾಜಿಕ ಸಬಲೀಕರಣದತ್ತ ಇಟ್ಟ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಬಣ್ಣಿಸಿದ್ದಾರೆ.</p><p>ಮಿಜೋರಾಂ, ಗೋವಾ, ತ್ರಿಪುರ ಮತ್ತು ಹಿಮಾಚಲ ಪ್ರದೇಶ ಈಗಾಗಲೇ ಸಂಪೂರ್ಣ ಸಾಕ್ಷರ ರಾಜ್ಯಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ಯಾಂಗ್ಟಾಕ್</strong>: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಬುಧವಾರ ಸಿಕ್ಕಿಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಲಾಯಿತು. </p><p>ಸಿಕ್ಕಿಂ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ಕೇಂದ್ರ ಸರ್ಕಾರದ ‘ಉಲ್ಲಾಸ್’ ಉಪಕ್ರಮದ ಅಡಿಯಲ್ಲಿ ಈ ಘೋಷಣೆ ಮಾಡಿದರು.</p><p>‘ಉಲ್ಲಾಸ್, ನವ ಭಾರತ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ನಮ್ಮ ರಾಜ್ಯವನ್ನು ಅಧಿಕೃತವಾಗಿ ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿರುವ ಈ ಐತಿಹಾಸಿಕ ಕ್ಷಣದಲ್ಲಿ ಸಿಕ್ಕಿಂ ಜನತೆಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ತಮಾಂಗ್ ತಿಳಿಸಿದ್ದಾರೆ.</p><p>‘ಎಲ್ಲಾ ವಯೋಮಾನದ ಕಲಿಯುವವರ ಉತ್ಸಾಹ ಮತ್ತು ಪರಿಶ್ರಮದಿಂದಾಗಿ ಈ ಸಾಧನೆ ಸಾಧ್ಯವಾಗಿದೆ, ಅವರಲ್ಲಿ ಅನೇಕರು ತಮ್ಮ ಜೀವನದಲ್ಲಿ ಮೊದಲ ಬಾರಿಗೆ ಓದಲು ಮತ್ತು ಬರೆಯಲು ಕಲಿತಿದ್ದಾರೆ’ ಎಂದು ಹೇಳಿದ್ದಾರೆ.</p><p>‘ಅವರ ದೃಢಸಂಕಲ್ಪವು 'ಸಾಕ್ಷರ ಸಿಕ್ಕಿಂ'ನ ನಿಜವಾದ ಮನೋಭಾವವನ್ನು ಒಳಗೊಂಡಿದೆ ಮತ್ತು ಮುಂದಿನ ಪೀಳಿಗೆಗೆ ಭರವಸೆ ಹಾಗೂ ಸ್ಫೂರ್ತಿಯ ದೀಪವಾಗಿ ಕಾರ್ಯನಿರ್ವಹಿಸುತ್ತದೆ’ ಎಂದು ತಿಳಿಸಿದ್ದಾರೆ.</p><p>ಸಾಕ್ಷರತಾ ಅಭಿಯಾನದೊಂದಿಗೆ ಕೈಜೋಡಿಸಿದ ಶಿಕ್ಷಣ ಇಲಾಖೆ, ಸ್ವಯಂಸೇವಕ ಶಿಕ್ಷಕರು, ಶಿಕ್ಷಣ ತಜ್ಞರು, ಸಂಯೋಜಕರು ಮತ್ತು ಅಧಿಕಾರಿಗಳಿಗೆ ಮುಖ್ಯಮಂತ್ರಿ ತಮಾಂಗ್ ಕೃತಜ್ಞತೆ ಸಲ್ಲಿಸಿದ್ದಾರೆ.</p><p>ರಾಜ್ಯ ಸರ್ಕಾರ ಮತ್ತು ಸಿಕ್ಕಿಂ ಜನತೆಯನ್ನು ಅಭಿನಂದಿಸಿದ ಮುರ್ಮು, ಈ ಸಾಧನೆಯು ಶಿಕ್ಷಣದ ಮೂಲಕ ಅಂತರ್ಗತ ಅಭಿವೃದ್ಧಿ ಮತ್ತು ಸಾಮಾಜಿಕ ಸಬಲೀಕರಣದತ್ತ ಇಟ್ಟ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಬಣ್ಣಿಸಿದ್ದಾರೆ.</p><p>ಮಿಜೋರಾಂ, ಗೋವಾ, ತ್ರಿಪುರ ಮತ್ತು ಹಿಮಾಚಲ ಪ್ರದೇಶ ಈಗಾಗಲೇ ಸಂಪೂರ್ಣ ಸಾಕ್ಷರ ರಾಜ್ಯಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>