<p><strong>ಗ್ಯಾಂಗ್ಟಕ್</strong> <strong>(ಸಿಕ್ಕಿಂ)</strong>: ಭೂಕುಸಿತ ಸಂಭವಿಸಿದ ಲಾಚುಂಗ್ನಲ್ಲಿ ಹವಾಮಾನ ಸುಧಾರಿಸಿದ ಹಿನ್ನೆಲೆಯಲ್ಲಿ ಗುರುವಾರ ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಿದ್ದು, 59 ಪ್ರವಾಸಿಗರನ್ನು ಏರ್ಲಿಫ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಾನುವಾರ ಸಂಭವಿಸಿದ ಭೂಕುಸಿತದಲ್ಲಿ 109 ಜನ ಪ್ರವಾಸಿಗರು ಸಿಲುಕಿದ್ದರು. ಸೇನಾಶಿಬಿರದ ಬಳಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಸಿಬ್ಬಂದಿ ಮೃತಪಟ್ಟಿದ್ದರು. ಸೇನಾ ಪಡೆ ನಿರಂತರ ರಕ್ಷಣಾ ಕಾರ್ಯಾಚರಣೆ ನಡೆಸಿತ್ತು.</p><p>ಎರಡು MI-17V5 ಹೆಲಿಕಾಪ್ಟರ್ ಮೂಲಕ ಪ್ರವಾಸಿಗರನ್ನು ಏರ್ಲಿಫ್ಟ್ ಮಾಡಲಾಗಿದ್ದು, ಗ್ಯಾಂಗ್ಟಕ್ನ ಪಾಕ್ಯಾಂಗ್ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಒಂದು ಹೆಲಿಕಾಪ್ಟರ್ನಲ್ಲಿ 39 ಮತ್ತು ಇನ್ನೊಂದರಲ್ಲಿ 20 ಪ್ರವಾಸಿಗರನ್ನು ಕರೆತರಲಾಗಿದೆ. ಪ್ರವಾಸಿಗರಲ್ಲಿ ಇಬ್ಬರು ವಿದೇಶಿ ಪ್ರಜೆಗಳಿದ್ದಾರೆ</p><p>ಮರಳಿ ಕರೆತರಲಾದ ಪ್ರವಾಸಿಗರಿಗೆ ಉಳಿದುಕೊಳ್ಳಲು ಹೊಟೆಲ್ ಮತ್ತು ಸೇನಾ ಶಿಬಿರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಪ್ರವಾಸಿಗರು ತಮ್ಮ ಊರುಗಳಿಗೆ ತೆರಳು ಬಸ್ ಮತ್ತು ಹೆಲಿಕಾಪ್ಟರ್ ನಿಯೋಜಿಸಲಾಗಿದೆ. ಮೂರು ದಿನಗಳಿಂದ 1,678 ಪ್ರವಾಸಿಗರನ್ನು ರಕ್ಷಿಸಲಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.ಸಿಕ್ಕಿಂ ಭೂಕುಸಿತ: ಜಲವಿದ್ಯುತ್ ಸ್ಥಾವರಕ್ಕೆ ಹಾನಿ .ಸೇನಾ ಶಿಬಿರದ ಮೇಲೆ ಭೂಕುಸಿತ: 3 ಸೇನಾ ಸಿಬ್ಬಂದಿ ಮೃತ, 6 ಸೈನಿಕರು ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ಯಾಂಗ್ಟಕ್</strong> <strong>(ಸಿಕ್ಕಿಂ)</strong>: ಭೂಕುಸಿತ ಸಂಭವಿಸಿದ ಲಾಚುಂಗ್ನಲ್ಲಿ ಹವಾಮಾನ ಸುಧಾರಿಸಿದ ಹಿನ್ನೆಲೆಯಲ್ಲಿ ಗುರುವಾರ ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಿದ್ದು, 59 ಪ್ರವಾಸಿಗರನ್ನು ಏರ್ಲಿಫ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಭಾನುವಾರ ಸಂಭವಿಸಿದ ಭೂಕುಸಿತದಲ್ಲಿ 109 ಜನ ಪ್ರವಾಸಿಗರು ಸಿಲುಕಿದ್ದರು. ಸೇನಾಶಿಬಿರದ ಬಳಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಸಿಬ್ಬಂದಿ ಮೃತಪಟ್ಟಿದ್ದರು. ಸೇನಾ ಪಡೆ ನಿರಂತರ ರಕ್ಷಣಾ ಕಾರ್ಯಾಚರಣೆ ನಡೆಸಿತ್ತು.</p><p>ಎರಡು MI-17V5 ಹೆಲಿಕಾಪ್ಟರ್ ಮೂಲಕ ಪ್ರವಾಸಿಗರನ್ನು ಏರ್ಲಿಫ್ಟ್ ಮಾಡಲಾಗಿದ್ದು, ಗ್ಯಾಂಗ್ಟಕ್ನ ಪಾಕ್ಯಾಂಗ್ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಒಂದು ಹೆಲಿಕಾಪ್ಟರ್ನಲ್ಲಿ 39 ಮತ್ತು ಇನ್ನೊಂದರಲ್ಲಿ 20 ಪ್ರವಾಸಿಗರನ್ನು ಕರೆತರಲಾಗಿದೆ. ಪ್ರವಾಸಿಗರಲ್ಲಿ ಇಬ್ಬರು ವಿದೇಶಿ ಪ್ರಜೆಗಳಿದ್ದಾರೆ</p><p>ಮರಳಿ ಕರೆತರಲಾದ ಪ್ರವಾಸಿಗರಿಗೆ ಉಳಿದುಕೊಳ್ಳಲು ಹೊಟೆಲ್ ಮತ್ತು ಸೇನಾ ಶಿಬಿರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಪ್ರವಾಸಿಗರು ತಮ್ಮ ಊರುಗಳಿಗೆ ತೆರಳು ಬಸ್ ಮತ್ತು ಹೆಲಿಕಾಪ್ಟರ್ ನಿಯೋಜಿಸಲಾಗಿದೆ. ಮೂರು ದಿನಗಳಿಂದ 1,678 ಪ್ರವಾಸಿಗರನ್ನು ರಕ್ಷಿಸಲಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.ಸಿಕ್ಕಿಂ ಭೂಕುಸಿತ: ಜಲವಿದ್ಯುತ್ ಸ್ಥಾವರಕ್ಕೆ ಹಾನಿ .ಸೇನಾ ಶಿಬಿರದ ಮೇಲೆ ಭೂಕುಸಿತ: 3 ಸೇನಾ ಸಿಬ್ಬಂದಿ ಮೃತ, 6 ಸೈನಿಕರು ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>