<p><strong>ಗ್ಯಾಂಗ್ಟಕ್</strong>: ಸಿಕ್ಕಿಂನ ಗ್ಯಾಂಗ್ಟಕ್ ಜಿಲ್ಲೆಯ ರಾಣಿಪೂಲ್ ಬಳಿ ಹಾಲಿನ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಶನಿವಾರ ರಾತ್ರಿ ಹಾಲಿನ ಟ್ಯಾಂಕರ್ ಜನ ಸಂದಣಿ ಪ್ರದೇಶದತ್ತ ವೇಗವಾಗಿ ಬಂದ ಪರಿಣಾಮ ಈ ಅಪಘಾತ ಸಂಭವಿಸಿದೆ. ರಾಣಿಪೂಲ್ ಮೈದಾನದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ವೇಳೆ ಜಮಾಯಿಸಿದ್ದ ಜನರ ಮೇಲೆ ಟ್ಯಾಂಕರ್ ಹರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಇಬ್ಬರು ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಯಗೊಂಡವರ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.</p><p>ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ರಾಣಿಪೂಲ್ನಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಸಿಎಂ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ಯಾಂಗ್ಟಕ್</strong>: ಸಿಕ್ಕಿಂನ ಗ್ಯಾಂಗ್ಟಕ್ ಜಿಲ್ಲೆಯ ರಾಣಿಪೂಲ್ ಬಳಿ ಹಾಲಿನ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಶನಿವಾರ ರಾತ್ರಿ ಹಾಲಿನ ಟ್ಯಾಂಕರ್ ಜನ ಸಂದಣಿ ಪ್ರದೇಶದತ್ತ ವೇಗವಾಗಿ ಬಂದ ಪರಿಣಾಮ ಈ ಅಪಘಾತ ಸಂಭವಿಸಿದೆ. ರಾಣಿಪೂಲ್ ಮೈದಾನದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ವೇಳೆ ಜಮಾಯಿಸಿದ್ದ ಜನರ ಮೇಲೆ ಟ್ಯಾಂಕರ್ ಹರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಇಬ್ಬರು ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಯಗೊಂಡವರ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.</p><p>ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ರಾಣಿಪೂಲ್ನಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಸಿಎಂ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>