<p><strong>ಗ್ಯಾಂಗ್ಟಾಕ್</strong>: ಕರ್ನಾಟಕದಲ್ಲಿ ಪದವಿ ಪೂರ್ಣಗೊಂಡ ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಅಡಿಯಲ್ಲಿ ಮಾಸಿಕ ₹ 3 ಸಾವಿರ ನೀಡಲಾತ್ತಿದೆ. ಇದೀಗ ಇಂತಹದೆ ಯೋಜನೆಯೊಂದನ್ನು ಸಿಕ್ಕಿಂ ಸರ್ಕಾರ ಕೂಡ ಆರಂಭಿಸಿದೆ. </p><p>ನಿರುದ್ಯೋಗಿ ತಾಯಂದಿರಿಗೆ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ‘ಆಮ ಸಶಕ್ತಿಕರಣ್ ಯೋಜನೆ’ಯನ್ನು ಸಿಕ್ಕಿಂ ಸರ್ಕಾರ ಆರಂಭಿಸಿದೆ. ಈ ಯೋಜನೆ ಅಡಿಯಲ್ಲಿ ನಿರುದ್ಯೋಗಿ ತಾಯಂದಿರಿಗೆ ವಾರ್ಷಿಕ ₹ 40 ಸಾವಿರ ನೀಡಲಾಗುತ್ತದೆ. </p><p>ಭಾನುವಾರ ಸಿಕ್ಕಿಂನ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು 32 ಸಾವಿರ ನಿರುದ್ಯೋಗಿ ಮಹಿಳೆಯರಿಗೆ ತಲಾ ₹20 ಸಾವಿರ ಮೊತ್ತದ ಚೆಕ್ ವಿತರಣೆ ಮಾಡಿದ್ದಾರೆ. </p><p>ಸಿಕ್ಕಿಂನಲ್ಲಿ ಫಲವತ್ತತೆ ದರ ಕುಸಿಯುತ್ತಿರುವ ಕಾರಣ, ಅಲ್ಲಿನ ಜನರು ಹೆಚ್ಚು ಮಕ್ಕಳು ಮಾಡಿಕೊಳ್ಳಲು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. </p><p>ಭ್ರಷ್ಟಾಚಾರ ಆರೋಪದಲ್ಲಿ ಜೈಲು ಪಾಲಾಗಿದ್ದ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ಅವರು ಜೈಲಿನಿಂದ ಬಿಡುಗಡೆಯಾದ ದಿನವಾದ ಆಗಸ್ಟ್ 10 ಅನ್ನು ‘ಆಮ ಸನ್ಮಾನ್ ದಿವಸ್’ ಎಂದು ಆಚರಣೆ ಮಾಡಲು ಸಿಕ್ಕಿಂ ಸರ್ಕಾರ ನಿರ್ಧರಿಸಿದೆ. 8 ವರ್ಷಗಳ ಹಿಂದೆ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ಯಾಂಗ್ಟಾಕ್</strong>: ಕರ್ನಾಟಕದಲ್ಲಿ ಪದವಿ ಪೂರ್ಣಗೊಂಡ ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಅಡಿಯಲ್ಲಿ ಮಾಸಿಕ ₹ 3 ಸಾವಿರ ನೀಡಲಾತ್ತಿದೆ. ಇದೀಗ ಇಂತಹದೆ ಯೋಜನೆಯೊಂದನ್ನು ಸಿಕ್ಕಿಂ ಸರ್ಕಾರ ಕೂಡ ಆರಂಭಿಸಿದೆ. </p><p>ನಿರುದ್ಯೋಗಿ ತಾಯಂದಿರಿಗೆ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ‘ಆಮ ಸಶಕ್ತಿಕರಣ್ ಯೋಜನೆ’ಯನ್ನು ಸಿಕ್ಕಿಂ ಸರ್ಕಾರ ಆರಂಭಿಸಿದೆ. ಈ ಯೋಜನೆ ಅಡಿಯಲ್ಲಿ ನಿರುದ್ಯೋಗಿ ತಾಯಂದಿರಿಗೆ ವಾರ್ಷಿಕ ₹ 40 ಸಾವಿರ ನೀಡಲಾಗುತ್ತದೆ. </p><p>ಭಾನುವಾರ ಸಿಕ್ಕಿಂನ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು 32 ಸಾವಿರ ನಿರುದ್ಯೋಗಿ ಮಹಿಳೆಯರಿಗೆ ತಲಾ ₹20 ಸಾವಿರ ಮೊತ್ತದ ಚೆಕ್ ವಿತರಣೆ ಮಾಡಿದ್ದಾರೆ. </p><p>ಸಿಕ್ಕಿಂನಲ್ಲಿ ಫಲವತ್ತತೆ ದರ ಕುಸಿಯುತ್ತಿರುವ ಕಾರಣ, ಅಲ್ಲಿನ ಜನರು ಹೆಚ್ಚು ಮಕ್ಕಳು ಮಾಡಿಕೊಳ್ಳಲು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. </p><p>ಭ್ರಷ್ಟಾಚಾರ ಆರೋಪದಲ್ಲಿ ಜೈಲು ಪಾಲಾಗಿದ್ದ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ಅವರು ಜೈಲಿನಿಂದ ಬಿಡುಗಡೆಯಾದ ದಿನವಾದ ಆಗಸ್ಟ್ 10 ಅನ್ನು ‘ಆಮ ಸನ್ಮಾನ್ ದಿವಸ್’ ಎಂದು ಆಚರಣೆ ಮಾಡಲು ಸಿಕ್ಕಿಂ ಸರ್ಕಾರ ನಿರ್ಧರಿಸಿದೆ. 8 ವರ್ಷಗಳ ಹಿಂದೆ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>