<p><strong>ನವದೆಹಲಿ</strong>: ಏಕಕಾಲದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸಂಸದೀಯ ಸಮಿತಿಯ ಮುಂದೆ ಅಟಾರ್ನಿ ಜನರಲ್ ಆರ್.ವೆಂಕಟ್ರಮಣಿ, ಟೆಲಿಕಾಂ ವಿವಾದಗಳ ಇತ್ಯರ್ಥ ಹಾಗೂ ಮೇಲ್ಮನವಿ ಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಅವರು ಮಂಗಳವಾರ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈಗ ನಡೆಯುತ್ತಿರುವ ಬಜೆಟ್ ಅಧಿವೇಶನದ ಕೊನೆಯ ವಾರದ ಮೊದಲ ದಿನವೇ ಸಮಿತಿಯು ವರದಿ ಸಲ್ಲಿಸಬೇಕಿದೆ. ಕೆಲಸ ಮುಗಿಸಲು ಇನ್ನಷ್ಟು ಕಾಲಾವಕಾಶ ಬೇಕಿದೆ ಎಂದು ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಪಿ.ಪಿ.ಚೌಧರಿ ತಿಳಿಸಿದ್ದಾರೆ. ಹೀಗಾಗಿ, ಸಮಿತಿಯ ಅವಧಿಯನ್ನು ಲೋಕಸಭೆಯು ವಿಸ್ತರಿಸುವ ಸಾಧ್ಯತೆಯಿದೆ.</p>.<p class="title">ಸಮಿತಿಯು ಈಗಾಗಲೇ ತಜ್ಞರ ಅಭಿಪ್ರಾಯ ಸಂಗ್ರಹಿಸುತ್ತಿದೆ. ಸಿಜೆಐ ಯು.ಯು.ಲಲಿತ್, ಹಿರಿಯ ವಕೀಲ ಹರೀಶ್ ಸಾಳ್ವೆ, ದೆಹಲಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಪಿ.ಶಾ ಅವರು ಕೂಡ ಸಮಿತಿ ಮುಂದೆ ಹಾಜರಾಗಿ ಅಭಿಪ್ರಾಯ ಸಲ್ಲಿಸಲಿದ್ದಾರೆ. </p>.<p>ಸಮಿತಿಯು 38 ಸದಸ್ಯರನ್ನು ಒಳಗೊಂಡಿದ್ದು, ಇಬ್ಬರು ವಿಶೇಷ ಆಹ್ವಾನಿತರನ್ನು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಏಕಕಾಲದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸಂಸದೀಯ ಸಮಿತಿಯ ಮುಂದೆ ಅಟಾರ್ನಿ ಜನರಲ್ ಆರ್.ವೆಂಕಟ್ರಮಣಿ, ಟೆಲಿಕಾಂ ವಿವಾದಗಳ ಇತ್ಯರ್ಥ ಹಾಗೂ ಮೇಲ್ಮನವಿ ಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಅವರು ಮಂಗಳವಾರ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈಗ ನಡೆಯುತ್ತಿರುವ ಬಜೆಟ್ ಅಧಿವೇಶನದ ಕೊನೆಯ ವಾರದ ಮೊದಲ ದಿನವೇ ಸಮಿತಿಯು ವರದಿ ಸಲ್ಲಿಸಬೇಕಿದೆ. ಕೆಲಸ ಮುಗಿಸಲು ಇನ್ನಷ್ಟು ಕಾಲಾವಕಾಶ ಬೇಕಿದೆ ಎಂದು ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಪಿ.ಪಿ.ಚೌಧರಿ ತಿಳಿಸಿದ್ದಾರೆ. ಹೀಗಾಗಿ, ಸಮಿತಿಯ ಅವಧಿಯನ್ನು ಲೋಕಸಭೆಯು ವಿಸ್ತರಿಸುವ ಸಾಧ್ಯತೆಯಿದೆ.</p>.<p class="title">ಸಮಿತಿಯು ಈಗಾಗಲೇ ತಜ್ಞರ ಅಭಿಪ್ರಾಯ ಸಂಗ್ರಹಿಸುತ್ತಿದೆ. ಸಿಜೆಐ ಯು.ಯು.ಲಲಿತ್, ಹಿರಿಯ ವಕೀಲ ಹರೀಶ್ ಸಾಳ್ವೆ, ದೆಹಲಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಪಿ.ಶಾ ಅವರು ಕೂಡ ಸಮಿತಿ ಮುಂದೆ ಹಾಜರಾಗಿ ಅಭಿಪ್ರಾಯ ಸಲ್ಲಿಸಲಿದ್ದಾರೆ. </p>.<p>ಸಮಿತಿಯು 38 ಸದಸ್ಯರನ್ನು ಒಳಗೊಂಡಿದ್ದು, ಇಬ್ಬರು ವಿಶೇಷ ಆಹ್ವಾನಿತರನ್ನು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>