<p>ಸಿಂಧನೂರು: ‘ದುಡಿಯುವ ವರ್ಗದ ಸಮುದಾಯಗಳ ಹಿತಾಸಕ್ತಿ ಕಾಪಾಡಲು ನಿಸ್ವಾರ್ಥದಿಂದ ಶ್ರಮಿಸಿದರೆ ಪಕ್ಷದ ಸಂಘಟನೆ ವೃದ್ಧಿಯಾಗಲು ಸಾಧ್ಯವಾಗುತ್ತದೆ’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಸಾತಿ ಸುಂದರೇಶ ಕರೆ ನೀಡಿದರು.</p>.<p>ನಗರದ ರೈತ ಸಂಘದ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಕ್ಷದ ಜಿಲ್ಲಾಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅಮೆರಿಕ ಮತ್ತು ಇಸ್ರೇಲ್ ದೇಶಗಳು ಸೇರಿ ಇರಾನ್ ಮೇಲೆ ನಡೆಸುತ್ತಿರುವ ದಾಳಿ ಅತ್ಯಂತ ಕ್ರೂರ ಮತ್ತು ಅಮಾನವೀಯವಾಗಿದೆ. ಸಹಸ್ರಾರು ಜನರ ಬಲಿ ತೆಗೆದುಕೊಂಡಿರುವ ಅಮೆರಿಕದ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸದೇ ಭಾರತದ ವಿದೇಶಾಂಗ ನೀತಿಯ ಪರಂಪರೆಯನ್ನು ಉಲ್ಲಂಘಿಸಿದ್ದಾರೆ’ ಎಂದು ಟೀಕಿಸಿದರು.</p>.<p>‘ಯುದ್ಧದ ಪರಿಣಾಮದಿಂದ ಭಾರತೀಯರು ಆರ್ಥಿಕ ಸಂಕಟ ಅನುಭವಿಸತೊಡಗಿದ್ದಾರೆ. ತೈಲ ಬೆಲೆ ಹೆಚ್ಚಳವಾಗಿರುವುದಲ್ಲದೇ ಅಗತ್ಯಕ್ಕೂ ಲಭಿಸದ ಕಾರಣ ಜನರು ಅನ್ನಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸರ್ಕಾರಗಳು ಜನರ ಸಂಕಟ ನಿವಾರಣೆಗೆ ಸೂಕ್ತ ಕ್ರಮಕ್ಕೆ ಮುಂದಾಗಬೇಕು’ ಎಂದು ಒತ್ತಾಯಿಸಿದರು.</p>.<p>ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುಸರಿಸಬೇಕಾದ ಕ್ರಮಗಳನ್ನು ಸರ್ಕಾರಕ್ಕೆ ತಲುಪಿಸಲು ಹೋರಾಟದ ಅವಶ್ಯಕತೆ ಇದೆ ಎಂದು ಅವರು ವಿವರಿಸಿದರು.</p>.<p>ರಾಜ್ಯ ಘಟಕದ ಸಹಕಾರ್ಯದರ್ಶಿ ಸಂತೋಷ ಪಕ್ಷದ ಸದಸ್ಯತ್ವದ ಹೆಚ್ಚಳ ಮತ್ತು ಪಕ್ಷದ ಸಿದ್ದಾಂತವನ್ನು ಜನಮಾನಸಕ್ಕೆ ಕೊಂಡೊಯ್ಯಬೇಕು ಎಂದು ಸಲಹೆ ನೀಡಿದರು.</p>.<p>ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ ಕ್ಯಾತ್ನಟ್ಟಿ, ಎಐಟಿಯುಸಿ ಮುಖಂಡರಾದ ವೆಂಕನಗೌಡ ಗದ್ರಟಗಿ, ಬಾಷುಮಿಯಾ, ಸಂಗಯ್ಯ ಜಗದೀಶ, ಕೊಪ್ಪಳ ಜಿಲ್ಲಾ ಘಟಕದ ಕಾರ್ಯದರ್ಶಿ ತಿಮ್ಮಣ್ಣ, ಕಿಸಾನ್ಸಬ ಮುಖಂಡ ಹುಲುಗಪ್ಪ, ಚನ್ನಮ್ಮ ಮಾನ್ವಿ ಉಪಸ್ಥಿತರಿದ್ದರು. ಲಕ್ಷ್ಮೀ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-32-820639114</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ‘ದುಡಿಯುವ ವರ್ಗದ ಸಮುದಾಯಗಳ ಹಿತಾಸಕ್ತಿ ಕಾಪಾಡಲು ನಿಸ್ವಾರ್ಥದಿಂದ ಶ್ರಮಿಸಿದರೆ ಪಕ್ಷದ ಸಂಘಟನೆ ವೃದ್ಧಿಯಾಗಲು ಸಾಧ್ಯವಾಗುತ್ತದೆ’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಸಾತಿ ಸುಂದರೇಶ ಕರೆ ನೀಡಿದರು.</p>.<p>ನಗರದ ರೈತ ಸಂಘದ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪಕ್ಷದ ಜಿಲ್ಲಾಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಅಮೆರಿಕ ಮತ್ತು ಇಸ್ರೇಲ್ ದೇಶಗಳು ಸೇರಿ ಇರಾನ್ ಮೇಲೆ ನಡೆಸುತ್ತಿರುವ ದಾಳಿ ಅತ್ಯಂತ ಕ್ರೂರ ಮತ್ತು ಅಮಾನವೀಯವಾಗಿದೆ. ಸಹಸ್ರಾರು ಜನರ ಬಲಿ ತೆಗೆದುಕೊಂಡಿರುವ ಅಮೆರಿಕದ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸದೇ ಭಾರತದ ವಿದೇಶಾಂಗ ನೀತಿಯ ಪರಂಪರೆಯನ್ನು ಉಲ್ಲಂಘಿಸಿದ್ದಾರೆ’ ಎಂದು ಟೀಕಿಸಿದರು.</p>.<p>‘ಯುದ್ಧದ ಪರಿಣಾಮದಿಂದ ಭಾರತೀಯರು ಆರ್ಥಿಕ ಸಂಕಟ ಅನುಭವಿಸತೊಡಗಿದ್ದಾರೆ. ತೈಲ ಬೆಲೆ ಹೆಚ್ಚಳವಾಗಿರುವುದಲ್ಲದೇ ಅಗತ್ಯಕ್ಕೂ ಲಭಿಸದ ಕಾರಣ ಜನರು ಅನ್ನಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸರ್ಕಾರಗಳು ಜನರ ಸಂಕಟ ನಿವಾರಣೆಗೆ ಸೂಕ್ತ ಕ್ರಮಕ್ಕೆ ಮುಂದಾಗಬೇಕು’ ಎಂದು ಒತ್ತಾಯಿಸಿದರು.</p>.<p>ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುಸರಿಸಬೇಕಾದ ಕ್ರಮಗಳನ್ನು ಸರ್ಕಾರಕ್ಕೆ ತಲುಪಿಸಲು ಹೋರಾಟದ ಅವಶ್ಯಕತೆ ಇದೆ ಎಂದು ಅವರು ವಿವರಿಸಿದರು.</p>.<p>ರಾಜ್ಯ ಘಟಕದ ಸಹಕಾರ್ಯದರ್ಶಿ ಸಂತೋಷ ಪಕ್ಷದ ಸದಸ್ಯತ್ವದ ಹೆಚ್ಚಳ ಮತ್ತು ಪಕ್ಷದ ಸಿದ್ದಾಂತವನ್ನು ಜನಮಾನಸಕ್ಕೆ ಕೊಂಡೊಯ್ಯಬೇಕು ಎಂದು ಸಲಹೆ ನೀಡಿದರು.</p>.<p>ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ ಕ್ಯಾತ್ನಟ್ಟಿ, ಎಐಟಿಯುಸಿ ಮುಖಂಡರಾದ ವೆಂಕನಗೌಡ ಗದ್ರಟಗಿ, ಬಾಷುಮಿಯಾ, ಸಂಗಯ್ಯ ಜಗದೀಶ, ಕೊಪ್ಪಳ ಜಿಲ್ಲಾ ಘಟಕದ ಕಾರ್ಯದರ್ಶಿ ತಿಮ್ಮಣ್ಣ, ಕಿಸಾನ್ಸಬ ಮುಖಂಡ ಹುಲುಗಪ್ಪ, ಚನ್ನಮ್ಮ ಮಾನ್ವಿ ಉಪಸ್ಥಿತರಿದ್ದರು. ಲಕ್ಷ್ಮೀ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-32-820639114</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>