<p>ಸಿಂಧನೂರು: ಒಡಿಶಾದ ಬುಡಕಟ್ಟು ಸಮುದಾಯದ ಜೀತು ಮುಂಡಾ ಅವರ ಮೇಲೆ ಸರ್ಕಾರಿ ಬ್ಯಾಂಕ್ ಅಧಿಕಾರಿಗಳ ಅಮಾನವೀಯ ವರ್ತನೆ ಖಂಡಿಸಿ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಿ, ತಪ್ಪಿತಸ್ಥ ಬ್ಯಾಂಕ್ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ, ಶನಿವಾರ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ವತಿಯಿಂದ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಲಾಯಿತು.</p>.<p>‘ಮೃತಪಡುವುದಕ್ಕೂ ಮುನ್ನ ಸಹೋದರಿ ಕರ್ಳಾ ಮುಂಡಾ ಅವರು ಒಡಿಶಾ ಗ್ರಾಮೀಣ ಬ್ಯಾಂಕ್ನಲ್ಲಿ ಠೇವಣಿ ಇಟ್ಟಿದ್ದ ₹ 20 ಸಾವಿರ ಅನ್ನು ವಾಪಸ್ ನೀಡುವಂತೆ ಜೀತು ಮುಂಡಾ ಅವರು ಹತ್ತಾರು ಬಾರಿ ಬ್ಯಾಂಕ್ ಅಲೆದಾಡಿದರೂ ಬ್ಯಾಂಕ್ ಅಧಿಕಾರಿಗಳು ದಾಖಲೆ ನೀಡುವಂತೆ ಸತಾಯಿಸಿದ್ದಾರೆ. ರೋಸಿಹೋದ ಜೀತು ಮುಂಡಾ ಅವರು ಸಮಾಧಿ ಅಗೆದು ಕೊಳೆತ ಸ್ಥಿತಿಯಲ್ಲಿದ್ದ ಸೋದರಿಯ ಶವವನ್ನು ಚೀಲದಲ್ಲಿ ಕಟ್ಟಿಕೊಂಡು ಬ್ಯಾಂಕ್ಗೆ ಬಂದಿದ್ದಾರೆ. ಈ ಘಟನೆಗೆ ಬ್ಯಾಂಕ್ ಅಧಿಕಾರಿಗಳ ಅಮಾನವೀಯ ವರ್ತನೆಯೇ ಕಾರಣವಾಗಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿಪಿಐ(ಎಂಎಲ್) ಲಿಬರೇಶನ್ ತಾಲ್ಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ ಮಾತನಾಡಿ, ‘ಬ್ಯಾಂಕ್ಗಳಲ್ಲಿ ಬಡವರು, ಆದಿವಾಸಿಗಳು, ಶೋಷಿತ ಸಮುದಾಯಗಳಿಗೆ ಸಾಲ ನೀಡುವುದಿರಲಿ, ಠೇವಣಿಯಿಟ್ಟ ಹಣವನ್ನು ವಾಪಸ್ ನೀಡಲು ನೀಡಲು ಸತಾಯಿಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ರಾಘವೇಂದ್ರ ಉಪ್ಪಳ, ಭಗತ್ಸಿಂಗ್ ಆಟೊ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ, ತುಸಳಪ್ಪ ದಡೇಸುಗೂರು, ಹನುಮಂತ ಟೈಲರ್, ರಾಮಣ್ಣ, ಮಂಜುನಾಥ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-32-1435695777</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ಒಡಿಶಾದ ಬುಡಕಟ್ಟು ಸಮುದಾಯದ ಜೀತು ಮುಂಡಾ ಅವರ ಮೇಲೆ ಸರ್ಕಾರಿ ಬ್ಯಾಂಕ್ ಅಧಿಕಾರಿಗಳ ಅಮಾನವೀಯ ವರ್ತನೆ ಖಂಡಿಸಿ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಿ, ತಪ್ಪಿತಸ್ಥ ಬ್ಯಾಂಕ್ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ, ಶನಿವಾರ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ವತಿಯಿಂದ ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಲಾಯಿತು.</p>.<p>‘ಮೃತಪಡುವುದಕ್ಕೂ ಮುನ್ನ ಸಹೋದರಿ ಕರ್ಳಾ ಮುಂಡಾ ಅವರು ಒಡಿಶಾ ಗ್ರಾಮೀಣ ಬ್ಯಾಂಕ್ನಲ್ಲಿ ಠೇವಣಿ ಇಟ್ಟಿದ್ದ ₹ 20 ಸಾವಿರ ಅನ್ನು ವಾಪಸ್ ನೀಡುವಂತೆ ಜೀತು ಮುಂಡಾ ಅವರು ಹತ್ತಾರು ಬಾರಿ ಬ್ಯಾಂಕ್ ಅಲೆದಾಡಿದರೂ ಬ್ಯಾಂಕ್ ಅಧಿಕಾರಿಗಳು ದಾಖಲೆ ನೀಡುವಂತೆ ಸತಾಯಿಸಿದ್ದಾರೆ. ರೋಸಿಹೋದ ಜೀತು ಮುಂಡಾ ಅವರು ಸಮಾಧಿ ಅಗೆದು ಕೊಳೆತ ಸ್ಥಿತಿಯಲ್ಲಿದ್ದ ಸೋದರಿಯ ಶವವನ್ನು ಚೀಲದಲ್ಲಿ ಕಟ್ಟಿಕೊಂಡು ಬ್ಯಾಂಕ್ಗೆ ಬಂದಿದ್ದಾರೆ. ಈ ಘಟನೆಗೆ ಬ್ಯಾಂಕ್ ಅಧಿಕಾರಿಗಳ ಅಮಾನವೀಯ ವರ್ತನೆಯೇ ಕಾರಣವಾಗಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿಪಿಐ(ಎಂಎಲ್) ಲಿಬರೇಶನ್ ತಾಲ್ಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ ಮಾತನಾಡಿ, ‘ಬ್ಯಾಂಕ್ಗಳಲ್ಲಿ ಬಡವರು, ಆದಿವಾಸಿಗಳು, ಶೋಷಿತ ಸಮುದಾಯಗಳಿಗೆ ಸಾಲ ನೀಡುವುದಿರಲಿ, ಠೇವಣಿಯಿಟ್ಟ ಹಣವನ್ನು ವಾಪಸ್ ನೀಡಲು ನೀಡಲು ಸತಾಯಿಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ರಾಘವೇಂದ್ರ ಉಪ್ಪಳ, ಭಗತ್ಸಿಂಗ್ ಆಟೊ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ, ತುಸಳಪ್ಪ ದಡೇಸುಗೂರು, ಹನುಮಂತ ಟೈಲರ್, ರಾಮಣ್ಣ, ಮಂಜುನಾಥ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-32-1435695777</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>