<p><strong>ಚಂಡಿಗಡ:</strong> ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿಗೆ ಹೊಂದಿಕೊಂಡಿರುವ ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿ ಎಂಬಲ್ಲಿ ಕೈ ಕತ್ತರಿಸಿರುವ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೃತ ವ್ಯಕ್ತಿಯ ವಯಸ್ಸು ಸುಮಾರು 35 ವರ್ಷ. ಸಿಂಘು ಗಡಿಗೆ ಹತ್ತಿರುವಿರುವ ಪ್ರದೇಶದಲ್ಲಿ ತಂತಿಗಳಿಂದ ನಿರ್ಮಿಸಿರುವ ತಡೆಗೋಡೆಗೆ ಬಿಗಿದಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಮೃತ ವ್ಯಕ್ತಿ ಚಡ್ಡಿ (ಶಾರ್ಟ್ಸ್) ಧರಿಸಿದ್ದಾರೆ‘ ಎಂದು ಅವರು ಹೇಳಿದರು.</p>.<p><strong>ಓದಿ:</strong><a href="https://www.prajavani.net/india-news/lakhimpur-violence-sit-takes-union-ministers-son-3-others-to-recreate-sequence-of-events-875532.html" itemprop="url">ಲಖಿಂಪುರ ಘಟನೆಯ ಮರುಸೃಷ್ಟಿ: ಆಶಿಶ್ ಮಿಶ್ರಾರನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು</a></p>.<p>‘ರೈತರ ಪ್ರತಿಭಟನಾ ಸ್ಥಳದ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿರುವುದಾಗಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಕುಂಡ್ಲಿ ಪೊಲೀಸ್ ಠಾಣೆಗೆ ಮಾಹಿತಿ ಸಿಕ್ಕಿತ್ತು‘ ಎಂದು ಸೋನಿಪತ್ ನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ರೋಹ್ಟಕ್ ವಲಯದ ಐಜಿಪಿ ಸಂದೀಪ್ ಖಿರ್ವಾರ್, ‘ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅಪರಾಧಿಗಳ ಪತ್ತೆಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ‘ ಎಂದು ದೂರವಾಣಿ ಮೂಲಕ ಸುದ್ದಿಸಂಸ್ಥೆಗೆ ತಿಳಿಸಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತಿಭಟನಾ ಸ್ಥಳದ ಸಮೀಪವಿದ್ದ ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅವರು ಹೇಳಿದರು.</p>.<p>ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ದೃಶ್ಯದ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರೈತರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಕೇಳಿದ ಪ್ರಶ್ನೆಗೆ ಪೊಲೀಸರು ‘ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ‘ ಎಂದು ಹೇಳಿದರು.</p>.<p><strong>ಓದಿ:</strong><a href="https://www.prajavani.net/india-news/in-apparent-message-to-govt-varun-gandhi-shares-clip-of-vajpayees-speech-in-support-of-farmers-875524.html" itemprop="url">ರೈತರ ಪರ ವಾಜಪೇಯಿ ಭಾಷಣ: ಹಳೆಯ ವಿಡಿಯೊ ಹಂಚಿಕೊಂಡ ಬಿಜೆಪಿ ಮುಖಂಡ ವರುಣ್ ಗಾಂಧಿ</a></p>.<p>ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋನಿಪತ್ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡಿಗಡ:</strong> ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿಗೆ ಹೊಂದಿಕೊಂಡಿರುವ ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿ ಎಂಬಲ್ಲಿ ಕೈ ಕತ್ತರಿಸಿರುವ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೃತ ವ್ಯಕ್ತಿಯ ವಯಸ್ಸು ಸುಮಾರು 35 ವರ್ಷ. ಸಿಂಘು ಗಡಿಗೆ ಹತ್ತಿರುವಿರುವ ಪ್ರದೇಶದಲ್ಲಿ ತಂತಿಗಳಿಂದ ನಿರ್ಮಿಸಿರುವ ತಡೆಗೋಡೆಗೆ ಬಿಗಿದಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಮೃತ ವ್ಯಕ್ತಿ ಚಡ್ಡಿ (ಶಾರ್ಟ್ಸ್) ಧರಿಸಿದ್ದಾರೆ‘ ಎಂದು ಅವರು ಹೇಳಿದರು.</p>.<p><strong>ಓದಿ:</strong><a href="https://www.prajavani.net/india-news/lakhimpur-violence-sit-takes-union-ministers-son-3-others-to-recreate-sequence-of-events-875532.html" itemprop="url">ಲಖಿಂಪುರ ಘಟನೆಯ ಮರುಸೃಷ್ಟಿ: ಆಶಿಶ್ ಮಿಶ್ರಾರನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು</a></p>.<p>‘ರೈತರ ಪ್ರತಿಭಟನಾ ಸ್ಥಳದ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿರುವುದಾಗಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಕುಂಡ್ಲಿ ಪೊಲೀಸ್ ಠಾಣೆಗೆ ಮಾಹಿತಿ ಸಿಕ್ಕಿತ್ತು‘ ಎಂದು ಸೋನಿಪತ್ ನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ರೋಹ್ಟಕ್ ವಲಯದ ಐಜಿಪಿ ಸಂದೀಪ್ ಖಿರ್ವಾರ್, ‘ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಅಪರಾಧಿಗಳ ಪತ್ತೆಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ‘ ಎಂದು ದೂರವಾಣಿ ಮೂಲಕ ಸುದ್ದಿಸಂಸ್ಥೆಗೆ ತಿಳಿಸಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತಿಭಟನಾ ಸ್ಥಳದ ಸಮೀಪವಿದ್ದ ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅವರು ಹೇಳಿದರು.</p>.<p>ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ದೃಶ್ಯದ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರೈತರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಕೇಳಿದ ಪ್ರಶ್ನೆಗೆ ಪೊಲೀಸರು ‘ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ‘ ಎಂದು ಹೇಳಿದರು.</p>.<p><strong>ಓದಿ:</strong><a href="https://www.prajavani.net/india-news/in-apparent-message-to-govt-varun-gandhi-shares-clip-of-vajpayees-speech-in-support-of-farmers-875524.html" itemprop="url">ರೈತರ ಪರ ವಾಜಪೇಯಿ ಭಾಷಣ: ಹಳೆಯ ವಿಡಿಯೊ ಹಂಚಿಕೊಂಡ ಬಿಜೆಪಿ ಮುಖಂಡ ವರುಣ್ ಗಾಂಧಿ</a></p>.<p>ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋನಿಪತ್ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>