<p><strong>ನವದೆಹಲಿ</strong>: ಹೈಕೋರ್ಟ್ ನ್ಯಾಯಮೂರ್ತಿಗಳ ಹತ್ತಿರದ ಸಂಬಂಧಿಗಳನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡದೆ ಇರುವ ಪ್ರಸ್ತಾವವನ್ನು ಬೆಂಬಲಿಸಿರುವ ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಅವರು, ಈ ಪ್ರಸ್ತಾವವನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದ್ದಾರೆ.</p>.<p>‘ಮಾಡಿ ತೋರಿಸುವುದಕ್ಕಿಂತ ಹೇಳುವುದು ಸುಲಭ. ಹೈಕೋರ್ಟ್ಗಳಲ್ಲಿ ನ್ಯಾಯಮೂರ್ತಿ ಆಗಿರುವವರ ಸಂಬಂಧಿಕರು ಅಲ್ಲಿಯೇ ವಕೀಲರಾಗಿ ಕೆಲಸ ಮಾಡುವುದನ್ನು ಕೂಡ ನಿಷೇಧಿಸಲು ಇದುವರೆಗೆ ನಮಗೆ ಆಗಿಲ್ಲ... ವ್ಯವಸ್ಥೆಯೇ ಹೆಚ್ಚು ಬಲಿಷ್ಠ ಎಂಬುದು ಮತ್ತೆ ಮತ್ತೆ ಸಾಬೀತಾಗಿದೆ’ ಎಂದು ಸಿಂಘ್ವಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p class="bodytext">ಬಡ್ತಿಗೆ ಪರಿಗಣಿತವಾಗಿರುವ ನ್ಯಾಯಮೂರ್ತಿಗಳು ಇರುವ ಹಾಲ್ನಲ್ಲಿ ಕೊಲಿಜಿಯಂ ಸದಸ್ಯರು ಮಾರುವೇಷದಲ್ಲಿ ಕೂರಬೇಕು, ವಕೀಲರನ್ನು ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ಬದಲು ಅವರನ್ನು ಕೂಡ ಮಾರುವೇಷದಲ್ಲಿ ಪರಿಶೀಲಿಸಬೇಕು ಎಂಬುದಾಗಿ ತಾವು ದಶಕಗಳ ಹಿಂದೆ ಬರೆದಿದ್ದುದಾಗಿ ಸಿಂಘ್ವಿ ಹೇಳಿದ್ದಾರೆ.</p>.<p class="bodytext">ಹೈಕೋರ್ಟ್ಗಳಲ್ಲಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಹತ್ತಿರದ ಸಂಬಂಧಿಗಳನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಬಾರದು ಎಂಬ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್ನ ಕೊಲಿಜಿಯಂ (ಹಿರಿಯ ನ್ಯಾಯಮೂರ್ತಿಗಳ ಸಮಿತಿ) ಪರಿಶೀಲಿಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ಈಚೆಗೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೈಕೋರ್ಟ್ ನ್ಯಾಯಮೂರ್ತಿಗಳ ಹತ್ತಿರದ ಸಂಬಂಧಿಗಳನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡದೆ ಇರುವ ಪ್ರಸ್ತಾವವನ್ನು ಬೆಂಬಲಿಸಿರುವ ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಅವರು, ಈ ಪ್ರಸ್ತಾವವನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದ್ದಾರೆ.</p>.<p>‘ಮಾಡಿ ತೋರಿಸುವುದಕ್ಕಿಂತ ಹೇಳುವುದು ಸುಲಭ. ಹೈಕೋರ್ಟ್ಗಳಲ್ಲಿ ನ್ಯಾಯಮೂರ್ತಿ ಆಗಿರುವವರ ಸಂಬಂಧಿಕರು ಅಲ್ಲಿಯೇ ವಕೀಲರಾಗಿ ಕೆಲಸ ಮಾಡುವುದನ್ನು ಕೂಡ ನಿಷೇಧಿಸಲು ಇದುವರೆಗೆ ನಮಗೆ ಆಗಿಲ್ಲ... ವ್ಯವಸ್ಥೆಯೇ ಹೆಚ್ಚು ಬಲಿಷ್ಠ ಎಂಬುದು ಮತ್ತೆ ಮತ್ತೆ ಸಾಬೀತಾಗಿದೆ’ ಎಂದು ಸಿಂಘ್ವಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p class="bodytext">ಬಡ್ತಿಗೆ ಪರಿಗಣಿತವಾಗಿರುವ ನ್ಯಾಯಮೂರ್ತಿಗಳು ಇರುವ ಹಾಲ್ನಲ್ಲಿ ಕೊಲಿಜಿಯಂ ಸದಸ್ಯರು ಮಾರುವೇಷದಲ್ಲಿ ಕೂರಬೇಕು, ವಕೀಲರನ್ನು ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ಬದಲು ಅವರನ್ನು ಕೂಡ ಮಾರುವೇಷದಲ್ಲಿ ಪರಿಶೀಲಿಸಬೇಕು ಎಂಬುದಾಗಿ ತಾವು ದಶಕಗಳ ಹಿಂದೆ ಬರೆದಿದ್ದುದಾಗಿ ಸಿಂಘ್ವಿ ಹೇಳಿದ್ದಾರೆ.</p>.<p class="bodytext">ಹೈಕೋರ್ಟ್ಗಳಲ್ಲಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಹತ್ತಿರದ ಸಂಬಂಧಿಗಳನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಬಾರದು ಎಂಬ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್ನ ಕೊಲಿಜಿಯಂ (ಹಿರಿಯ ನ್ಯಾಯಮೂರ್ತಿಗಳ ಸಮಿತಿ) ಪರಿಶೀಲಿಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ಈಚೆಗೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>