<p><strong>ಕೋಲ್ಕತ್ತ:</strong> ಕೇಂದ್ರ ಚುನಾವಣಾ ಆಯೋಗವು (ಸಿಇಸಿ) ಬಿಹಾರ ಮಾದರಿಯಲ್ಲಿ ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಲು ಸೂಚನೆ ನೀಡಿರುವ ಬಗ್ಗೆ ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p><p>‘ಎಸ್ಐಆರ್ ಪ್ರಕ್ರಿಯೆಯು ನೋಟು ರದ್ದತಿಯಂತಹ ವಿಧ್ವಂಸಕ ಕಸರತ್ತಾಗಿದೆ. ಇದು ಸಾಮೂಹಿಕ ಮತದಾನದ ಹಕ್ಕು ನಿರಾಕರಣೆ ಮತ್ತು ಮತ ಕಳ್ಳತನಕ್ಕೆ ಕಾರಣವಾಗಬಹುದು’ ಎಂದು ‘ಪಿಟಿಐ’ಗೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದಾರೆ.</p><p>‘ಚುನಾವಣಾ ಆಯೋಗವು ಪೌರತ್ವವನ್ನು ನಿರ್ಣಯಿಸುವ ಸಂಸ್ಥೆಯಲ್ಲ. ಆದರೂ, 75 ವರ್ಷಗಳ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಪೌರತ್ವವನ್ನು ಸಾಬೀತುಪಡಿಸುವಂತೆ ಜನರಿಗೆ ಚುನಾವಣಾ ಆಯೋಗವು ಸೂಚಿಸಿದೆ. ಈ ರೀತಿ ಹಿಂದೆಂದೂ ನಡೆದಿರಲಿಲ್ಲ’ ಎಂದು ಅವರು ಟೀಕಿಸಿದ್ದಾರೆ.</p><p>’ಎಸ್ಐಆರ್ ಪ್ರಕ್ರಿಯೆ ನಡೆಸುವ ಮೂಲಕ ಚುನಾವಣಾ ಆಯೋಗವು ಸ್ಥಾಪಿತ ಚುನಾವಣಾ ಕಾರ್ಯವಿಧಾನಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಜತೆಗೆ, ಸಾರ್ವತ್ರಿಕ ಮತದಾನದ ಮನೋಭಾವವನ್ನೇ ಬುಡಮೇಲು ಮಾಡುತ್ತಿದೆ’ ಎಂದು ಭಟ್ಟಾಚಾರ್ಯ ಕಿಡಿಕಾರಿದ್ದಾರೆ. </p><p>ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿಕೂಟದ ಭಾಗವಾಗಿರುವ ಸಿಪಿಐ (ಎಂಎಲ್) ಸೇರಿದಂತೆ ಇತರೆ ಪಕ್ಷಗಳ ತೀವ್ರ ವಿರೋಧದ ಹೊರತಾಗಿಯೂ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ.</p><p>‘ಎಸ್ಐಆರ್ ಪ್ರಕ್ರಿಯೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ನಮ್ಮ ಪಕ್ಷದ ಮೇಲೂ ಪರಿಣಾಮ ಬೀರಲಿದೆ. ಜತೆಗೆ, ಎರಡು ಕೋಟಿ ಮತದಾರರು ಇದರಿಂದ ಪ್ರಭಾವಿತರಾಗಬಹುದು’ ಎಂದು ಭಟ್ಟಾಚಾರ್ಯ ಹೇಳಿದ್ದಾರೆ.</p><p>ಬಿಜೆಪಿಗರು ಆರೋಪಿಸಿದಂತೆ ಬಿಹಾರದಲ್ಲಿ ಬಾಂಗ್ಲಾದೇಶ, ನೇಪಾಳ ಅಥವಾ ಮ್ಯಾನ್ಮಾರ್ನ ನುಸುಳುಕೋರರು ಮತದಾನದ ಹಕ್ಕು ಹೊಂದಿರುವ ಬಗ್ಗೆ ಪುರಾವೆಗಳಿಲ್ಲ ಎಂಬುದು ಚುನಾವಣಾ ಆಯೋಗದ ಅಂಕಿಅಂಶಗಳಿಂದ ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಕೇಂದ್ರ ಚುನಾವಣಾ ಆಯೋಗವು (ಸಿಇಸಿ) ಬಿಹಾರ ಮಾದರಿಯಲ್ಲಿ ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಲು ಸೂಚನೆ ನೀಡಿರುವ ಬಗ್ಗೆ ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p><p>‘ಎಸ್ಐಆರ್ ಪ್ರಕ್ರಿಯೆಯು ನೋಟು ರದ್ದತಿಯಂತಹ ವಿಧ್ವಂಸಕ ಕಸರತ್ತಾಗಿದೆ. ಇದು ಸಾಮೂಹಿಕ ಮತದಾನದ ಹಕ್ಕು ನಿರಾಕರಣೆ ಮತ್ತು ಮತ ಕಳ್ಳತನಕ್ಕೆ ಕಾರಣವಾಗಬಹುದು’ ಎಂದು ‘ಪಿಟಿಐ’ಗೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದಾರೆ.</p><p>‘ಚುನಾವಣಾ ಆಯೋಗವು ಪೌರತ್ವವನ್ನು ನಿರ್ಣಯಿಸುವ ಸಂಸ್ಥೆಯಲ್ಲ. ಆದರೂ, 75 ವರ್ಷಗಳ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಪೌರತ್ವವನ್ನು ಸಾಬೀತುಪಡಿಸುವಂತೆ ಜನರಿಗೆ ಚುನಾವಣಾ ಆಯೋಗವು ಸೂಚಿಸಿದೆ. ಈ ರೀತಿ ಹಿಂದೆಂದೂ ನಡೆದಿರಲಿಲ್ಲ’ ಎಂದು ಅವರು ಟೀಕಿಸಿದ್ದಾರೆ.</p><p>’ಎಸ್ಐಆರ್ ಪ್ರಕ್ರಿಯೆ ನಡೆಸುವ ಮೂಲಕ ಚುನಾವಣಾ ಆಯೋಗವು ಸ್ಥಾಪಿತ ಚುನಾವಣಾ ಕಾರ್ಯವಿಧಾನಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಜತೆಗೆ, ಸಾರ್ವತ್ರಿಕ ಮತದಾನದ ಮನೋಭಾವವನ್ನೇ ಬುಡಮೇಲು ಮಾಡುತ್ತಿದೆ’ ಎಂದು ಭಟ್ಟಾಚಾರ್ಯ ಕಿಡಿಕಾರಿದ್ದಾರೆ. </p><p>ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿಕೂಟದ ಭಾಗವಾಗಿರುವ ಸಿಪಿಐ (ಎಂಎಲ್) ಸೇರಿದಂತೆ ಇತರೆ ಪಕ್ಷಗಳ ತೀವ್ರ ವಿರೋಧದ ಹೊರತಾಗಿಯೂ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ.</p><p>‘ಎಸ್ಐಆರ್ ಪ್ರಕ್ರಿಯೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ನಮ್ಮ ಪಕ್ಷದ ಮೇಲೂ ಪರಿಣಾಮ ಬೀರಲಿದೆ. ಜತೆಗೆ, ಎರಡು ಕೋಟಿ ಮತದಾರರು ಇದರಿಂದ ಪ್ರಭಾವಿತರಾಗಬಹುದು’ ಎಂದು ಭಟ್ಟಾಚಾರ್ಯ ಹೇಳಿದ್ದಾರೆ.</p><p>ಬಿಜೆಪಿಗರು ಆರೋಪಿಸಿದಂತೆ ಬಿಹಾರದಲ್ಲಿ ಬಾಂಗ್ಲಾದೇಶ, ನೇಪಾಳ ಅಥವಾ ಮ್ಯಾನ್ಮಾರ್ನ ನುಸುಳುಕೋರರು ಮತದಾನದ ಹಕ್ಕು ಹೊಂದಿರುವ ಬಗ್ಗೆ ಪುರಾವೆಗಳಿಲ್ಲ ಎಂಬುದು ಚುನಾವಣಾ ಆಯೋಗದ ಅಂಕಿಅಂಶಗಳಿಂದ ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>