<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಜಾರಿಗೆ ಸಿದ್ಧತೆ ನಡೆದಿದ್ದು, ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಇಂದು (ಸೋಮವಾರ) ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳೊಂದಿಗೆ ಸಭೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಎಲ್ಲಾ ಡಿಎಂಗಳೊಂದಿಗೆ ಸಿಇಒ ವರ್ಚುವಲ್ ಮೂಲಕ ಸಭೆ ನಡೆಸಿದ್ದಾರೆ. ನಾಳೆ (ನ.4) ಎಸ್ಐಆರ್ ಜಾರಿ ಹಿನ್ನೆಲೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಬ್ಲಾಕ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮತ್ತು ಇತರ ಅಧಿಕಾರಿಗಳು ಮಂಗಳವಾರದಿಂದ ಮನೆ ಮನೆಗೆ ಭೇಟಿ ನೀಡಿ, ನಿರ್ಭಯವಾಗಿ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ.</p> <p>ನವೆಂಬರ್ 4ರಿಂದ ಡಿಸೆಂಬರ್ 4ರವರೆಗೆ ಎಸ್ಐಆರ್ ಪ್ರಕ್ರಿಯೆ ನಡೆಯಲಿದೆ. ಬಿಎಲ್ಒಗಳು ಮತದಾರರಿಗೆ ವಿಶಿಷ್ಟ ಗಣತಿ ನಮೂನೆಗಳನ್ನು ವಿತರಿಸುತ್ತಾರೆ. ಮತದಾರರು ಈ ಗಣತಿ ನಮೂನೆಗಳನ್ನು ಆಫ್ಲೈನ್ ಅಥವಾ ಆನ್ಲೈನ್ನಲ್ಲಿ ಭರ್ತಿ ಮಾಡಬಹುದು ಎಂದು ಅವರು ಹೇಳಿದ್ದಾರೆ.</p> .ಎಸ್ಐಆರ್ | ಹಾವಿನ ಹುತ್ತದಲ್ಲಿ ಕಾರ್ಬಾಲಿಕ್ ಆಮ್ಲ ಸುರಿದಂತೆ: ಸುವೇಂದು ಅಧಿಕಾರಿ
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಜಾರಿಗೆ ಸಿದ್ಧತೆ ನಡೆದಿದ್ದು, ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಇಂದು (ಸೋಮವಾರ) ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳೊಂದಿಗೆ ಸಭೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಎಲ್ಲಾ ಡಿಎಂಗಳೊಂದಿಗೆ ಸಿಇಒ ವರ್ಚುವಲ್ ಮೂಲಕ ಸಭೆ ನಡೆಸಿದ್ದಾರೆ. ನಾಳೆ (ನ.4) ಎಸ್ಐಆರ್ ಜಾರಿ ಹಿನ್ನೆಲೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಬ್ಲಾಕ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮತ್ತು ಇತರ ಅಧಿಕಾರಿಗಳು ಮಂಗಳವಾರದಿಂದ ಮನೆ ಮನೆಗೆ ಭೇಟಿ ನೀಡಿ, ನಿರ್ಭಯವಾಗಿ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ.</p> <p>ನವೆಂಬರ್ 4ರಿಂದ ಡಿಸೆಂಬರ್ 4ರವರೆಗೆ ಎಸ್ಐಆರ್ ಪ್ರಕ್ರಿಯೆ ನಡೆಯಲಿದೆ. ಬಿಎಲ್ಒಗಳು ಮತದಾರರಿಗೆ ವಿಶಿಷ್ಟ ಗಣತಿ ನಮೂನೆಗಳನ್ನು ವಿತರಿಸುತ್ತಾರೆ. ಮತದಾರರು ಈ ಗಣತಿ ನಮೂನೆಗಳನ್ನು ಆಫ್ಲೈನ್ ಅಥವಾ ಆನ್ಲೈನ್ನಲ್ಲಿ ಭರ್ತಿ ಮಾಡಬಹುದು ಎಂದು ಅವರು ಹೇಳಿದ್ದಾರೆ.</p> .ಎಸ್ಐಆರ್ | ಹಾವಿನ ಹುತ್ತದಲ್ಲಿ ಕಾರ್ಬಾಲಿಕ್ ಆಮ್ಲ ಸುರಿದಂತೆ: ಸುವೇಂದು ಅಧಿಕಾರಿ