<p><strong>ನವದೆಹಲಿ:</strong> ಕೇರಳ, ಉತ್ತರ ಪ್ರದೇಶ ಹಾಗೂ ಇತರ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.</p>.ಎಸ್ಐಆರ್ ಒತ್ತಡ ಆರೋಪ: ಕೇರಳದಲ್ಲಿ ಬಿಎಲ್ಒ ಆತ್ಮಹತ್ಯೆ.<p>ವಿವಿಧ ರಾಜ್ಯಗಳಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ವಿವಿಧ ರಾಜಕೀಯ ನಾಯಕರು ಸಲ್ಲಿಸಿದ್ದ ಹೊಸ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎಸ್ವಿಎನ್ ಭಟ್ಟಿ ಜಾಗೂ ಜೋಯ್ ಮಲ್ಯ ಬಾಗ್ಚಿ ಅವರಿದ್ದ ಪೀಠ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿತು.</p><p>ಕೇರಳದಲ್ಲಿ ಎಸ್ಐಆರ್ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಕೂಡ ನಿಗದಿಯಾಗಿವೆ. ಹೀಗಾಗಿ ಈ ಅರ್ಜಿಯನ್ನು ತುರ್ತಾಗಿ ಪರಿಗಣಿಸಬೇಕು ಎಂದು ಪೀಠಕ್ಕೆ ವಿನಂತಿ ಮಾಡಿಕೊಂಡರು.</p>.ಎಸ್ಐಆರ್ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ:ಚುನಾವಣಾ ಆಯೋಗಕ್ಕೆ ನೋಟಿಸ್ .<p>ಕೇರಳದಲ್ಲಿ ಎಸ್ಐಆರ್ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ನವೆಂಬರ್ 26 ರಂದು ನಡೆಸುವುದಾಗಿ ಹೇಳಿದ ಕೋರ್ಟ್, ಉಳಿದ ರಾಜ್ಯಗಳ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಪಟ್ಟಿ ಮಾಡುವುದಾಗಿ ಹೇಳಿತು.</p><p>ದೇಶದಾದ್ಯಂತ ಎಸ್ಐಆರ್ ನಡೆಸುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ.</p>.ಎಸ್ಐಆರ್ ಪ್ರಕ್ರಿಯೆಯನ್ನು 'ಮತಬಂಧನ' ಎಂದ ಮಮತಾ ಬ್ಯಾನರ್ಜಿ.<p>ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಪ್ರಶ್ನಿಸಿ ತಮಿಳುನಾಡಿನ ಡಿಎಂಕೆ ಹಾಗೂ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ನವೆಂಬರ್ 11ರಂದು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿತ್ತು.</p> .ಎಸ್ಐಆರ್ ನಿಯಮ ಉಲ್ಲಂಘನೆ: ಪಶ್ಚಿಮ ಬಂಗಾಳದ 8 ಬಿಎಲ್ಒಗಳಿಗೆ ಕಾರಣ ಕೇಳಿ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇರಳ, ಉತ್ತರ ಪ್ರದೇಶ ಹಾಗೂ ಇತರ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.</p>.ಎಸ್ಐಆರ್ ಒತ್ತಡ ಆರೋಪ: ಕೇರಳದಲ್ಲಿ ಬಿಎಲ್ಒ ಆತ್ಮಹತ್ಯೆ.<p>ವಿವಿಧ ರಾಜ್ಯಗಳಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ವಿವಿಧ ರಾಜಕೀಯ ನಾಯಕರು ಸಲ್ಲಿಸಿದ್ದ ಹೊಸ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎಸ್ವಿಎನ್ ಭಟ್ಟಿ ಜಾಗೂ ಜೋಯ್ ಮಲ್ಯ ಬಾಗ್ಚಿ ಅವರಿದ್ದ ಪೀಠ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿತು.</p><p>ಕೇರಳದಲ್ಲಿ ಎಸ್ಐಆರ್ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಕೂಡ ನಿಗದಿಯಾಗಿವೆ. ಹೀಗಾಗಿ ಈ ಅರ್ಜಿಯನ್ನು ತುರ್ತಾಗಿ ಪರಿಗಣಿಸಬೇಕು ಎಂದು ಪೀಠಕ್ಕೆ ವಿನಂತಿ ಮಾಡಿಕೊಂಡರು.</p>.ಎಸ್ಐಆರ್ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ:ಚುನಾವಣಾ ಆಯೋಗಕ್ಕೆ ನೋಟಿಸ್ .<p>ಕೇರಳದಲ್ಲಿ ಎಸ್ಐಆರ್ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ನವೆಂಬರ್ 26 ರಂದು ನಡೆಸುವುದಾಗಿ ಹೇಳಿದ ಕೋರ್ಟ್, ಉಳಿದ ರಾಜ್ಯಗಳ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಪಟ್ಟಿ ಮಾಡುವುದಾಗಿ ಹೇಳಿತು.</p><p>ದೇಶದಾದ್ಯಂತ ಎಸ್ಐಆರ್ ನಡೆಸುವ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ.</p>.ಎಸ್ಐಆರ್ ಪ್ರಕ್ರಿಯೆಯನ್ನು 'ಮತಬಂಧನ' ಎಂದ ಮಮತಾ ಬ್ಯಾನರ್ಜಿ.<p>ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಪ್ರಶ್ನಿಸಿ ತಮಿಳುನಾಡಿನ ಡಿಎಂಕೆ ಹಾಗೂ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ನವೆಂಬರ್ 11ರಂದು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿತ್ತು.</p> .ಎಸ್ಐಆರ್ ನಿಯಮ ಉಲ್ಲಂಘನೆ: ಪಶ್ಚಿಮ ಬಂಗಾಳದ 8 ಬಿಎಲ್ಒಗಳಿಗೆ ಕಾರಣ ಕೇಳಿ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>