<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗದ ‘ಎಸ್ಐಆರ್’ನಿಂದ ಆತಂಕಗೊಂಡು ಮೃತಪಟ್ಟವರ ಕುಟುಂಬಗಳನ್ನು ಭೇಟಿಮಾಡುವ ಉದ್ದೇಶದಿಂದ ಟಿಎಂಸಿ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಪಕ್ಷದ ನಾಯಕರನ್ನು ಒಳಗೊಂಡ ತಂಡಗಳನ್ನು ರಚಿಸಿದ್ದಾರೆ ಎಂದು ಟಿಎಂಸಿ ವಕ್ತಾರರು ಶನಿವಾರ ತಿಳಿಸಿದ್ದಾರೆ. </p><p>ಈ ತಂಡಗಳು ಮೃತಪಟ್ಟವರ ಕುಟುಂಬಗಳನ್ನು ಭೇಟಿಮಾಡಿ, ಅವರಿಗೆ ಬೇಕಾದ ನೆರವನ್ನು ಒದಗಿಸುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. </p><p>ಎಸ್ಐಆರ್ನಿಂದ ಆತಂಕಗೊಂಡು ಆತ್ಮಹತ್ಯೆ ಮಾಡಿಕೊಂಡಿರುವವರ ಕುಟುಂಬಗಳನ್ನು ಈ ತಂಡಗಳ ಸದಸ್ಯರು ವೈಯಕ್ತಿಕವಾಗಿ ಭೇಟಿ ಮಾಡಲಿದ್ದಾರೆ. ಆ ಕುಟುಂಬಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರಿಗೆ ಭಾವನಾತ್ಮಕ ಮತ್ತು ನೈತಿಕ ಬೆಂಬಲ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.</p><p>ಬಿಜೆಪಿ ಪಕ್ಷದ ರಾಜಕೀಯ ಹಿತಾಸಕ್ತಿಯ ಕಾರಣದಿಂದ ಚುನಾವಣಾ ಆಯೋಗವು ಆರಂಭಿಸಿರುವ ‘ಎಸ್ಐಆರ್’ನಿಂದ ಆತಂಕಕ್ಕೊಳಗಾಗಿ ರಾಜ್ಯದಲ್ಲಿ ಇದುವರೆಗೂ 7 ಮಂದಿ ಮೃತಪಟ್ಟಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗದ ‘ಎಸ್ಐಆರ್’ನಿಂದ ಆತಂಕಗೊಂಡು ಮೃತಪಟ್ಟವರ ಕುಟುಂಬಗಳನ್ನು ಭೇಟಿಮಾಡುವ ಉದ್ದೇಶದಿಂದ ಟಿಎಂಸಿ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಪಕ್ಷದ ನಾಯಕರನ್ನು ಒಳಗೊಂಡ ತಂಡಗಳನ್ನು ರಚಿಸಿದ್ದಾರೆ ಎಂದು ಟಿಎಂಸಿ ವಕ್ತಾರರು ಶನಿವಾರ ತಿಳಿಸಿದ್ದಾರೆ. </p><p>ಈ ತಂಡಗಳು ಮೃತಪಟ್ಟವರ ಕುಟುಂಬಗಳನ್ನು ಭೇಟಿಮಾಡಿ, ಅವರಿಗೆ ಬೇಕಾದ ನೆರವನ್ನು ಒದಗಿಸುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. </p><p>ಎಸ್ಐಆರ್ನಿಂದ ಆತಂಕಗೊಂಡು ಆತ್ಮಹತ್ಯೆ ಮಾಡಿಕೊಂಡಿರುವವರ ಕುಟುಂಬಗಳನ್ನು ಈ ತಂಡಗಳ ಸದಸ್ಯರು ವೈಯಕ್ತಿಕವಾಗಿ ಭೇಟಿ ಮಾಡಲಿದ್ದಾರೆ. ಆ ಕುಟುಂಬಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರಿಗೆ ಭಾವನಾತ್ಮಕ ಮತ್ತು ನೈತಿಕ ಬೆಂಬಲ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.</p><p>ಬಿಜೆಪಿ ಪಕ್ಷದ ರಾಜಕೀಯ ಹಿತಾಸಕ್ತಿಯ ಕಾರಣದಿಂದ ಚುನಾವಣಾ ಆಯೋಗವು ಆರಂಭಿಸಿರುವ ‘ಎಸ್ಐಆರ್’ನಿಂದ ಆತಂಕಕ್ಕೊಳಗಾಗಿ ರಾಜ್ಯದಲ್ಲಿ ಇದುವರೆಗೂ 7 ಮಂದಿ ಮೃತಪಟ್ಟಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>