<p><strong>ನವದೆಹಲಿ:</strong> ಬಿಹಾರದಲ್ಲಿ ಮತದಾರರ ಕರಡು ಪಟ್ಟಿ ಪ್ರಕಟಣೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಲ್ಲಿಸಲಾದ ಎಲ್ಲಾ ಅರ್ಜಿಗಳ ಕುರಿತು ಒಟ್ಟಿಗೆ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯಾ ಬಾಗ್ಚಿ ಅವರ ಪೀಠವು ಈ ಕುರಿತ ಅರ್ಜಿಗಳ ಅಂತಿಮ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಿದೆ.</p>.<p>ಎನ್ಜಿಒ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಶಂಕರ್ನಾರಾಯಣನ್, ಮತದಾರರ ಕರಡು ಪಟ್ಟಿ ಬಿಡುಗಡೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಅರ್ಜಿದಾರರು, ಮಧ್ಯಂತರ ಪರಿಹಾರಕ್ಕಾಗಿ ಒತ್ತಾಯಿಸುವಂತಿಲ್ಲ. ಈಗ ಆ ರೀತಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪನ್ನು ಉಲ್ಲೇಖಿಸಿತು.</p>.<p>ಈ ಹಿಂದಿನ ಆದೇಶದಂತೆ, ಎಸ್ಐಆರ್ ಪ್ರಕ್ರಿಯೆಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಪರಿಗಣಿಸುವುದನ್ನು ಮುಂದುವರಿಸಬೇಕು ಎಂದು ಎಂದು ಆಯೋಗಕ್ಕೆ ನ್ಯಾಯಪೀಠ ತಿಳಿಸಿದೆ. ಈ ಎರಡು ದಾಖಲೆಗಳು ‘ಊಹಾತ್ಮಕ ನಿಜಾಯಿತಿ ಹೊಂದಿರುತ್ತವೆ’ ಎಂದು ತಿಳಿಸಿದೆ.</p>.<p>ಸುಪ್ರೀಂ ಕೋರ್ಟ್ ನೀಡಿದ ಪ್ರಾಥಮಿಕ ಆದೇಶವನ್ನು ಆಯೋಗವು ಒಪ್ಪಿಕೊಂಡಿದೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಪಡಿತರ ಕಾರ್ಡ್ಗಳನ್ನು ಸ್ವೀಕರಿಸುವ ಅಗತ್ಯವಿದೆ ಎಂದು ಆಯೋಗವು ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದೆ.</p>.<p>‘ಪಡಿತರ ಕಾರ್ಡ್ ಅನ್ನು ಸುಲಭವಾಗಿ ನಕಲಿ ಮಾಡಲು ಸಾಧ್ಯವಿದೆ. ಆದರೆ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಯನ್ನು ಸುಲಭವಾಗಿ ನಕಲಿ ಸೃಷ್ಟಿಸಲಾಗದು. ಹೀಗಾಗಿ, ಈ ದಾಖಲಾತಿಗಳನ್ನು ಸ್ವೀಕರಿಸಬೇಕು’ ಎಂದು ನ್ಯಾಯಪೀಠವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದಲ್ಲಿ ಮತದಾರರ ಕರಡು ಪಟ್ಟಿ ಪ್ರಕಟಣೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಲ್ಲಿಸಲಾದ ಎಲ್ಲಾ ಅರ್ಜಿಗಳ ಕುರಿತು ಒಟ್ಟಿಗೆ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಾಯ್ಮಾಲ್ಯಾ ಬಾಗ್ಚಿ ಅವರ ಪೀಠವು ಈ ಕುರಿತ ಅರ್ಜಿಗಳ ಅಂತಿಮ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಿದೆ.</p>.<p>ಎನ್ಜಿಒ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಶಂಕರ್ನಾರಾಯಣನ್, ಮತದಾರರ ಕರಡು ಪಟ್ಟಿ ಬಿಡುಗಡೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಅರ್ಜಿದಾರರು, ಮಧ್ಯಂತರ ಪರಿಹಾರಕ್ಕಾಗಿ ಒತ್ತಾಯಿಸುವಂತಿಲ್ಲ. ಈಗ ಆ ರೀತಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪನ್ನು ಉಲ್ಲೇಖಿಸಿತು.</p>.<p>ಈ ಹಿಂದಿನ ಆದೇಶದಂತೆ, ಎಸ್ಐಆರ್ ಪ್ರಕ್ರಿಯೆಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಪರಿಗಣಿಸುವುದನ್ನು ಮುಂದುವರಿಸಬೇಕು ಎಂದು ಎಂದು ಆಯೋಗಕ್ಕೆ ನ್ಯಾಯಪೀಠ ತಿಳಿಸಿದೆ. ಈ ಎರಡು ದಾಖಲೆಗಳು ‘ಊಹಾತ್ಮಕ ನಿಜಾಯಿತಿ ಹೊಂದಿರುತ್ತವೆ’ ಎಂದು ತಿಳಿಸಿದೆ.</p>.<p>ಸುಪ್ರೀಂ ಕೋರ್ಟ್ ನೀಡಿದ ಪ್ರಾಥಮಿಕ ಆದೇಶವನ್ನು ಆಯೋಗವು ಒಪ್ಪಿಕೊಂಡಿದೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಪಡಿತರ ಕಾರ್ಡ್ಗಳನ್ನು ಸ್ವೀಕರಿಸುವ ಅಗತ್ಯವಿದೆ ಎಂದು ಆಯೋಗವು ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದೆ.</p>.<p>‘ಪಡಿತರ ಕಾರ್ಡ್ ಅನ್ನು ಸುಲಭವಾಗಿ ನಕಲಿ ಮಾಡಲು ಸಾಧ್ಯವಿದೆ. ಆದರೆ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಯನ್ನು ಸುಲಭವಾಗಿ ನಕಲಿ ಸೃಷ್ಟಿಸಲಾಗದು. ಹೀಗಾಗಿ, ಈ ದಾಖಲಾತಿಗಳನ್ನು ಸ್ವೀಕರಿಸಬೇಕು’ ಎಂದು ನ್ಯಾಯಪೀಠವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>