<p><strong>ನವದೆಹಲಿ:</strong> ‘ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್ಐಆರ್) ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಸಾಧ್ಯವಿಲ್ಲ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪುನರುಚ್ಛರಿಸಿದ್ದಾರೆ. </p>.<p>‘ಎಸ್ಐಆರ್‘ ಕುರಿತ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬಾಕಿ ಇರುವುದರಿಂದ ಮತ್ತು ಲೋಕಸಭೆಯ ನಿಯಮಗಳ ಪ್ರಕಾರ, ನ್ಯಾಯಾಲಗಳಲ್ಲಿ ವಿಚಾರಣಾ ಹಂತದಲ್ಲಿರುವ ವಿಷಯಗಳ ಕುರಿತು ಸದನದಲ್ಲಿ ಚರ್ಚಿಸಲು ಅವಕಾಶ ಇಲ್ಲ’ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p class="title">‘ಎಸ್ಐಆರ್’ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಬುಧವಾರವೂ ವಿರೋಧ ಪಕ್ಷಗಳು ಸದನದಲ್ಲಿ ಗದ್ದಲ ಎಬ್ಬಿಸಿದವು. ಮಧ್ಯಾಹ್ನ 2 ಗಂಟೆಗೆ ಮತ್ತೆ ಸದನ ಸೇರಿದಾಗಲೂ ವಿರೋಧ ಪಕ್ಷಗಳು ಪಟ್ಟು ಸಡಿಲಿಸದೆ ವಾಗ್ವಾದ ಮುಂದುವರಿಸಿತು. </p>.<p class="title">‘ನ್ಯಾಯಾಲಯಗಳಲ್ಲಿ ತೀರ್ಪು ಬಾಕಿ ಇರುವ ಪ್ರಕರಣಗಳ ಕುರಿತು ಚರ್ಚೆಗೆ ಸಂಸತ್ತಿನ ನಿಯಮಾನುಸಾರ ಅವಕಾಶ ಇಲ್ಲ ಎಂದ ರಿಜಿಜು, ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಬಗ್ಗೆಯೂ ಸದನದಲ್ಲಿ ಚರ್ಚೆ ಸಾಧ್ಯವಿಲ್ಲ’ ಎಂದರು.</p>.<p class="title">ಪ್ರಮುಖ ಕಾಯ್ದೆಗಳನ್ನು ಅಂಗೀಕರಿಸುವುದಕ್ಕೆ ಸಂಬಂಧಿಸಿದಂತೆ ನಡೆಯುವ ಚರ್ಚೆಯಲ್ಲಿ ಭಾಗವಹಿಸುವಂತೆ ಅವರು ಸದಸ್ಯರಿಗೆ ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್ಐಆರ್) ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಸಾಧ್ಯವಿಲ್ಲ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪುನರುಚ್ಛರಿಸಿದ್ದಾರೆ. </p>.<p>‘ಎಸ್ಐಆರ್‘ ಕುರಿತ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬಾಕಿ ಇರುವುದರಿಂದ ಮತ್ತು ಲೋಕಸಭೆಯ ನಿಯಮಗಳ ಪ್ರಕಾರ, ನ್ಯಾಯಾಲಗಳಲ್ಲಿ ವಿಚಾರಣಾ ಹಂತದಲ್ಲಿರುವ ವಿಷಯಗಳ ಕುರಿತು ಸದನದಲ್ಲಿ ಚರ್ಚಿಸಲು ಅವಕಾಶ ಇಲ್ಲ’ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p class="title">‘ಎಸ್ಐಆರ್’ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಬುಧವಾರವೂ ವಿರೋಧ ಪಕ್ಷಗಳು ಸದನದಲ್ಲಿ ಗದ್ದಲ ಎಬ್ಬಿಸಿದವು. ಮಧ್ಯಾಹ್ನ 2 ಗಂಟೆಗೆ ಮತ್ತೆ ಸದನ ಸೇರಿದಾಗಲೂ ವಿರೋಧ ಪಕ್ಷಗಳು ಪಟ್ಟು ಸಡಿಲಿಸದೆ ವಾಗ್ವಾದ ಮುಂದುವರಿಸಿತು. </p>.<p class="title">‘ನ್ಯಾಯಾಲಯಗಳಲ್ಲಿ ತೀರ್ಪು ಬಾಕಿ ಇರುವ ಪ್ರಕರಣಗಳ ಕುರಿತು ಚರ್ಚೆಗೆ ಸಂಸತ್ತಿನ ನಿಯಮಾನುಸಾರ ಅವಕಾಶ ಇಲ್ಲ ಎಂದ ರಿಜಿಜು, ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಬಗ್ಗೆಯೂ ಸದನದಲ್ಲಿ ಚರ್ಚೆ ಸಾಧ್ಯವಿಲ್ಲ’ ಎಂದರು.</p>.<p class="title">ಪ್ರಮುಖ ಕಾಯ್ದೆಗಳನ್ನು ಅಂಗೀಕರಿಸುವುದಕ್ಕೆ ಸಂಬಂಧಿಸಿದಂತೆ ನಡೆಯುವ ಚರ್ಚೆಯಲ್ಲಿ ಭಾಗವಹಿಸುವಂತೆ ಅವರು ಸದಸ್ಯರಿಗೆ ಮನವಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>