ಬುಧವಾರ, 3 ಡಿಸೆಂಬರ್ 2025
×
ADVERTISEMENT
ADVERTISEMENT

ಎಸ್‌ಐಆರ್ ಚರ್ಚೆಗೆ ಒಪ್ಪಿಗೆ: ಸ್ಪೀಕರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ:ಡಿ.9ರಂದು ಲೋಕಸಭೆಯಲ್ಲಿ ಚರ್ಚೆಗೆ ಅವಕಾಶ
Published : 2 ಡಿಸೆಂಬರ್ 2025, 23:30 IST
Last Updated : 2 ಡಿಸೆಂಬರ್ 2025, 23:30 IST
ಫಾಲೋ ಮಾಡಿ
Comments
ಕಾಲಮಿತಿ ನಿಗದಿಗೆ ಆಗ್ರಹ: ಸಭಾತ್ಯಾಗ
ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಕಾಲಮಿತಿಯಲ್ಲಿ ಚರ್ಚೆ ನಡೆಸಬೇಕೆಂಬ ವಿಚಾರವಾಗಿ ಸರ್ಕಾರ ಮತ್ತು ವಿರೋಧ ಪಕ್ಷಗಳ ಮಧ್ಯೆ ರಾಜ್ಯಸಭೆಯಲ್ಲಿ ಮಂಗಳವಾರವೂ ಜಟಾಪಟಿ ಮುಂದುವರಿಯಿತು. ಆದ್ಯತೆಯ ಮೇರೆಗೆ ಎಸ್‌ಐಆರ್‌ ಕುರಿತು ಚರ್ಚೆ ನಡೆಸಬೇಕು ಎಂದು ವಿಪಕ್ಷಗಳ ನಾಯಕರು ಆಗ್ರಹಿಸಿದರು. ಆದರೆ ‘ವಂದೇ ಮಾತರಂ’ ಕುರಿತು ಮೊದಲು ಚರ್ಚೆ ನಡೆಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು ಒತ್ತಿ ಹೇಳಿದರು. ಎಸ್‌ಐಆರ್‌ ಕುರಿತ ಚರ್ಚೆಗೆ ಸರ್ಕಾರ ನಿರಾಕರಿಸುತ್ತಿದ್ದಂತೆಯೇ ವಿಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗಿ, ಸಭಾತ್ಯಾಗ ಮಾಡಿದರು. ಮಧ್ಯಾಹ್ನ 2 ಗಂಟೆಯ ಬಳಿಕ ಮತ್ತೆ ಕಲಾಪ ಆರಂಭವಾದಾಗಲೂ ಇದೇ ವಿಚಾರವಾಗಿ ವಾಗ್ವಾದ ನಡೆಯಿತು. ಮತ್ತೆ ವಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.
ರಾಜ್ಯಸಭೆಯಲ್ಲಿ ಎಸ್‌ಐಆರ್‌ ಕುರಿತ ಚರ್ಚೆಗೆ ಸರ್ಕಾರವು ಸಿದ್ಧವಿದೆ. ಆದರೆ ವಿಪಕ್ಷಗಳು ಚರ್ಚೆಗೆ ಕಾಲಮಿತಿ ನಿಗದಿ ಮಾಡುವಂತಿಲ್ಲ 
ಕಿರಣ್‌ ರಿಜಿಜು, ಸಂಸದೀಯ ವ್ಯವಹಾರಗಳ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT