<p><strong>ಕೋಲ್ಕತ್ತ:</strong> ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ (ಎಸ್ಐಆರ್) ಕಾರ್ಯವು ದಾಖಲೆಗಳನ್ನು ಸರಿಪಡಿಸುವ ಬದಲಿಗೆ, ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಚಟುವಟಿಕೆಯಾಗಿ ಪರಿವರ್ತಿತವಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. </p>.<p>ಈ ಕುರಿತು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಶನಿವಾರ ಪತ್ರ ಬರೆದಿರುವ ಅವರು, ‘ಆಯೋಗವು ರಾಜಕೀಯ ಪಕ್ಷಪಾತ ಮತ್ತು ದರ್ಪದಿಂದ ವರ್ತಿಸುತ್ತಿದೆ’ ಎಂದು ದೂರಿದ್ದಾರೆ. </p>.<p>ಇಡೀ ಪ್ರಕ್ರಿಯೆಯು ಹೆಚ್ಚಾಗಿ ಯಾಂತ್ರಿಕವಾಗಿದ್ದು, ತಾಂತ್ರಿಕ ದತ್ತಾಂಶಗಳಿಗೆ ಒತ್ತು ನೀಡಲಾಗಿದೆ. ಮನಸ್ಸು, ಸೂಕ್ಷ್ಮ ಮತ್ತು ಮಾನವ ಸ್ಪರ್ಶದ ಕೊರತೆಯಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ. </p>.<p>‘ಒಟ್ಟಾರೆ ಎಸ್ಐಆರ್ ಕಸರತ್ತಿನ ಉದ್ದೇಶ ತಿದ್ದುಪಡಿ ಅಥವಾ ಸೇರ್ಪಡೆಯಲ್ಲ. ಬದಲಿಗೆ ಕೇವಲ ಹೆಸರುಗಳನ್ನು ಅಳಿಸುವ ಮತ್ತು ಹೊರಗಿಡುವ ಪ್ರಕ್ರಿಯೆ’ ಎಂದು ಮಮತಾ ಟೀಕಿಸಿದ್ದಾರೆ. </p>.<p>ಕಾಗುಣಿತ ದೋಷಗಳು, ವಯಸ್ಸಿನ ವ್ಯತ್ಯಾಸಗಳಿಗಾಗಿ ಜನಸಾಮಾನ್ಯರನ್ನು ವಿಚಾರಣೆಗೆ ಬರುವಂತೆ ಮಾಡುವುದು ಒಂದು ರೀತಿಯ ಕಿರುಕುಳ. ಅಲ್ಲದೆ ಇದರಿಂದ ಅವರ ದಿನದ ಕೂಲಿಯೂ ನಷ್ಟವಾಗುತ್ತದೆ ಎಂದು ಅವರು ಕಿಡಿಕಾರಿದ್ದಾರೆ. </p>.<p>ವಿವಾಹದ ನಂತರ ಮಹಿಳೆಯ ಉಪನಾಮಗಳು ಬದಲಾಗುತ್ತವೆ. ಆದರೆ ಅದನ್ನೇ ಎತ್ತಿ ತೋರಿಸಿ, ಅವರಿಗೆ ಗುರುತು ಸಾಬೀತುಪಡಿಸಲು ಸೂಚಿಸಲಾಗುತ್ತಿದೆ. ಇದು ಗಂಭೀರ ಅವಮಾನವಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ (ಎಸ್ಐಆರ್) ಕಾರ್ಯವು ದಾಖಲೆಗಳನ್ನು ಸರಿಪಡಿಸುವ ಬದಲಿಗೆ, ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಚಟುವಟಿಕೆಯಾಗಿ ಪರಿವರ್ತಿತವಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. </p>.<p>ಈ ಕುರಿತು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಶನಿವಾರ ಪತ್ರ ಬರೆದಿರುವ ಅವರು, ‘ಆಯೋಗವು ರಾಜಕೀಯ ಪಕ್ಷಪಾತ ಮತ್ತು ದರ್ಪದಿಂದ ವರ್ತಿಸುತ್ತಿದೆ’ ಎಂದು ದೂರಿದ್ದಾರೆ. </p>.<p>ಇಡೀ ಪ್ರಕ್ರಿಯೆಯು ಹೆಚ್ಚಾಗಿ ಯಾಂತ್ರಿಕವಾಗಿದ್ದು, ತಾಂತ್ರಿಕ ದತ್ತಾಂಶಗಳಿಗೆ ಒತ್ತು ನೀಡಲಾಗಿದೆ. ಮನಸ್ಸು, ಸೂಕ್ಷ್ಮ ಮತ್ತು ಮಾನವ ಸ್ಪರ್ಶದ ಕೊರತೆಯಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ. </p>.<p>‘ಒಟ್ಟಾರೆ ಎಸ್ಐಆರ್ ಕಸರತ್ತಿನ ಉದ್ದೇಶ ತಿದ್ದುಪಡಿ ಅಥವಾ ಸೇರ್ಪಡೆಯಲ್ಲ. ಬದಲಿಗೆ ಕೇವಲ ಹೆಸರುಗಳನ್ನು ಅಳಿಸುವ ಮತ್ತು ಹೊರಗಿಡುವ ಪ್ರಕ್ರಿಯೆ’ ಎಂದು ಮಮತಾ ಟೀಕಿಸಿದ್ದಾರೆ. </p>.<p>ಕಾಗುಣಿತ ದೋಷಗಳು, ವಯಸ್ಸಿನ ವ್ಯತ್ಯಾಸಗಳಿಗಾಗಿ ಜನಸಾಮಾನ್ಯರನ್ನು ವಿಚಾರಣೆಗೆ ಬರುವಂತೆ ಮಾಡುವುದು ಒಂದು ರೀತಿಯ ಕಿರುಕುಳ. ಅಲ್ಲದೆ ಇದರಿಂದ ಅವರ ದಿನದ ಕೂಲಿಯೂ ನಷ್ಟವಾಗುತ್ತದೆ ಎಂದು ಅವರು ಕಿಡಿಕಾರಿದ್ದಾರೆ. </p>.<p>ವಿವಾಹದ ನಂತರ ಮಹಿಳೆಯ ಉಪನಾಮಗಳು ಬದಲಾಗುತ್ತವೆ. ಆದರೆ ಅದನ್ನೇ ಎತ್ತಿ ತೋರಿಸಿ, ಅವರಿಗೆ ಗುರುತು ಸಾಬೀತುಪಡಿಸಲು ಸೂಚಿಸಲಾಗುತ್ತಿದೆ. ಇದು ಗಂಭೀರ ಅವಮಾನವಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>