<p><strong>ಕೋಲ್ಕತ್ತ:</strong> ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಬಾಂಗ್ಲಾದೇಶದಿಂದ ಪಲಾಯನ ಮಾಡಿ ಪಶ್ಚಿಮ ಬಂಗಾಳದಲ್ಲಿ ನೆಲಸಿರುವ ಹಿಂದೂಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಸಿಪಿಎಂನ ಹಿರಿಯ ನಾಯಕ ಕಾಂತಿ ಗಂಗೂಲಿ ಹೇಳಿದ್ದಾರೆ.</p>.<p>ದಾಖಲೆಗಳ ಪರಿಶೀಲನೆಗಾಗಿ ಶುಕ್ರವಾರ ಅಧಿಕಾರಿಗಳ ಮುಂದೆ ಹಾಜರಾಗಲಿರುವ 82 ವರ್ಷ ವಯಸ್ಸಿನ ಅವರು, ಚುನಾವಣಾ ಆಯೋಗ ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡರು.</p>.<p>‘ನಾನು ಎಸ್ಐಆರ್ ಪರವಾಗಿದ್ದೇನೆ. ಆದರೆ ಇದು ಬಲು ದೊಡ್ಡ ಮತ್ತು ಹೆಚ್ಚು ಸವಾಲಿನ ಕೆಲಸ. ಈ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ನಿಖರವಾಗಿ ಮಾಡಲು, ಹೆಚ್ಚಿನ ಸಮಯ ನಿಗದಿಪಡಿಸಬೇಕಾಗಿತ್ತು. ಭಾರತವು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶವಾಗಿರುವ ಕಾರಣ, ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆಗೆ ಹೆಚ್ಚಿನ ಸಮಯ ನೀಡಬೇಕಾಗಿತ್ತು’ ಎಂದು ತಿಳಿಸಿದರು.</p>.<p>‘ನಾನು ಸುಂದರಬನ ಪ್ರದೇಶದವನು. ಬಾಂಗ್ಲಾದೇಶದಿಂದ ಬಂದು ನೆಲಸಿರುವ ಹಿಂದೂಗಳು ಅಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಪ್ರಕ್ರಿಯೆ ಅವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ’ ಎಂದರು.</p>.<p>‘ಚುನಾವಣಾ ಆಯೋಗವು ಸೂಕ್ತ ಸಿದ್ಧತೆ ಮಾಡಿಕೊಂಡು ಎಸ್ಐಆರ್ಗಾಗಿ ವಿಸ್ತೃತ ಮಾರ್ಗಸೂಚಿ ರೂಪಿಸಬೇಕಿತ್ತು. ಹಾಗಾದಲ್ಲಿ, ಈ ಪ್ರಕ್ರಿಯೆ ಬಗ್ಗೆ ಮತದಾರರಲ್ಲಿ ತಪ್ಪು ಅಭಿಪ್ರಾಯ ಮೂಡುವುದನ್ನು ತಡೆಯಬಹುದಿತ್ತು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಬಾಂಗ್ಲಾದೇಶದಿಂದ ಪಲಾಯನ ಮಾಡಿ ಪಶ್ಚಿಮ ಬಂಗಾಳದಲ್ಲಿ ನೆಲಸಿರುವ ಹಿಂದೂಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಸಿಪಿಎಂನ ಹಿರಿಯ ನಾಯಕ ಕಾಂತಿ ಗಂಗೂಲಿ ಹೇಳಿದ್ದಾರೆ.</p>.<p>ದಾಖಲೆಗಳ ಪರಿಶೀಲನೆಗಾಗಿ ಶುಕ್ರವಾರ ಅಧಿಕಾರಿಗಳ ಮುಂದೆ ಹಾಜರಾಗಲಿರುವ 82 ವರ್ಷ ವಯಸ್ಸಿನ ಅವರು, ಚುನಾವಣಾ ಆಯೋಗ ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡರು.</p>.<p>‘ನಾನು ಎಸ್ಐಆರ್ ಪರವಾಗಿದ್ದೇನೆ. ಆದರೆ ಇದು ಬಲು ದೊಡ್ಡ ಮತ್ತು ಹೆಚ್ಚು ಸವಾಲಿನ ಕೆಲಸ. ಈ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ನಿಖರವಾಗಿ ಮಾಡಲು, ಹೆಚ್ಚಿನ ಸಮಯ ನಿಗದಿಪಡಿಸಬೇಕಾಗಿತ್ತು. ಭಾರತವು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶವಾಗಿರುವ ಕಾರಣ, ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆಗೆ ಹೆಚ್ಚಿನ ಸಮಯ ನೀಡಬೇಕಾಗಿತ್ತು’ ಎಂದು ತಿಳಿಸಿದರು.</p>.<p>‘ನಾನು ಸುಂದರಬನ ಪ್ರದೇಶದವನು. ಬಾಂಗ್ಲಾದೇಶದಿಂದ ಬಂದು ನೆಲಸಿರುವ ಹಿಂದೂಗಳು ಅಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಪ್ರಕ್ರಿಯೆ ಅವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ’ ಎಂದರು.</p>.<p>‘ಚುನಾವಣಾ ಆಯೋಗವು ಸೂಕ್ತ ಸಿದ್ಧತೆ ಮಾಡಿಕೊಂಡು ಎಸ್ಐಆರ್ಗಾಗಿ ವಿಸ್ತೃತ ಮಾರ್ಗಸೂಚಿ ರೂಪಿಸಬೇಕಿತ್ತು. ಹಾಗಾದಲ್ಲಿ, ಈ ಪ್ರಕ್ರಿಯೆ ಬಗ್ಗೆ ಮತದಾರರಲ್ಲಿ ತಪ್ಪು ಅಭಿಪ್ರಾಯ ಮೂಡುವುದನ್ನು ತಡೆಯಬಹುದಿತ್ತು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>