<p><strong>ಕೊಚ್ಚಿ</strong>: ಶಬರಿಮಲೆ ದೇವಾಲಯದ ಚಿನ್ನ ನಾಪತ್ತೆ ಪ್ರಕರಣದ ಆರೋಪಿ ಮುಖ್ಯ ಅರ್ಚಕ ಕಂಡರಾರು ರಾಜೀವರು (ತಂತ್ರಿ) ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಶುಕ್ರವಾರ ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p>.<p>‘ವಾಸ್ತವಾಂಶ, ನಿರ್ದಿಷ್ಟ ಸಂಗತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಕಂಡರಾರು ರಾಜೀವರು ಅವರಿಗೆ ಜಾಮೀನು ನೀಡಲಾಗಿದೆ’ ಎಂದು ಪ್ರತಿಪಾದಿಸಿರುವ ಎಸ್ಐಟಿ, ಜಾಮೀನು ರದ್ದುಗೊಳಿಸುವಂತೆ ಕೇಳಿದೆ.</p>.<p>ದೇವಾಲಯದ ಚಿನ್ನ ನಾಪತ್ತೆ ಪ್ರಕರಣದಲ್ಲಿ ಸಾಕ್ಷ್ಯಾಧಾರದ ಕೊರತೆಯ ಕಾರಣ ಕೊಲ್ಲಂನ ವಿಚಾರಣಾ ಆಯುಕ್ತ ಮತ್ತು ವಿಚಕ್ಷಣ ನಾಯಾಲಯದ ವಿಶೇಷ ನ್ಯಾಯಾಧೀಶ ಫೆಬ್ರುವರಿ 18ರಂದು ಆರೋಪಿಯಾದ ಮುಖ್ಯ ಅರ್ಚಕ ಕಂಡರಾರರು ರಾಜೀವರು ಅವರಿಗೆ ಜಾಮೀನು ನೀಡಿದ್ದರು.</p>.<p>ದೇವಾಲಯದ ದ್ವಾರಪಾಲಕ ವಿಗ್ರಹಗಳು ಮತ್ತು ಗರ್ಭಗುಡಿಯ ಬಾಗಿಲು ಚೌಕಟ್ಟುಗಳಿಂದ ಚಿನ್ನವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ಶಬರಿಮಲೆ ದೇವಾಲಯದ ಚಿನ್ನ ನಾಪತ್ತೆ ಪ್ರಕರಣದ ಆರೋಪಿ ಮುಖ್ಯ ಅರ್ಚಕ ಕಂಡರಾರು ರಾಜೀವರು (ತಂತ್ರಿ) ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಶುಕ್ರವಾರ ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p>.<p>‘ವಾಸ್ತವಾಂಶ, ನಿರ್ದಿಷ್ಟ ಸಂಗತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಕಂಡರಾರು ರಾಜೀವರು ಅವರಿಗೆ ಜಾಮೀನು ನೀಡಲಾಗಿದೆ’ ಎಂದು ಪ್ರತಿಪಾದಿಸಿರುವ ಎಸ್ಐಟಿ, ಜಾಮೀನು ರದ್ದುಗೊಳಿಸುವಂತೆ ಕೇಳಿದೆ.</p>.<p>ದೇವಾಲಯದ ಚಿನ್ನ ನಾಪತ್ತೆ ಪ್ರಕರಣದಲ್ಲಿ ಸಾಕ್ಷ್ಯಾಧಾರದ ಕೊರತೆಯ ಕಾರಣ ಕೊಲ್ಲಂನ ವಿಚಾರಣಾ ಆಯುಕ್ತ ಮತ್ತು ವಿಚಕ್ಷಣ ನಾಯಾಲಯದ ವಿಶೇಷ ನ್ಯಾಯಾಧೀಶ ಫೆಬ್ರುವರಿ 18ರಂದು ಆರೋಪಿಯಾದ ಮುಖ್ಯ ಅರ್ಚಕ ಕಂಡರಾರರು ರಾಜೀವರು ಅವರಿಗೆ ಜಾಮೀನು ನೀಡಿದ್ದರು.</p>.<p>ದೇವಾಲಯದ ದ್ವಾರಪಾಲಕ ವಿಗ್ರಹಗಳು ಮತ್ತು ಗರ್ಭಗುಡಿಯ ಬಾಗಿಲು ಚೌಕಟ್ಟುಗಳಿಂದ ಚಿನ್ನವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>