<p><strong>ಕೋಲ್ಕತ್ತ: </strong>ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರನ್ನು ಪಶ್ಚಿಮ ಬಂಗಾಳದಿಂದ ರಾಜ್ಯಸಭಾ ಚುನಾವಣೆಗೆ ನಿಲ್ಲಿಸುವ ವಿಚಾರದಲ್ಲಿ ಆ ಪಕ್ಷದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ.</p>.<p>26 ಶಾಸಕರನ್ನು ಹೊಂದಿರುವ ಸಿಪಿಎಂಗೆ ಏಕಾಂಗಿಯಾಗಿ ಒಂದು ಸ್ಥಾನ ಗೆಲ್ಲುವ ಶಕ್ತಿ ಇಲ್ಲ. ಆದರೆ ಯೆಚೂರಿ ಅವರನ್ನು ಕಣಕ್ಕೆ ಇಳಿಸಿದರೆ ಬೆಂಬಲ ನೀಡುವುದಗಿ 45 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಬೆಂಬಲ ಪಡೆಯುವ ವಿಚಾರದಲ್ಲಿ ಸಿಪಿಎಂ ಒಳಗಡೆ ಭಿನ್ನಮತ ಉದ್ಭವಿಸಿದೆ.</p>.<p>ಟಿಎಂಸಿ ಅಭ್ಯರ್ಥಿಗಳ ಘೋಷಣೆ: ಮುಂಬರುವ ರಾಜ್ಯಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭಾನುವಾರ ಬಿಡುಗಡೆ ಮಾಡಿದ್ದಾರೆ.</p>.<p>ಅರ್ಪಿತಾ ಘೋಷ್, ಮೌಸಮ್ ನೂರ್, ದಿನೇಶ್ ತ್ರಿವೇದಿ ಹಾಗೂ ಸುಬ್ರತಾ ಬಕ್ಷಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ನೀಡಿದ ಅವರು, ‘ಮಹಿಳಾ ಸಬಲೀಕರಣಕ್ಕೆ ನನ್ನ ನಿರಂತರವಾದ ಪ್ರಯತ್ನ ಮುಂದುವರಿದಿದೆ. ಇಬ್ಬರು ಮಹಿಳೆಯರಿಗೆ ಅವಕಾಶ ನೀಡಿರುವುದು ಹೆಮ್ಮೆ ಎನಿಸುತ್ತಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರನ್ನು ಪಶ್ಚಿಮ ಬಂಗಾಳದಿಂದ ರಾಜ್ಯಸಭಾ ಚುನಾವಣೆಗೆ ನಿಲ್ಲಿಸುವ ವಿಚಾರದಲ್ಲಿ ಆ ಪಕ್ಷದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ.</p>.<p>26 ಶಾಸಕರನ್ನು ಹೊಂದಿರುವ ಸಿಪಿಎಂಗೆ ಏಕಾಂಗಿಯಾಗಿ ಒಂದು ಸ್ಥಾನ ಗೆಲ್ಲುವ ಶಕ್ತಿ ಇಲ್ಲ. ಆದರೆ ಯೆಚೂರಿ ಅವರನ್ನು ಕಣಕ್ಕೆ ಇಳಿಸಿದರೆ ಬೆಂಬಲ ನೀಡುವುದಗಿ 45 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಬೆಂಬಲ ಪಡೆಯುವ ವಿಚಾರದಲ್ಲಿ ಸಿಪಿಎಂ ಒಳಗಡೆ ಭಿನ್ನಮತ ಉದ್ಭವಿಸಿದೆ.</p>.<p>ಟಿಎಂಸಿ ಅಭ್ಯರ್ಥಿಗಳ ಘೋಷಣೆ: ಮುಂಬರುವ ರಾಜ್ಯಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭಾನುವಾರ ಬಿಡುಗಡೆ ಮಾಡಿದ್ದಾರೆ.</p>.<p>ಅರ್ಪಿತಾ ಘೋಷ್, ಮೌಸಮ್ ನೂರ್, ದಿನೇಶ್ ತ್ರಿವೇದಿ ಹಾಗೂ ಸುಬ್ರತಾ ಬಕ್ಷಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ನೀಡಿದ ಅವರು, ‘ಮಹಿಳಾ ಸಬಲೀಕರಣಕ್ಕೆ ನನ್ನ ನಿರಂತರವಾದ ಪ್ರಯತ್ನ ಮುಂದುವರಿದಿದೆ. ಇಬ್ಬರು ಮಹಿಳೆಯರಿಗೆ ಅವಕಾಶ ನೀಡಿರುವುದು ಹೆಮ್ಮೆ ಎನಿಸುತ್ತಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>