ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು, ‘ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆಗಳು ಪ್ರತ್ಯೇಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತವೆ. ಇವು ದೇಶದ್ರೋಹಕ್ಕೆ ಸಂಬಂಧಿಸಿದ ಅಪರಾಧಗಳೆಡೆಗೆ ಗಮನ ನೀಡುವುದಿಲ್ಲ. ಹೀಗಾಗಿ ದೇಶದ್ರೋಹಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಕಾನೂನಿನ ಅಗತ್ಯವಿದೆ’ ಎಂದು ಹೇಳಿದ್ದಾರೆ.