<p><strong>ಶ್ರೀನಗರ:</strong> ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಕೆಲವೇ ತಿಂಗಳಲ್ಲಿ ಸಹಜ ಸ್ಥಿತಿಗೆ ಬರಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಹೇಳಿದ್ದಾರೆ. </p><p>'ಇಲ್ಲಿನ ಶಾಂತಿಯುತ ವಾತಾವರಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗದವರು ಅಂತ್ಯಕ್ಕೆ ಸಿದ್ದರಾಗಬೇಕು. ಅಂತವರಿಗೆ ಇಲ್ಲಿನ ಜನರು ಈ ಹಿಂದೆಯೂ ತಕ್ಕ ಉತ್ತರ ನೀಡಿದ್ದಾರೆ. ಈಗಲೂ ಅದೇ ಪರಿಸ್ಥಿತಿಯಿದೆ. ಕೆಲವೇ ತಿಂಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿದೆ ಎಂಬ ನಂಬಿಕೆ ನನಗಿದೆ' ಎಂದು ಹೇಳಿದ್ದಾರೆ. </p><p>ಕಳೆದ ಕೆಲವು ತಿಂಗಳುಗಳಿಂದ ಕಣಿವೆ ರಾಜ್ಯದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಈಗಲೂ ಮುಂದುವರಿದಿದೆ. </p><p>ಏತನ್ಮಧ್ಯೆ ಕೇಂದ್ರ ಬಜೆಟ್ ಅನ್ನು ಮನೋಜ್ ಸಿನ್ಹಾ ಸ್ವಾಗತಿಸಿದ್ದು, 'ಸಂಸತ್ತಿನಲ್ಲಿ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ' ಎಂದು ಬಣ್ಣಿಸಿದ್ದಾರೆ. </p><p>'ಅಭಿವೃದ್ಧಿ ಹೊಂದಿದ ಭಾರತಕ್ಕೆ ಇದು ಭದ್ರ ಬುನಾದಿಯಾಗಲಿದೆ. ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯೂ ಸಾಧ್ಯವಾಗಲಿದೆ' ಎಂದು ಹೇಳಿದ್ದಾರೆ. </p><p>'ಬಜೆಟ್ ರೈತರು, ಯುವ ಜನರು, ಮಹಿಳೆಯರು ಹಾಗೂ ಬಡವರ ಮೇಲೆ ಹೆಚ್ಚಿನ ಗಮನ ಹರಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಮಗ್ರ ಅಭಿವೃದ್ಧಿಗೆ ಹಣಕಾಸಿನ ನೆರವು ಒದಗಿಸಲಾಗಿದೆ' ಎಂದು ಹೇಳಿದ್ದಾರೆ. </p>.ಜಮ್ಮು: ಉಗ್ರರ ಒಳನುಸುಳಿವಿಕೆ ಯತ್ನ ವಿಫಲಗೊಳಿಸಿದ ಸೇನೆ.ಜಮ್ಮು | ದೋಡಾದಲ್ಲಿ ಗುಂಡಿನ ಕಾಳಗ: ನಾಲ್ವರು ಯೋಧರು ಹುತಾತ್ಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಕೆಲವೇ ತಿಂಗಳಲ್ಲಿ ಸಹಜ ಸ್ಥಿತಿಗೆ ಬರಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಹೇಳಿದ್ದಾರೆ. </p><p>'ಇಲ್ಲಿನ ಶಾಂತಿಯುತ ವಾತಾವರಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗದವರು ಅಂತ್ಯಕ್ಕೆ ಸಿದ್ದರಾಗಬೇಕು. ಅಂತವರಿಗೆ ಇಲ್ಲಿನ ಜನರು ಈ ಹಿಂದೆಯೂ ತಕ್ಕ ಉತ್ತರ ನೀಡಿದ್ದಾರೆ. ಈಗಲೂ ಅದೇ ಪರಿಸ್ಥಿತಿಯಿದೆ. ಕೆಲವೇ ತಿಂಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿದೆ ಎಂಬ ನಂಬಿಕೆ ನನಗಿದೆ' ಎಂದು ಹೇಳಿದ್ದಾರೆ. </p><p>ಕಳೆದ ಕೆಲವು ತಿಂಗಳುಗಳಿಂದ ಕಣಿವೆ ರಾಜ್ಯದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಈಗಲೂ ಮುಂದುವರಿದಿದೆ. </p><p>ಏತನ್ಮಧ್ಯೆ ಕೇಂದ್ರ ಬಜೆಟ್ ಅನ್ನು ಮನೋಜ್ ಸಿನ್ಹಾ ಸ್ವಾಗತಿಸಿದ್ದು, 'ಸಂಸತ್ತಿನಲ್ಲಿ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ' ಎಂದು ಬಣ್ಣಿಸಿದ್ದಾರೆ. </p><p>'ಅಭಿವೃದ್ಧಿ ಹೊಂದಿದ ಭಾರತಕ್ಕೆ ಇದು ಭದ್ರ ಬುನಾದಿಯಾಗಲಿದೆ. ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯೂ ಸಾಧ್ಯವಾಗಲಿದೆ' ಎಂದು ಹೇಳಿದ್ದಾರೆ. </p><p>'ಬಜೆಟ್ ರೈತರು, ಯುವ ಜನರು, ಮಹಿಳೆಯರು ಹಾಗೂ ಬಡವರ ಮೇಲೆ ಹೆಚ್ಚಿನ ಗಮನ ಹರಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಮಗ್ರ ಅಭಿವೃದ್ಧಿಗೆ ಹಣಕಾಸಿನ ನೆರವು ಒದಗಿಸಲಾಗಿದೆ' ಎಂದು ಹೇಳಿದ್ದಾರೆ. </p>.ಜಮ್ಮು: ಉಗ್ರರ ಒಳನುಸುಳಿವಿಕೆ ಯತ್ನ ವಿಫಲಗೊಳಿಸಿದ ಸೇನೆ.ಜಮ್ಮು | ದೋಡಾದಲ್ಲಿ ಗುಂಡಿನ ಕಾಳಗ: ನಾಲ್ವರು ಯೋಧರು ಹುತಾತ್ಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>