<p><strong>ಲಖನೌ</strong>: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಪೀರ್ ಪಂಜಾಲ್ ಮತ್ತು ರಜೌರಿ– ಪೂಂಛ್ ಪ್ರದೇಶಗಳಲ್ಲಿ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಾಗಿವೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸೋಮವಾರ ತಿಳಿಸಿದ್ದಾರೆ.</p>.<p>ಲಖನೌನಲ್ಲಿ ನಡೆದ 76ನೇ ಸೇನಾ ದಿನದ ಪರೇಡ್ನಲ್ಲಿ ಮಾತನಾಡಿದ ಅವರು, ‘ಭದ್ರತಾ ಪಡೆಗಳ ಸತತ ಪರಿಶ್ರಮದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ’ ಎಂದರು.</p>.<p>‘ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಕದನ ವಿರಾಮ ಇದೆ. ಆದರೆ, ದೇಶದ ಒಳಗೆ ಉಗ್ರರು ನುಸುಳುವ ಯತ್ನಗಳನ್ನು ಗಮನಿಸಿದಾಗ, ಗಡಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಡಿಮೆಯಾಗಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಅನೇಕ ಒಳನುಸುಳುವಿಕೆ ಸಂಚುಗಳನ್ನು ಸೇನೆ ವಿಫಲಗೊಳಿಸಿದೆ’ ಎಂದು ತಿಳಿಸಿದರು.</p>.<p>‘ಈಶಾನ್ಯ ಭಾರತದಲ್ಲಿ ಇತ್ತೀಚೆಗೆ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಶಾಂತಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಅಲ್ಲದೇ ಬಂಡುಕೋರ ಗುಂಪುಗಳೊಂದಿಗೆ ಶಾಂತಿ ಮಾತುಕತೆ ನಡೆಸಲಾಗಿದೆ. ಇದರ ಫಲವಾಗಿ ಆ ಪ್ರದೇಶದಲ್ಲಿ ಇಂದು ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಶಾಂತಿಯನ್ನು ಮರುಸ್ಥಾಪಿಸುವ ವಿಚಾರದಲ್ಲಿ ಭಾರತದ ಕ್ರಿಯಾಶೀಲ ನೀತಿಗಳು ಮಹತ್ವದ ಪಾತ್ರ ವಹಿಸುತ್ತವೆ. ಸರ್ಕಾರದ ನೀತಿ ಮತ್ತು ಸೇನೆಯ ಪರಿಶ್ರಮದಿಂದ ಇಂದು ಮಣಿಪುರದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಿದೆ’ ಎಂದು ಪಾಂಡೆ ಅಭಿಪ್ರಾಯಪಟ್ಟರು.</p>.<p>‘ಸೇನೆಯು ಉತ್ತರ ಗಡಿಯಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧ ಮತ್ತು ಸಮರ್ಥವಾಗಿದೆ. ಗಡಿ ಪ್ರದೇಶಗಳಲ್ಲಿ ಅತ್ಯಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಗಮನವನ್ನು ನೀಡಲಾಗಿದ್ದು, ಉತ್ತಮ ಪ್ರಗತಿಯನ್ನೂ ಸಾಧಿಸಲಾಗಿದೆ’ ಎಂದು ಜನರಲ್ ಮನೋಜ್ ಪಾಂಡೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಪೀರ್ ಪಂಜಾಲ್ ಮತ್ತು ರಜೌರಿ– ಪೂಂಛ್ ಪ್ರದೇಶಗಳಲ್ಲಿ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಾಗಿವೆ’ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸೋಮವಾರ ತಿಳಿಸಿದ್ದಾರೆ.</p>.<p>ಲಖನೌನಲ್ಲಿ ನಡೆದ 76ನೇ ಸೇನಾ ದಿನದ ಪರೇಡ್ನಲ್ಲಿ ಮಾತನಾಡಿದ ಅವರು, ‘ಭದ್ರತಾ ಪಡೆಗಳ ಸತತ ಪರಿಶ್ರಮದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ’ ಎಂದರು.</p>.<p>‘ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಕದನ ವಿರಾಮ ಇದೆ. ಆದರೆ, ದೇಶದ ಒಳಗೆ ಉಗ್ರರು ನುಸುಳುವ ಯತ್ನಗಳನ್ನು ಗಮನಿಸಿದಾಗ, ಗಡಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಡಿಮೆಯಾಗಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಅನೇಕ ಒಳನುಸುಳುವಿಕೆ ಸಂಚುಗಳನ್ನು ಸೇನೆ ವಿಫಲಗೊಳಿಸಿದೆ’ ಎಂದು ತಿಳಿಸಿದರು.</p>.<p>‘ಈಶಾನ್ಯ ಭಾರತದಲ್ಲಿ ಇತ್ತೀಚೆಗೆ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಶಾಂತಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಅಲ್ಲದೇ ಬಂಡುಕೋರ ಗುಂಪುಗಳೊಂದಿಗೆ ಶಾಂತಿ ಮಾತುಕತೆ ನಡೆಸಲಾಗಿದೆ. ಇದರ ಫಲವಾಗಿ ಆ ಪ್ರದೇಶದಲ್ಲಿ ಇಂದು ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಶಾಂತಿಯನ್ನು ಮರುಸ್ಥಾಪಿಸುವ ವಿಚಾರದಲ್ಲಿ ಭಾರತದ ಕ್ರಿಯಾಶೀಲ ನೀತಿಗಳು ಮಹತ್ವದ ಪಾತ್ರ ವಹಿಸುತ್ತವೆ. ಸರ್ಕಾರದ ನೀತಿ ಮತ್ತು ಸೇನೆಯ ಪರಿಶ್ರಮದಿಂದ ಇಂದು ಮಣಿಪುರದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಿದೆ’ ಎಂದು ಪಾಂಡೆ ಅಭಿಪ್ರಾಯಪಟ್ಟರು.</p>.<p>‘ಸೇನೆಯು ಉತ್ತರ ಗಡಿಯಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧ ಮತ್ತು ಸಮರ್ಥವಾಗಿದೆ. ಗಡಿ ಪ್ರದೇಶಗಳಲ್ಲಿ ಅತ್ಯಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಗಮನವನ್ನು ನೀಡಲಾಗಿದ್ದು, ಉತ್ತಮ ಪ್ರಗತಿಯನ್ನೂ ಸಾಧಿಸಲಾಗಿದೆ’ ಎಂದು ಜನರಲ್ ಮನೋಜ್ ಪಾಂಡೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>