<p><strong>ನವದೆಹಲಿ</strong>: ಭಾರತ ಮತ್ತು ಪಾಕಿಸ್ತಾನದ ನಡುವೆ ಶನಿವಾರ ಸಂಜೆಯಿಂದಲೇ ಕದನ ವಿರಾಮ ಜಾರಿಗೆ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದಾದ್ಯಂತ ರಾತ್ರಿಯಿಡಿ ಯಾವುದೇ ಡ್ರೋನ್, ಗುಂಡಿನ ದಾಳಿ ಅಥವಾ ಶೆಲ್ ದಾಳಿ ನಡೆದ ವರದಿಯಾಗಿಲ್ಲ ಎಂದು ಸುದ್ದಿಸಂಸ್ಥೆ ಎಎನ್ಐ ತಿಳಿಸಿದೆ.</p><p>ಜಮ್ಮು ನಗರ, ರಜೌರಿ, ಅಖ್ನೂರ್, ಪೂಂಚ್, ಪಠಾಣ್ಕೋಟ್ ಮತ್ತು ಫಿರೋಜ್ಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ದೈನಂದಿನ ಕೆಲಸದಲ್ಲಿ ಜನರು ತೊಡಗಿಕೊಂಡಿದ್ದಾರೆ.</p>.<p>ಅದಾಗ್ಯೂ, ಪಾಕಿಸ್ತಾನದ ಗಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬ್ಲ್ಯಾಕ್ಜೌಟ್ ಮುಂದುವರಿದಿದ್ದು, ಮನೆಯೊಳಗೆ ಇರುವಂತೆ ಜನರಿಗೆ ತಿಳಿಸಲಾಗಿದೆ. </p><p>‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ ಉಲ್ಬಣಗೊಂಡಿತ್ತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಈ ಸೇನಾ ಕಾರ್ಯಚರಣೆಯನ್ನು ಆರಂಭಿಸಿತ್ತು.</p>.<p>ಅಮೆರಿಕದ ಮಧ್ಯಸ್ಥಿತಿಕೆ ನಂತರ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಶಮನಗೊಂಡಿದ್ದು, ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಅದಾಗ್ಯೂ ಶನಿವಾರ ರಾತ್ರಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದ ಕೆಲ ಕಡೆ ದಾಳಿ ನಡೆಸಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ಮತ್ತು ಪಾಕಿಸ್ತಾನದ ನಡುವೆ ಶನಿವಾರ ಸಂಜೆಯಿಂದಲೇ ಕದನ ವಿರಾಮ ಜಾರಿಗೆ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದಾದ್ಯಂತ ರಾತ್ರಿಯಿಡಿ ಯಾವುದೇ ಡ್ರೋನ್, ಗುಂಡಿನ ದಾಳಿ ಅಥವಾ ಶೆಲ್ ದಾಳಿ ನಡೆದ ವರದಿಯಾಗಿಲ್ಲ ಎಂದು ಸುದ್ದಿಸಂಸ್ಥೆ ಎಎನ್ಐ ತಿಳಿಸಿದೆ.</p><p>ಜಮ್ಮು ನಗರ, ರಜೌರಿ, ಅಖ್ನೂರ್, ಪೂಂಚ್, ಪಠಾಣ್ಕೋಟ್ ಮತ್ತು ಫಿರೋಜ್ಪುರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ದೈನಂದಿನ ಕೆಲಸದಲ್ಲಿ ಜನರು ತೊಡಗಿಕೊಂಡಿದ್ದಾರೆ.</p>.<p>ಅದಾಗ್ಯೂ, ಪಾಕಿಸ್ತಾನದ ಗಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬ್ಲ್ಯಾಕ್ಜೌಟ್ ಮುಂದುವರಿದಿದ್ದು, ಮನೆಯೊಳಗೆ ಇರುವಂತೆ ಜನರಿಗೆ ತಿಳಿಸಲಾಗಿದೆ. </p><p>‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ ಉಲ್ಬಣಗೊಂಡಿತ್ತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಈ ಸೇನಾ ಕಾರ್ಯಚರಣೆಯನ್ನು ಆರಂಭಿಸಿತ್ತು.</p>.<p>ಅಮೆರಿಕದ ಮಧ್ಯಸ್ಥಿತಿಕೆ ನಂತರ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಶಮನಗೊಂಡಿದ್ದು, ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಅದಾಗ್ಯೂ ಶನಿವಾರ ರಾತ್ರಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದ ಕೆಲ ಕಡೆ ದಾಳಿ ನಡೆಸಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>