<p><strong>ಆಗ್ರಾ</strong>: ಯುಮುನಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಆರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸಿಕಂದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಇಡೀ ಗ್ರಾಮವನ್ನೇ ಶೋಕದಲ್ಲಿ ಮುಳುಗಿಸಿದೆ. </p><p>ಮೃತರನ್ನು ಮುಸ್ಕಾನ್ (18), ಶಿವಾನಿ (17), ನೈನಾ (14), ದಿವ್ಯಾ (13), ಸಂಧ್ಯಾ (12), ಮತ್ತು ಸೋನಮ್ (12) ಎಂದು ಗುರುತಿಸಲಾಗಿದೆ. ಎಲ್ಲರೂ ಹತ್ತಿರದ ಸಂಬಂಧಿಕರಾಗಿದ್ದಾರೆ.</p><p>‘ಮೊದಲಿಗೆ ನದಿಯ ದಡದಲ್ಲಿ ಆಟವಾಡುತ್ತಾ ವಿಡಿಯೊ ಮಾಡುತ್ತಿದ್ದ ಬಾಲಕಿಯರು ನಂತರ ನೀರಿನ ಆಳಕ್ಕೆ ಹೋಗಿದ್ದರು. ನೀರಿನ ಸೆಳೆತಕ್ಕೆ ಸಿಕ್ಕಿ ಮೃತಪಟ್ಟಿದ್ದಾರೆ’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. </p><p>‘ನದಿಯ ದಡದ ಬಳಿಯಿದ್ದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯರು, ಬಿಸಿಲ ತಾಪದಿಂದ ರಕ್ಷಿಸಿಕೊಳ್ಳಲು ನದಿಗೆ ಇಳಿದಿದ್ದರು. ಇಂತಹ ದುರ್ಘಟನೆ ಸಂಭವಿಸುತ್ತದೆ ಎಂದು ಗೊತ್ತಿದ್ದರೆ, ಅಲ್ಲಿಗೆ ಹೋಗುವುದು ಬೇಡ ಎನ್ನುತ್ತಿದ್ದೆ’ ಎಂದು ಸಂಬಂಧಿಕರೊಬ್ಬರು ಕಣ್ಣೀರು ಸುರಿಸಿದ್ದಾರೆ.</p><p>ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಸೋನಮ್ ಮತ್ತು ಮಸ್ಕಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಗ್ರಾ</strong>: ಯುಮುನಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಆರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸಿಕಂದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಇಡೀ ಗ್ರಾಮವನ್ನೇ ಶೋಕದಲ್ಲಿ ಮುಳುಗಿಸಿದೆ. </p><p>ಮೃತರನ್ನು ಮುಸ್ಕಾನ್ (18), ಶಿವಾನಿ (17), ನೈನಾ (14), ದಿವ್ಯಾ (13), ಸಂಧ್ಯಾ (12), ಮತ್ತು ಸೋನಮ್ (12) ಎಂದು ಗುರುತಿಸಲಾಗಿದೆ. ಎಲ್ಲರೂ ಹತ್ತಿರದ ಸಂಬಂಧಿಕರಾಗಿದ್ದಾರೆ.</p><p>‘ಮೊದಲಿಗೆ ನದಿಯ ದಡದಲ್ಲಿ ಆಟವಾಡುತ್ತಾ ವಿಡಿಯೊ ಮಾಡುತ್ತಿದ್ದ ಬಾಲಕಿಯರು ನಂತರ ನೀರಿನ ಆಳಕ್ಕೆ ಹೋಗಿದ್ದರು. ನೀರಿನ ಸೆಳೆತಕ್ಕೆ ಸಿಕ್ಕಿ ಮೃತಪಟ್ಟಿದ್ದಾರೆ’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. </p><p>‘ನದಿಯ ದಡದ ಬಳಿಯಿದ್ದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯರು, ಬಿಸಿಲ ತಾಪದಿಂದ ರಕ್ಷಿಸಿಕೊಳ್ಳಲು ನದಿಗೆ ಇಳಿದಿದ್ದರು. ಇಂತಹ ದುರ್ಘಟನೆ ಸಂಭವಿಸುತ್ತದೆ ಎಂದು ಗೊತ್ತಿದ್ದರೆ, ಅಲ್ಲಿಗೆ ಹೋಗುವುದು ಬೇಡ ಎನ್ನುತ್ತಿದ್ದೆ’ ಎಂದು ಸಂಬಂಧಿಕರೊಬ್ಬರು ಕಣ್ಣೀರು ಸುರಿಸಿದ್ದಾರೆ.</p><p>ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಸೋನಮ್ ಮತ್ತು ಮಸ್ಕಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>