<p><strong>ಪೂರ್ವ ಚಂಪಾರಣ್ (ಬಿಹಾರ):</strong> ಇಲ್ಲಿನ ದೊಡ್ಡ ನೀರಿನ ಗುಂಡಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಆರು ಮಕ್ಕಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p><p>ಜಿಲ್ಲೆಯ ಕೇಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ. ಮೃತರನ್ನು ದೀಕ್ಷಾ ಕುಮಾರಿ (12), ಸೋನಾಕ್ಷಿ ಕುಮಾರಿ (9), ಪ್ರಿಯಾ ಕುಮಾರಿ (7), ಆರಾಧ್ಯಾ ಕುಮಾರಿ (11), ಛೋಟಿ ಕುಮಾರಿ (8) ಮತ್ತು ಪ್ರಿನ್ಸ್ ಕುಮಾರ್ (11) ಎಂದು ಗುರುತಿಸಲಾಗಿದೆ.</p><p>ಬಾಲಕಿಯೊಬ್ಬಳ್ಳು ಸ್ನಾನ ಮಾಡಲು ನೀರಿನ ಗುಂಡಿಗೆ ಇಳಿದಾಗ ಕಾಲು ಜಾರಿ ಮುಳುಗಿದ್ದಾಳೆ. ಅವಳನ್ನು ರಕ್ಷಿಸಲು ಉಳಿದವರು ನೀರಿಗೆ ಜಿಗಿದ್ದು ಅವರೂ ಸಹ ಮೃತಪಟ್ಟಿದ್ದಾರೆ. ಯಾರಿಗೂ ಈಜು ಬರುತ್ತಿರಲಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.</p><p>ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಪೋಷಕರಿಗೆ ಮೃತದೇಹಗಳನ್ನು ಒಪ್ಪಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೂರ್ವ ಚಂಪಾರಣ್ (ಬಿಹಾರ):</strong> ಇಲ್ಲಿನ ದೊಡ್ಡ ನೀರಿನ ಗುಂಡಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಆರು ಮಕ್ಕಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p><p>ಜಿಲ್ಲೆಯ ಕೇಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ. ಮೃತರನ್ನು ದೀಕ್ಷಾ ಕುಮಾರಿ (12), ಸೋನಾಕ್ಷಿ ಕುಮಾರಿ (9), ಪ್ರಿಯಾ ಕುಮಾರಿ (7), ಆರಾಧ್ಯಾ ಕುಮಾರಿ (11), ಛೋಟಿ ಕುಮಾರಿ (8) ಮತ್ತು ಪ್ರಿನ್ಸ್ ಕುಮಾರ್ (11) ಎಂದು ಗುರುತಿಸಲಾಗಿದೆ.</p><p>ಬಾಲಕಿಯೊಬ್ಬಳ್ಳು ಸ್ನಾನ ಮಾಡಲು ನೀರಿನ ಗುಂಡಿಗೆ ಇಳಿದಾಗ ಕಾಲು ಜಾರಿ ಮುಳುಗಿದ್ದಾಳೆ. ಅವಳನ್ನು ರಕ್ಷಿಸಲು ಉಳಿದವರು ನೀರಿಗೆ ಜಿಗಿದ್ದು ಅವರೂ ಸಹ ಮೃತಪಟ್ಟಿದ್ದಾರೆ. ಯಾರಿಗೂ ಈಜು ಬರುತ್ತಿರಲಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.</p><p>ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಪೋಷಕರಿಗೆ ಮೃತದೇಹಗಳನ್ನು ಒಪ್ಪಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>