<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿನ ಯುದ್ಧದಲ್ಲಿ ಸಂಭವಿಸಿದ ವಿವಿಧ ಘಟನೆಗಳಲ್ಲಿ ಆರು ಮಂದಿ ಭಾರತೀಯರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ತಿಳಿಸಿದೆ.</p>.<p>‘ಬುಧವಾರ ರಿಯಾದ್ ಮೇಲೆ ನಡೆದ ದಾಳಿಯಲ್ಲಿ ಭಾರತೀಯರೊಬ್ಬರು ಮೃತಪಟ್ಟಿರುವ ಬಗ್ಗೆ ಕಳೆದ ರಾತ್ರಿ ಮಾಹಿತಿ ಸಿಕ್ಕಿದೆ’ ಎಂದು ವಿದೇಶಾಂಗ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ(ಕೊಲ್ಲಿ ರಾಷ್ಟ್ರ) ಅಸೀಮ್ ಆರ್.ಮಹಾಜನ್ ಅವರು ತಿಳಿಸಿದ್ದಾರೆ. ಆದರೆ ಅವರು ಘಟನೆಯ ಬಗ್ಗೆ ಪೂರ್ಣ ಮಾಹಿತಿ ನೀಡಿಲ್ಲ</p>.<p>‘ನಾಪತ್ತೆಯಾದ ಭಾರತೀಯರ ಪತ್ತೆಗೆ ಮತ್ತು ಮೃತರ ಶವಗಳನ್ನು ಭಾರತಕ್ಕೆ ಶೀಘ್ರದಲ್ಲಿ ಕಳುಹಿಸುವ ಪ್ರಕ್ರಿಯೆ ಬಗ್ಗೆ ಸೌದಿ ಅರೇಬಿಯಾ, ಒಮನ್, ಇರಾಕ್ ಮತ್ತು ಯುಎಇಯಲ್ಲಿರುವ ನಮ್ಮ ರಾಯಭಾರಿಗಳು ಅಲ್ಲಿನ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ’ ಎಂದು ಮಹಾಜನ್ ತಿಳಿಸಿದ್ದಾರೆ.</p>.<p>‘ಫೆಬ್ರುವರಿ 28ರಿಂದ ಈವರೆಗೆ ಪಶ್ಚಿಮ ಏಷ್ಯಾದಿಂದ ಮೂರು ಲಕ್ಷ ಜನರು ಭಾರತಕ್ಕೆ ವಾಪಸ್ ಆಗಿದ್ದಾರೆ’ ಎಂದು ಮಹಾಜನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿನ ಯುದ್ಧದಲ್ಲಿ ಸಂಭವಿಸಿದ ವಿವಿಧ ಘಟನೆಗಳಲ್ಲಿ ಆರು ಮಂದಿ ಭಾರತೀಯರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ತಿಳಿಸಿದೆ.</p>.<p>‘ಬುಧವಾರ ರಿಯಾದ್ ಮೇಲೆ ನಡೆದ ದಾಳಿಯಲ್ಲಿ ಭಾರತೀಯರೊಬ್ಬರು ಮೃತಪಟ್ಟಿರುವ ಬಗ್ಗೆ ಕಳೆದ ರಾತ್ರಿ ಮಾಹಿತಿ ಸಿಕ್ಕಿದೆ’ ಎಂದು ವಿದೇಶಾಂಗ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ(ಕೊಲ್ಲಿ ರಾಷ್ಟ್ರ) ಅಸೀಮ್ ಆರ್.ಮಹಾಜನ್ ಅವರು ತಿಳಿಸಿದ್ದಾರೆ. ಆದರೆ ಅವರು ಘಟನೆಯ ಬಗ್ಗೆ ಪೂರ್ಣ ಮಾಹಿತಿ ನೀಡಿಲ್ಲ</p>.<p>‘ನಾಪತ್ತೆಯಾದ ಭಾರತೀಯರ ಪತ್ತೆಗೆ ಮತ್ತು ಮೃತರ ಶವಗಳನ್ನು ಭಾರತಕ್ಕೆ ಶೀಘ್ರದಲ್ಲಿ ಕಳುಹಿಸುವ ಪ್ರಕ್ರಿಯೆ ಬಗ್ಗೆ ಸೌದಿ ಅರೇಬಿಯಾ, ಒಮನ್, ಇರಾಕ್ ಮತ್ತು ಯುಎಇಯಲ್ಲಿರುವ ನಮ್ಮ ರಾಯಭಾರಿಗಳು ಅಲ್ಲಿನ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ’ ಎಂದು ಮಹಾಜನ್ ತಿಳಿಸಿದ್ದಾರೆ.</p>.<p>‘ಫೆಬ್ರುವರಿ 28ರಿಂದ ಈವರೆಗೆ ಪಶ್ಚಿಮ ಏಷ್ಯಾದಿಂದ ಮೂರು ಲಕ್ಷ ಜನರು ಭಾರತಕ್ಕೆ ವಾಪಸ್ ಆಗಿದ್ದಾರೆ’ ಎಂದು ಮಹಾಜನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>