ಪ್ರಕರಣದ ಹಿನ್ನೆಲೆ:
ಕೌಶಲ ಅಭಿವೃದ್ಧಿ ನಿಗಮದ ಹಣಕಾಸು ಹಗರಣದ ಪ್ರಕರಣದಲ್ಲಿ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ಸಿಐಡಿ, ಸೆಪ್ಟೆಂಬರ್ 9 ರಂದು ಬಂಧಿಸಿ ರಾಜಮಂಡ್ರಿ ಜೈಲಿಗೆ ಕಳುಹಿಸಿತ್ತು.
‘ನಾಯ್ಡು ಸಿಎಂ ಆಗಿದ್ದಾಗ ಆಂಧ್ರಪ್ರದೇಶದಾದ್ಯಂತ ಕೌಶಲ ಕೇಂದ್ರಗಳನ್ನು ತೆರೆಯುವಲ್ಲಿ ನಿಗಮಕ್ಕೆ ಬಿಡುಗಡೆಯಾಗಿದ್ದ ಸುಮಾರು ₹3,300 ಕೋಟಿ ಹಣದಲ್ಲಿ ನಾಯ್ಡು ಅವರಿಂದ ಸರ್ಕಾರಕ್ಕೆ ₹370ಕೋಟಿ ವಂಚನೆ ಆಗಿದೆ’ ಎಂಬ ಆರೋಪದ ಮೇಲೆ ಸಿಐಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ನಾಯ್ಡು 3ನೇ ಆರೋಪಿಯಾಗಿದ್ದಾರೆ.