<p><strong>ನವದೆಹಲಿ</strong>: ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆಯನ್ನು ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ನೀಡಿರುವುದನ್ನು ಖಂಡಿಸಿ ಬುಧವಾರ ರಾಷ್ಟ್ರ ರಾಜಧಾನಿಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.</p><p>2017ರಲ್ಲಿ ಮಧ್ಯಪ್ರದೇಶದಲ್ಲಿ 6 ರೈತರ ಹತ್ಯೆಗೆ ಜವಾಬ್ದಾರರಾಗಿರುವ ಶಿವರಾಜ್ ಸಿಂಗ್ ಅವರನ್ನು ಆ ಖಾತೆಯಿಂದ ಮುಕ್ತಗೊಳಿಸುವಂತೆ ಆಗ್ರಹಿಸಿದರು.</p><p>ರೈತರ ಆತ್ಮಹತ್ಯೆ ಪರಿಹಾರ, ಸ್ವಾಮಿನಾಥನ್ ಆಯೋಗದ ವರದಿ ಅನ್ವಯ ಎಂಎಸ್ಪಿ, ಸಮಗ್ರ ಕೃಷಿ ಸಾಲ ಮನ್ನಾಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಹತ್ಯೆ ಮಾಡಲಾಗಿತ್ತು ಎಂದು ಎಸ್ಕೆಎಂ ಪ್ರಕಟಣೆಯಲ್ಲಿ ತಿಳಿಸಿದೆ.</p> <p>ಎಸ್ಕೆಎಂ ಸಾಮಾನ್ಯ ಸಭೆಯು ಜುಲೈ 10ರಂದು ನಡೆಯಲಿದ್ದು, ದೇಶದ ಎಲ್ಲ ರೈತ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದೆ. ಅಲ್ಲಿ ಹೋರಾಟದ ಮುಂದಿನ ಹಾದಿ ನಿರ್ಧರಿಸಲಾಗುವುದು ಎಂದು ಹೇಳಿದೆ.</p><p>‘2014 ಮತ್ತು 2019ರ ನಡುವಿನ ಬಿಜೆಪಿ ಆಡಳಿತಾವಧಿಯಲ್ಲಿ ರೈತರ ಕುರಿತಾಗಿ ಕೈಗೊಂಡ ನಿರ್ಧಾರ ಅತ್ಯಂತ ದುರಹಂಕಾರ ಮತ್ತು ಸೂಕ್ಷ್ಮಹೀನ ನಿರ್ಧಾರಗಳಾಗಿವೆ. ರೈತರು ಮತ್ತು ಗ್ರಾಮೀಣ ಜನರ ಮೇಲೆ ಸರ್ಕಾರ ಅತ್ಯಂತ ಕ್ರೂರವಾಗಿ ನಡೆದುಕೊಂಡಿದೆ’ ಎಂದೂ ಅದು ದೂರಿದೆ.</p><p>2017ರ ಜೂನ್ ತಿಂಗಳಲ್ಲಿ ಮಧ್ಯಪ್ರದೇಶದ ಮಂಡ್ಸೌರ್ನಲ್ಲಿ ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು ರೈತರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ 6 ಮಂದಿ ರೈತರು ಮೃತಪಟ್ಟಿದ್ದರು.</p><p>ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೋದಿ ಸರ್ಕಾರವು ತನ್ನ ಮೊದಲ ಸಂಪುಟ ಸಭೆಯಲ್ಲಿ ಕೃಷಿ ಸಮಸ್ಯೆಗಳು, ರೈತರ ಆತ್ಮಹತ್ಯೆ ಮತ್ತು ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಎಂಎಸ್ಪಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರೈತರ ಒಕ್ಕೂಟ ಕಿಡಿಕಾರಿದೆ.</p> .ಮೋದಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆಯನ್ನು ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ನೀಡಿರುವುದನ್ನು ಖಂಡಿಸಿ ಬುಧವಾರ ರಾಷ್ಟ್ರ ರಾಜಧಾನಿಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದರು.</p><p>2017ರಲ್ಲಿ ಮಧ್ಯಪ್ರದೇಶದಲ್ಲಿ 6 ರೈತರ ಹತ್ಯೆಗೆ ಜವಾಬ್ದಾರರಾಗಿರುವ ಶಿವರಾಜ್ ಸಿಂಗ್ ಅವರನ್ನು ಆ ಖಾತೆಯಿಂದ ಮುಕ್ತಗೊಳಿಸುವಂತೆ ಆಗ್ರಹಿಸಿದರು.</p><p>ರೈತರ ಆತ್ಮಹತ್ಯೆ ಪರಿಹಾರ, ಸ್ವಾಮಿನಾಥನ್ ಆಯೋಗದ ವರದಿ ಅನ್ವಯ ಎಂಎಸ್ಪಿ, ಸಮಗ್ರ ಕೃಷಿ ಸಾಲ ಮನ್ನಾಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಹತ್ಯೆ ಮಾಡಲಾಗಿತ್ತು ಎಂದು ಎಸ್ಕೆಎಂ ಪ್ರಕಟಣೆಯಲ್ಲಿ ತಿಳಿಸಿದೆ.</p> <p>ಎಸ್ಕೆಎಂ ಸಾಮಾನ್ಯ ಸಭೆಯು ಜುಲೈ 10ರಂದು ನಡೆಯಲಿದ್ದು, ದೇಶದ ಎಲ್ಲ ರೈತ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದೆ. ಅಲ್ಲಿ ಹೋರಾಟದ ಮುಂದಿನ ಹಾದಿ ನಿರ್ಧರಿಸಲಾಗುವುದು ಎಂದು ಹೇಳಿದೆ.</p><p>‘2014 ಮತ್ತು 2019ರ ನಡುವಿನ ಬಿಜೆಪಿ ಆಡಳಿತಾವಧಿಯಲ್ಲಿ ರೈತರ ಕುರಿತಾಗಿ ಕೈಗೊಂಡ ನಿರ್ಧಾರ ಅತ್ಯಂತ ದುರಹಂಕಾರ ಮತ್ತು ಸೂಕ್ಷ್ಮಹೀನ ನಿರ್ಧಾರಗಳಾಗಿವೆ. ರೈತರು ಮತ್ತು ಗ್ರಾಮೀಣ ಜನರ ಮೇಲೆ ಸರ್ಕಾರ ಅತ್ಯಂತ ಕ್ರೂರವಾಗಿ ನಡೆದುಕೊಂಡಿದೆ’ ಎಂದೂ ಅದು ದೂರಿದೆ.</p><p>2017ರ ಜೂನ್ ತಿಂಗಳಲ್ಲಿ ಮಧ್ಯಪ್ರದೇಶದ ಮಂಡ್ಸೌರ್ನಲ್ಲಿ ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು ರೈತರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ 6 ಮಂದಿ ರೈತರು ಮೃತಪಟ್ಟಿದ್ದರು.</p><p>ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೋದಿ ಸರ್ಕಾರವು ತನ್ನ ಮೊದಲ ಸಂಪುಟ ಸಭೆಯಲ್ಲಿ ಕೃಷಿ ಸಮಸ್ಯೆಗಳು, ರೈತರ ಆತ್ಮಹತ್ಯೆ ಮತ್ತು ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಎಂಎಸ್ಪಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರೈತರ ಒಕ್ಕೂಟ ಕಿಡಿಕಾರಿದೆ.</p> .ಮೋದಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>