ನವದೆಹಲಿ: ಚೌಧರಿ ಚರಣ್ಸಿಂಗ್ ಮತ್ತು ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಿಸಿರುವುದನ್ನು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಶನಿವಾರ ಸ್ವಾಗತಿಸಿದೆ. ಆದರೆ, ಇದು ಸ್ವಾಮಿನಾಥನ್ ಸಮಿತಿ ಶಿಫಾರಸು ಮಾಡಿದಂತೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಸರ್ಕಾರದ ವೈಫಲ್ಯದಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವ ಪ್ರಯತ್ನವಾಗಿದೆ ಎಂದು ಎಸ್ಕೆಎಂ ಟೀಕಿಸಿದೆ.