<p><strong>ತಿರುವನಂತಪುರ:</strong> ಸ್ಮಾರ್ಟ್ ಕನ್ನಡಕ ಧರಿಸಿ ಶ್ರೀ ಪದ್ಮನಾಭಸ್ವಾಮಿ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ ಗುಜರಾತ್ ಮೂಲದ ವ್ಯಕ್ತಿಯನ್ನು ಇಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವಾಲಯದಲ್ಲಿ ಕ್ಯಾಮೆರಾ ಹೊಂದಿದ ಕನ್ನಡಕದಂತಹ ಸಾಧನಗಳನ್ನು ನಿಷೇಧಿಸಲಾಗಿದೆ.</p>.<p>ಅರೋಪಿ ಸುರೇಂದ್ರ ಶಾ (66) ಅವರನ್ನು ಭಾನುವಾರ ಸಂಜೆ ದೇವಾಲಯದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದರು. ‘ಮುಖ್ಯದ್ವಾರದ ಮೂಲಕ ಪ್ರವೇಶಿಸಿದ್ದ ಆರೋಪಿಯನ್ನು ಸಂಶಯಗೊಂಡ ಭದ್ರತಾ ಸಿಬ್ಬಂದಿ ತಪಾಸನೆ ನಡೆಸಿದ್ದರು. ಈ ವೇಳೆ ಅವರ ಕನ್ನಡಕದಲ್ಲಿ ರಹಸ್ಯ ಕ್ಯಾಮೆರಾ ಇರುವುದು ಪತ್ತೆಯಾಗಿತ್ತು’ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.</p>.<p>‘ನಂತರ ಅವರನ್ನು ದೇವಾಲಯದಿಂದ ಹೊರಗೆ ಕರೆದೊಯ್ಯಲಾಯಿತು ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯಾವುದೇ ದುರುದ್ದೇಶ ಶಂಕಿಸಲಾಗಿಲ್ಲವಾದರೂ, ವಿವರವಾದ ತನಿಖೆ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ನೋಟಿಸ್ ನೀಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಸ್ಮಾರ್ಟ್ ಕನ್ನಡಕ ಧರಿಸಿ ಶ್ರೀ ಪದ್ಮನಾಭಸ್ವಾಮಿ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ ಗುಜರಾತ್ ಮೂಲದ ವ್ಯಕ್ತಿಯನ್ನು ಇಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವಾಲಯದಲ್ಲಿ ಕ್ಯಾಮೆರಾ ಹೊಂದಿದ ಕನ್ನಡಕದಂತಹ ಸಾಧನಗಳನ್ನು ನಿಷೇಧಿಸಲಾಗಿದೆ.</p>.<p>ಅರೋಪಿ ಸುರೇಂದ್ರ ಶಾ (66) ಅವರನ್ನು ಭಾನುವಾರ ಸಂಜೆ ದೇವಾಲಯದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದರು. ‘ಮುಖ್ಯದ್ವಾರದ ಮೂಲಕ ಪ್ರವೇಶಿಸಿದ್ದ ಆರೋಪಿಯನ್ನು ಸಂಶಯಗೊಂಡ ಭದ್ರತಾ ಸಿಬ್ಬಂದಿ ತಪಾಸನೆ ನಡೆಸಿದ್ದರು. ಈ ವೇಳೆ ಅವರ ಕನ್ನಡಕದಲ್ಲಿ ರಹಸ್ಯ ಕ್ಯಾಮೆರಾ ಇರುವುದು ಪತ್ತೆಯಾಗಿತ್ತು’ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.</p>.<p>‘ನಂತರ ಅವರನ್ನು ದೇವಾಲಯದಿಂದ ಹೊರಗೆ ಕರೆದೊಯ್ಯಲಾಯಿತು ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯಾವುದೇ ದುರುದ್ದೇಶ ಶಂಕಿಸಲಾಗಿಲ್ಲವಾದರೂ, ವಿವರವಾದ ತನಿಖೆ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ನೋಟಿಸ್ ನೀಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>