ನಿಪುಣ್ ಮಲ್ಹೋತ್ರ ಅವರಿಗೆ ತಮ್ಮ ಮನೆಯಲ್ಲಿ ಮಧ್ಯರಾತ್ರಿ ಏನೋ ತೆವಳಿಕೊಂಡು ಹೋಗುತ್ತಿರುವಂತೆ ಭಾಸವಾಗಿದೆ. ಬಳಿಕ ಮನೆಯಲ್ಲಿದ್ದವರೆಲ್ಲ ಎದ್ದು ನೋಡಿದರೆ ಅಚ್ಚರಿ ಕಾದಿತ್ತು. ದೊಡ್ಡ ನಾಗರಹಾವು ಅಲ್ಲಿತ್ತು. ತಕ್ಷಣವೇ ನೆರವಿಗಾಗಿ ಮಲ್ಹೋತ್ರ, ಅರಣ್ಯ ಮತ್ತು ವನ್ಯಜೀವಿ ಇಲಾಖೆಗೆ ಕರೆ ಮಾಡಿದರು. ಆದರೆ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ತಕ್ಷಣ ಅವರು ಮುಖ್ಯಮಂತ್ರಿಗೆ ಕರೆ ಮಾಡಿದರು. ಕರೆ ಸ್ವೀಕರಿಸಿದ ಠಾಕೂರ್, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮಂಡಿ ಜಿಲ್ಲಾಧಿಕಾರಿಗೆ ಕರೆ ಮಾಡಿದ ಅವರು, ಆತಂಕದಲ್ಲಿರುವ ಕುಟುಂಬದ ನೆರವಿಗೆ ಧಾವಿಸುವಂತೆ ತಿಳಿಸಿದರು.