ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಬರ ಮತ್ತು ಹವಾಮಾನ ಬದಲಾವಣೆಯ ಪರಿಣಾಮವಾಗಿ ಅಕ್ಕಿ ಮತ್ತು ಗೋಧಿಯ ಉತ್ಪಾದನೆಯಲ್ಲಿ ಕುಸಿತವಾಗಿದೆ ಎಂಬ ತಪ್ಪು ಕಲ್ಪನೆ ಹರಡಿದ್ದರೂ ಸಹ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಮತ್ತು ಪಿಎಂಜಿಕೆಎವೈಯಂತಹ ಕಲ್ಯಾಣ ಯೋಜನೆಗಳಿಗೆ ಆಹಾರ ಧಾನ್ಯಗಳ ಖರೀದಿಯು ಸುಗಮವಾಗಿ ನಡೆಯುತ್ತಿದೆ ಎಂದು ಸಚಿವೆ ಹೇಳಿದರು.
ಆಧುನಿಕ ತಂತ್ರಜ್ಞಾನ ಮೂಲಕ ಪಿಡಿಎಸ್ ವ್ಯವಸ್ಥೆಯನ್ನು ಸುಧಾರಿಸಲು ತೆಗೆದುಕೊಂಡ ಕ್ರಮಗಳ ಕುರಿತು ವಿವರಿಸಿದ ಅವರು, ಇದರಿಂದಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಗಾಗಿ ಸಂಗ್ರಹಿಸಲಾಗುವ ಆಹಾರ ಧಾನ್ಯಗಳು ಹಾಳಾಗುವುದನ್ನು, ವ್ಯರ್ಥವಾಗುವುದನ್ನು ತಡೆಯಲು ಮತ್ತು ಸೋರಿಕೆಯನ್ನು ನಿಯಂತ್ರಿಸಲು ಸಾಧ್ಯವಾಗುವುದರ ಜೊತೆಗೆ ರೈತರಿಗೆ ಡಿ.ಬಿ.ಟಿ (ನೇರ ಲಾಭ ವರ್ಗಾವಣೆ) ವಿಧಾನದ ಮೂಲಕ ಸಂಗ್ರಹಿಸಿದ ಧಾನ್ಯಗಳಿಗೆ ಬೆಂಬಲ ಬೆಲೆಯನ್ನು ಪಾವತಿಸಲು ಸಾಧ್ಯವಾಗುತ್ತಿದೆ ಎಂದರು.